ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದವನ ಸೆರೆ
Team Udayavani, Jun 9, 2018, 11:59 AM IST
ಬೆಂಗಳೂರು: ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಲಕ್ಷಾಂತರ ರೂ. ವಂಚಿಸಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಫ್ರಾನ್ ಪಾಷಾ(30) ಬಂಧಿತ.
ರೆಸಿಡೆನ್ಸಿ ರಸ್ತೆಯಲ್ಲಿ ಎಸ್ಒಎಸ್ ಹೆಸರಿನ ಕಚೇರಿ ಹೊಂದಿದ್ದ ಇಫ್ರಾನ್ ಪಾಷಾ, ಟೆಲಿಕಾಲರ್ಗಳು ಬೇಕಾಗಿದ್ದಾರೆ ಎಂದು ಜಾಹಿರಾತುಗಳನ್ನು ನೀಡುತ್ತಿದ್ದ. ಜತೆಗೆ ಬೇರೆ ಬೇರೆ ವೆಬ್ಸೈಟ್ಗಳಲ್ಲಿ ಉದ್ಯೋಗ ಹುಡುಕಾಟ ನಡೆಸುತ್ತಿದ್ದ ಆûಾಂಕ್ಷಿಗಳಿಗೆ ಕರೆ ಮಾಡುತ್ತಿದ್ದ ಇಫ್ರಾನ್,
ಈ ಪೈಕಿ ಕೆಲವರಿಗೆ ಕರೆ ಮಾಡಿ ದೊಡ್ಡ ಮೊತ್ತದ ಸಂಬಳದ ಉದ್ಯೋಗ ಕೊಡಿಸುವುದಾಗಿ ಹೇಳುತ್ತಿದ್ದ. ಬಳಿಕ ಇದಕ್ಕೆ ಪ್ರತಿಫಲವಾಗಿ ಕಮಿಷನ್ ಕೊಡುವಂತೆ ಸೂಚಿಸುತ್ತಿದ್ದ. ಮುಂಗಡವಾಗಿ ಕೆಲವರಿಂದ ಸಾವಿರಾರ ರೂ. ಹಣ ಪಡೆದುಕೊಂಡಿದ್ದಾನೆ. ಇದೇ ರೀತಿ 200-300 ಮಂದಿ ಜನರಿಗೆ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಇಫ್ರಾನ್ ವಿರುದ್ಧ ಈ ಹಿಂದೆ ಕೋರಮಂಗರ ಪೊಲೀಸರು ಪ್ರಕರಣವೊಂದರಲ್ಲಿ ಬಂಧಿಸಿದ್ದರು. ನಕಲಿ ಐಪಿಎಸ್ ಅಧಿಕಾರಿ ಹೆಸರಿನಲ್ಲಿ ವಂಚಿಸಿದ ಆರೋಪದ ಮೇಲೆ 2017ರ ಅ.19ರಂದು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ