ಅವನತಿಯತ್ತ ಸಾಗಿದೆ ವೆಂಗಯ್ಯನ ಕೆರೆ


Team Udayavani, Jun 9, 2019, 3:05 AM IST

avanati

ಕೆ.ಆರ್‌.ಪುರ: ಒಂದೊಮ್ಮೆ ಪ್ರವಾಸಿಗರನ್ನು ಕೈಬಿಸಿ ತನ್ನತ್ತ ಕರೆಯುತ್ತಿದ್ದ ಕೃಷ್ಣರಾಜಪುರದ ಹಗಲು ಕನಸಿನ ವ್ಯಂಗಯ್ಯನ ಕೆರೆ, ಕಲುಷಿತ ನೀರು ಸೇರ್ಪಡೆ ಮತ್ತು ನಿರ್ವಹಣೆಯಿಲ್ಲದೆ ಅವನತಿಯತ್ತ ಸಾಗಿದೆ.

ಕೆ.ಆರ್‌.ಪುರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕ ಇರುವ ವೆಂಗಯ್ಯನ ಕೆರೆ, ಹಿಂದೆ ಪರಿಸರ ಪ್ರೇಮಿಗಳ ನೆಚ್ಚಿನ ಪ್ರವಾಸಿ ತಾಣವಾಗಿತ್ತು. ವಾರಾಂತ್ಯದ ದಿನಗಳು ಹಾಗೂ ರಜೆ ದಿನಗಳಂದು ಕೆ.ಆರ್‌.ಪುರ ಸುತ್ತಮುತ್ತಲ ಪ್ರದೇಶಗಳು, ಬೆಂಗಳೂರಿನ ವಿವಿಧ ಭಾಗಗಳ ಜನ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಕೆರೆಗೆ ಬಂದು, ಕೆರೆ ಅಂಗಳದಲ್ಲಿ ಕೂರು ಸಂತೋಷದಿಂದ ಸಮಯ ಕಳೆಯುತ್ತಿದ್ದರು.

ಕಾಲ ಕ್ರಮೇಣ ಕೆರೆ ಸುತ್ತಲ ಪ್ರದೇಶದಲ್ಲಿ ಜನವಸತಿ ಪ್ರದೇಶಗಳು ಅಭಿವೃದ್ಧಿ ಹೊಂದಿದವು. ಬಡಾವಣೆಯ ಮನೆಗಳು, ಅಪಾರ್ಟ್‌ಮೆಂಟ್‌ಗಳ ತ್ಯಾಜ್ಯ ನೀರು (ಡ್ರೈನೇಜ್‌ ನೀರು) ರಾಜಕಾಲುವೆಗಳ ಮೂಲಕ ಕೆರೆ ಸೇರಲಾರಂಭಿಸಿತು. ಕೊಳಚೆ ನೀರನ್ನು ಒಡಲೊಳಗೆ ತುಂಬಿಕೊಂಡ ಕೆರೆಯಿಂದ ಕ್ರಮೇಣ ದುರ್ವಾಸನೆ ಹೊಮ್ಮತೊಡಗಿತು.

ಹಾಗೇ ಜನ ಕೂಡ ಕೆರೆಯಿಂದ ದೂರಾಗತೊಡಗಿದರು. ಆದರೆ ಡ್ರೈನೇಜ್‌ ನೀರನ್ನು ಕೆರೆಗೆ ಹರಿಸಿದ್ದನ್ನು ಯಾರೂ ಪ್ರಶ್ನಿಸಲಿಲ್ಲ. ಅಧಿಕಾರಿಗಳಂತೂ ಅತ್ತ ತಿರುಗಿ ಕೂಡ ನೋಡಲಿಲ್ಲ. ಈ ನಡುವೆ ಕೆರೆಯನ್ನು ಅಭಿವೃದ್ಧಿಪಡಿಸಿ ಮತ್ತೂಮ್ಮೆ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 2000 ದಲ್ಲಿ ಸಂಸ್ಥೆಯೊಂದಕ್ಕೆ 20 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಯಿತು.

ಆದರೆ, ಗುತ್ತಿಗೆ ಅವಧಿ ಮುಗಿಯುವ ಮುನ್ನವೇ ಆ ಸಂಸ್ಥೆ, ಕೆರೆ ನಿರ್ವಹಣೆಯಿಂದ ಹಿಂದೆ ಸರಿಯಿತು. ಕೆರೆ ಮಧ್ಯೆ ದ್ವೀಪ ನಿರ್ಮಿಸಿ, ವಾಕಿಂಗ್‌ ಟ್ರ್ಯಾಕ್‌, ಮಕ್ಕಳ ಆಟಿಕೆ, ದೋಣಿ ವಿಹಾರ ವ್ಯವಸ್ಥೆ ಮಾಡಲಾಗಿತ್ತು. ಆದರೆ, 65 ಎಕರೆ ವಿಸ್ತಿರ್ಣದ ವೆಂಗಯ್ಯನ ಕೆರೆ ಕೊಳಕು ನೀರಿನಿಂದ ತುಂಬಿ, ಜೊಂಡು ಆವರಿಸಿಕೊಂಡು, ಕೆರೆ ನೀರಿನ ಬಣ್ಣ ಕಡುಗಪ್ಪು ಬಣ್ಣಕ್ಕೆ ತಿರುಗಿದ ನಂತರ ದೋಣಿ ವಿಹಾರ ಸ್ಥಗಿತಗೊಂಡಿದೆ. ನೀರು ಕಲುಷಿತಗೊಂಡಿದ್ದರಿಂದ ಮತ್ತು ಆಮ್ಲಜನಕದ ಕೊರತೆಯಿಂದ ಜಲಚರಗಳು ಮೃತಪಟ್ಟಿದೆ.

ಕೆರೆಯ ಪಶ್ಚಿಮ ಭಾಗದಲ್ಲಿ ರಾಮಮೂರ್ತಿನಗರ, ಲಕ್ಷ್ಮಣಮೂರ್ತಿನಗರ, ಕೌದೇನಹಳ್ಳಿ ಭಾಗದ ಚರಂಡಿ ಕೊಳೆಚೆ ನೀರು ಸೇರ್ಪಡೆಯಾದರೆ, ಕೆ.ಆರ್‌.ಪುರದ ಬಡಾವಣೆಗಳ ಕೊಳಚೆ ನೀರು ದಕ್ಷಿಣ ಭಾಗದಲ್ಲಿ ಕೆರೆ ಸೇರುತ್ತದೆ. ಇನ್ನು ಕೆರೆಯ ಪಶ್ಚಿಮ ಭಾಗದಲ್ಲಿ 20 ಎಂಎಲ್‌ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕವಿದ್ದರೂ ಪ್ರಯೋಜನವಾಗುತ್ತಿಲ್ಲ.

ಪ್ರಸುತ್ತ ನಿರ್ವಹಣೆ ಹೊಣೆ ಹೊತ್ತಿರುವ ಅರಣ್ಯ ಇಲಾಖೆ, ಕೆರೆ ಅಭಿವೃದ್ಧಿಗೆ ಹಣವಿಲ್ಲ ಎನ್ನುತ್ತಿದೆ. ಆದರೆ, ಕೆರೆ ಕಲುಷಿತಗೊಳ್ಳಲು ಮತ್ತು ಕೆರೆ ಆವರಣ ಅನೈತಿಕ ಚಟುವಟಿಕೆಗಳ ತಾಣವಾಗಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಸಾರ್ವಜನಿಕರ ಆರೋಪ.

ಕೆಲವರು ರಾತ್ರೋರಾತ್ರಿ ಕಟ್ಟಡ ತ್ಯಾಜ್ಯ ತಂದು ಕೆರೆಗೆ ಸುರಿಯುತ್ತಿದ್ದಾರೆ. ಕೆ.ಆರ್‌.ಪುರ ಸುತ್ತಮುತ್ತ ಸಂಗ್ರಹವಾಗುವ ಕಸವನ್ನು ಕೆರೆ ಅಂಗಳದಲ್ಲಿ ಬೇರ್ಪಡಿಸಿ ನಂತರ ಕಸಕ್ಕೆ ಬೆಂಕಿ ಇಡುತ್ತಾರೆ. ಇದರಿಂದ ಕೆರೆ ಮತ್ತಷ್ಟು ಮಲಿನಗೊಂಡಿದೆ. ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕೆರೆ ಕಣ್ಮರೆಯಾಗುತ್ತಿದೆ.
-ಲಕ್ಷ್ಮಣ, ರತ್ನ ಭಾರತ ರೈತ ಸಮಾಜದ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.