ಕೆರೆ ಆವರಣ ಹಸಿರಾಗಿಸುವ ಸಂಕಲ್ಪ


Team Udayavani, Jan 21, 2019, 6:44 AM IST

kere.jpg

ಬೆಂಗಳೂರು: ಕೆಂಪಾಂಬುಧಿ ಕೆರೆ ಸುತ್ತ ಹಚ್ಚಹಸಿರು ವಾತಾವರಣ ನಿರ್ಮಿಸುವ ಸಂಕಲ್ಪ ಅದಮ್ಯ ಚೇತನ ಸಂಸ್ಥೆಯದ್ದಾಗಿದೆ ಎಂದು ಸಂಸ್ಥೆ ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತಕುಮಾರ್‌ ತಿಳಿಸಿದರು. ಅದಮ್ಯ ಚೇತನ ಸಂಸ್ಥೆಯಿಂದ ಕೆಂಪಾಂಬುಧಿ ಕೆರೆಯ ಬಳಿ ಹಮ್ಮಿಕೊಳ್ಳಲಾಗಿದ್ದ 160ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಗಿಡ ನೆಟ್ಟು, ನಂತರ ಮಾತನಾಡಿದರು.

ನೀರಾವರಿ, ಅಂತರ್ಜಲಕ್ಕೆ ಪೂರಕವಾಗುವಂತೆ ಬೆಂಗಳೂರಿನಲ್ಲಿ ಕೆಂಪೇಗೌಡರು ಕೆರೆ ನಿರ್ಮಿಸಿದ್ದರು. ನಗರದ ಬೆಳವಣಿಗೆಗೆಂದು ಅವರು ವಿಶೇಷವಾದ ಯೋಜನೆಗಳನ್ನು ರೂಪಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿದ್ದರು.

ಆ ನಕ್ಷೆಯಂತೆ ಇಂದು ಬೆಂಗಳೂರು ಬೆಳೆದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಬೆಂಗಳೂರಿನಲ್ಲಿ ನೆಲೆ ನಿಲ್ಲುವವರ ಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳೂ ಹೆಚ್ಚಾದವು. ಅದರಂತೆ ಐತಿಹಾಸಿಕ ಕೆಂಪಾಂಬುಧಿ ಕೆರೆ ಕೂಡ ವಿನಾಶದ ಅಂಚನ್ನು ತಲುಪಿತ್ತು ಎಂದು ಹೇಳಿದರು.

ಅನಂತಕುಮಾರ್‌ ನಗರಾಭಿವೃದ್ಧಿ ಸಚಿವರಾದ ನಂತರ ಕೆಂಪಾಂಬುಧಿ ಕೆರೆಯ ಅಭಿವೃದ್ಧಿಗಾಗಿ ಶ್ರಮಿಸಿದರು. 1 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದರು. ಅನಂತಕುಮಾರ್‌ ಅವರಿಂದ ಕೆರೆ ಇಂದು ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಿದರು.

ಕೆರೆ ಅಭಿವೃದ್ಧಿಗೆ ಅನಂತಕುಮಾರ್‌ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದರು. ಅಲ್ಲದೆ, ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದಲ್ಲಿ ಅಭಿವೃದ್ಧಿ ಕಾರ್ಯಕ್ಕೂ ಕೈಹಾಕಿದ್ದರು. ಈ ಪ್ರಯತ್ನದ ಫ‌ಲವಾಗಿ ಜನವರಿ ತಿಂಗಳಿನಲ್ಲೂ ಕೆರೆಯಲ್ಲಿ ನೀರನ್ನು ಕಾಣಬಹುದಾಗಿದೆ ಎಂದು ವಿವರಿಸಿದರು.

ಕೆರೆ ಆವರಣದಲ್ಲಿ ವಾಸಿಸುತ್ತಿರುವ ಮಕ್ಕಳ ಕೈಯಲ್ಲಿ ಗಿಡ ನೆಡಿಸುವ ಮೂಲಕ ಅವರಲ್ಲಿ ಪರಿಸರ ಕಾಳಜಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ. ಈ ಮಕ್ಕಳೇ ಮುಂದೆ ಈ ಗಿಡ ಮರಗಳ ಬೆಳವಣಿಗೆಯ ಜವಾಬ್ದಾರಿ ಹೊತ್ತುಕೊಳ್ಳಲಿರುವುದು ಸಂತಸದ ವಿಷಯ ಎಂದು ಹೇಳಿದರು.

ಕೆಂಪಾಂಬುಧಿ ಕೆರೆಯ ಗಂಗಾ ಮಾತೆಗೆ ಹಸಿರು ಸೀರೆ ಹೊದಿಸಬೇಕೆಂಬ ಸಂಕಲ್ಪದಿಂದ ಪ್ರತಿ 10ನೇ ಭಾನುವಾರ ಕೆರೆಯ ಆವರಣದಲ್ಲಿ ಗಿಡ ನೆಟ್ಟು, ಅದಮ್ಯ ಚೇತನದಲ್ಲಿ ಅಕ್ಕಿ ತೊಳೆದ ನೀರನ್ನು ಈ ಗಿಡಗಳಿಗೆ ಹಾಕಿ ಪೋಷಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸದಾಶಿವ ಮಾತನಾಡಿ, ಹಲವಾರು ವರ್ಷಗಳಿಂದ ಹಾಳಾಗಿದ್ದ ಕೆಂಪಾಂಬುಧಿ ಕೆರೆಗೆ ಅನಂತಕುಮಾರ್‌ ಅವರು ಹೆಚ್ಚಿನ ಅನುದಾನ ಒದಗಿಸಿ ಅಭಿವೃದ್ಧಿಯಾಗುವಂತೆ ಮಾಡಿದ್ದಾರೆ. ನೀರಿಲ್ಲದ ಕೆರೆಯನ್ನು ಆಟದ ಮೈದಾನವನ್ನಾಗಿ ಮಾಡಲು ಕೆಲವು ರಾಜಕಾರಣಿಗಳು ಯೋಚಿಸಿದ್ದರು. ಆದರೆ ಅನಂತಕುಮಾರ್‌ ಅವರ ನೆರವಿನಿಂದ ಕೆಂಪಾಂಬುಧಿ ಕೆರೆಯಲ್ಲಿ ನೀರು ತುಂಬುವಂತಾಗಿದೆ ಎಂದು ಹೇಳಿದರು.

ಸಾರ್ವಜನಿಕರ ಅಸಮಾಧಾನ: ಹಸಿರು ಭಾನುವಾರದ ಹೆಸರಿನಲ್ಲಿ ವಾರಕ್ಕೊಂದು ದಿನ ಗಿಡ ನೆಟ್ಟು ಹೋಗುತ್ತಾರೆ. ಅವುಗಳ ಪೋಷಣೆಗೆ ಮುಂದಾಗುವುದಿಲ್ಲ. ಕೆಂಪಾಂಬುಧಿ ಕೆರೆ ಅಭಿವೃದ್ಧಿಗೆಂದು ಪ್ರತಿವರ್ಷ ಅನುದಾನ ಬಿಡುಗಡೆ ಮಾಡಲಾಗುತ್ತದೆ.

ಆದರೆ ಆ ಹಣವನ್ನು ಸಮಗ್ರವಾಗಿ ಬಳಸುತ್ತಿಲ್ಲ. ಗಿಡಗಳಿಗೆ ನೀರು ಹಾಕುವವರಿಲ್ಲದೆ ಒಣಗುತ್ತಿವೆ. ಕೆಂಪಾಂಬುಧಿ ಉದ್ಯಾನವನಕ್ಕೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಲ್ಲ. ಇದರಿಂದ ಹಲವು ಸಮಸ್ಯೆಗಳಾಗುತ್ತಿವೆ ಎಂದು ಕೆಲ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.