ಸಣ್ಣ ಮಳೆಗೂ ಎದುರಾಗಿದೆ ಜಲಕಂಟಕ


Team Udayavani, May 14, 2019, 3:06 AM IST

sanna

ಬೆಂಗಳೂರು: ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿ ಭಾಗದಲ್ಲಿ ಸೋಮವಾರದ ಮಳೆಗೆ ರಸ್ತೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿದ್ದು, ಮೂರು ವರ್ಷಗಳ ಹಿಂದೆ ಮಳೆಯಿಂದ ಸಂಭವಿಸಿದ ಅನಾಹುತಗಳು ಮರುಳಿಸುವ ಆತಂಕ ಎದುರಾಗಿದೆ.

ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ 2016ರಲ್ಲಿ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿ, ಅರಕೆರೆ, ಅವನಿ ಶೃಂಗೇರಿ, ಸರಸ್ವತಿಪುರ ಸೇರಿದಂತೆ ಹಲವಾರು ಬಡಾವಣೆಗಳಲ್ಲಿ ಪ್ರವಾಹ ಉಂಟಾಗಿ ಜನರು ತೊಂದರೆ ಅನುಭವಿಸಿದ್ದರು.

ಇದೀಗ ಸೋಮವಾರ ಸುರಿದ ಸಣ್ಣ ಮಳೆಗೆ ಕೋಡಿಚಿಕ್ಕನಹಳ್ಳಿ ಹಾಗೂ ಬಿಟಿಎಂ ಬಡಾವಣೆ 6ನೇ ಹಂತದ ಕೆಲವು ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಮಸ್ಯೆ ಅನುಭವಿಸುವಂತಾಗಿದ್ದು, ಮಳೆಗಾಲ ನೆನೆದು ಆತಂಕಪಡುವಂತಾಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ ನಗರದ ಒಂದಿಲ್ಲೊಂದು ಪ್ರದೇಶವು ಮಳೆಯಿಂದ ಅನಾಹುತಕ್ಕೆ ಒಳಗಾಗುತ್ತಿವೆ. ಮಳೆಗಾಲಕ್ಕೆ ಪಾಲಿಕೆ ಸಜ್ಜಾಗಿದೆ ಎಂಬ ಪಾಲಿಕೆಯ ಅಧಿಕಾರಿಗಳು ಭರವಸೆ ನೀಡಿದರೂ, ಅನಾಹುತಗಳು ಮಾತ್ರ ಮರುಕಳಿಸುತ್ತಲೇ ಇವೆ.

ಸೋಮವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸೋಮವಾರ 2-3 ಸೆಂಟಿ ಮೀಟರ್‌ನಷ್ಟು ಮಳೆಯಾಗಿದ್ದು, ಬನ್ನೇರುಘಟ್ಟ ಮುಖ್ಯರಸ್ತೆ, ಕೋಡಿಚಿಕ್ಕನಹಳ್ಳಿ, ಬಿಟಿಎಂ ಬಡಾವಣೆ 6ನೇ ಹಂತ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಸ್ತೆಗಳಲ್ಲಿ ಎರಡು ಮೂರು ಅಡಿಯಷ್ಟು ನೀರು ನಿಂತು ಜನಜೀವನ ಅಸ್ತವ್ಯಸ್ಥಗೊಂಡಿತ್ತು.

ಹೂಳು ತೆಗೆಯದ ಪಾಲಿಕೆ: ಬಿಬಿಎಂಪಿ ವತಿಯಿಂದ ಕೋಡಿಚಿಕ್ಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳ ಕಿರುಚಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯ ನಡೆದಿಲ್ಲ. ಪರಿಣಾಮ ಮಳೆನೀರು ಸಮರ್ಪಕವಾಗಿ ಹರಿದು ಹೋಗದೆ ರಸ್ತೆಗಳಲ್ಲಿ ಉಳಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ ಎಂದು ಸ‚§ಳೀಯರು ಆರೋಪಿಸಿದ್ದಾರೆ.

ಮನೆಗಳಿಗೆ ಮ್ಯಾನ್‌ಹೋಲ್‌ ನೀರು: ಕೋಡಿಚಿಕ್ಕನಹಳ್ಳಿಯ ರಸ್ತೆಯಲ್ಲಿ ಜಲಮಂಡಳಿಯಿಂದ ನಿರ್ಮಿಸಿರುವ ಮ್ಯಾನ್‌ಹೋಲ್‌ಗ‌ಳು ಸೋಮವಾರ ಉಕ್ಕಿ ಹರಿದ ಪರಿಣಾಮ, ಸಮೀಪದ ಅಂಗನವಾಡಿ ಹಾಗೂ ತಗ್ಗು ಪ್ರದೇಶದ 5 ಮನೆಗಳಿಗೆ ಒಳಚರಂಡಿ ನುಗ್ಗಿದರ ಪರಿಣಾಮ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ನೀರು ತೆರವುಗೊಳಿಸಿದರೂ ಮನೆಯೆಲ್ಲ ದುರ್ವಾಸನೆ ಹರಡಿರುವುದು ನಿವಾಸಿಗಳಿಗೆ ಕಿರಿಕಿರಿಯುಂಟು ಮಾಡಿದೆ.

ಜಂಟಿ ಆಯುಕ್ತರ ಪರಿಶೀಲನೆ: ಮಳೆಯಿಂದಾಗಿ ಕೋಡಿಚಿಕ್ಕನಹಳ್ಳಿಯ ಕೆಲ ರಸ್ತೆಗಳಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಜಂಟಿ ಆಯುಕ್ತೆ ಸೌಜನ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ಪಾಲಿಕೆಯಿಂದ ಹೊಸದಾಗಿ ನಿರ್ಮಿಸಿರುವ ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯುತ್ತಿದೆ ಎಂಬುದನ್ನು ಪರಿಶೀಲಿಸಿದರು. ಜತೆಗೆ ಕೂಡಲೇ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆಗೆ ಎಚ್ಚರಿಕೆ ಗಂಟೆ: ಪ್ರಸಕ್ತ ಸಾಲಿನಲ್ಲಿ ಮಳೆಗಾಲಕ್ಕೆ ಸಜ್ಜಾಗಿರುವುದಾಗಿ ಪಾಲಿಕೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆದರೆ, ಈಗಾಗಲೇ ಮುಂಗಾರು ಪೂರ್ವ ಮಳೆಗೆ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ಹಲವು ಬಡಾವಣೆಗಳಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಇದೀಗ 2016ರಲ್ಲಿ ಪ್ರವಾಹ ಎದುರಿಸಿದ ಭಾಗಗಳಲ್ಲಿಯೇ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಪಾಲಿಕೆಯ ಅಧಿಕಾರಿಗಳು ಶೀಘ್ರ ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.