ಹೊಸ ವರ್ಷಕ್ಕೆ ಸೇಲ್‌ಗೆ ತಂದಿದ್ದ ಡ್ರಗ್ಸ್‌  ಜಪ್ತಿ  


Team Udayavani, Dec 31, 2022, 10:33 AM IST

TDY-6

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ನಗರದಲ್ಲಿ ಡ್ರಗ್ಸ್‌ ಪೂರೈಕೆಗೆ ಯತ್ನಿಸುತ್ತಿದ್ದ 3 ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ಮಂದಿ ಪೆಡ್ಲರ್‌ಗಳು ಸಿಸಿಬಿ ಬಲೆಗೆ ಬಿದ್ದಿದ್ದು, 6.31 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ‌

ಐವರಿಕೋಸ್ಟ್‌ ಮೂಲದ ಕಾವೊ ಎಸ್ಸೆ ಸಬಾಸ್ಟೀನ್‌, ಕೋಸ್ಟರಿಕಾದ ಆಗುºಚಿಕೆ ಅಂಥೋನಿ, ರಾಮಣ್ಣ, ಇರ್ಫಾನ್‌, ಬಾಷಾ, ಮೊಹಮ್ಮದ್‌ ಮುಜಾಯಿದ್‌, ಇಲಿಯಾಜ್‌ ಸೇರಿ 8 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2 ಕೆ.ಜಿ. 550 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 350 ಎಕ್ಸೈಸಿ ಮಾತ್ರೆಗಳು, 4 ಕೆ.ಜಿ. ತೂಕದ ಹ್ಯಾಶಿಸ್‌ ಆಯಿಲ್, 440 ಗ್ರಾಂ ತೂಕದ ಚರಸ್‌, 7 ಕೆಜಿ 100 ಗ್ರಾಂ ತೂಕದ ಗಾಂಜಾ ಸೇರಿದಂತೆ 6.31 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಪೊಲೀಸ್‌ ಆಯುಕ್ತರ ವಿಶೇಷ ಸೂಚನೆಯಂತೆ ಸಿಸಿಬಿ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರು ಪೆಡ್ಲರ್ಸ್‌ಗಳ ಮೇಲೆ ಹೆಚ್ಚಿನ ನಿಗಾ ಇಟ್ಟು ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಿಸಿಬಿ ಪೊಲೀಸರಿಗೆ ತಿಳಿಸಿದ್ದರು. ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಚಲನಾವಲನಗಳ ಬಗ್ಗೆ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ನಗರದ ವಿವಿಧೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದುಪ್ಪಟ್ಟು ಬೆಲೆಗೆ ಮಾರಾಟಕ್ಕೆ ಯತ್ನ: ಗೋವಾ, ದೆಹಲಿ, ಆಂಧ್ರಪ್ರದೇಶ, ಹೈದರಾಬಾದ್‌ ಹಾಗೂ ನಗರದಲ್ಲಿ ನೆಲೆಸಿರುವ ನೈಜೀರಿಯಾ ಡ್ರಗ್ಸ್‌ ಪೆಡ್ಲರ್‌ ಗಳಿಂದ ವಿವಿಧ ರೀತಿಯ ಡ್ರಗ್ಸ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಡ್ರಗ್ಸ್‌ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಖರೀದಿಸಿದ ಬೆಲೆಗಿಂತ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಸಂಚು ರೂಪಿಸಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಕೊತ್ತನೂರು, ಬಾಣಸವಾಡಿ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಆರೋಪಿಗಳು ಡ್ರಗ್ಸ್‌ ಮಾರಾಟದಿಂದ ಇದುವರೆಗೆ ಎಷ್ಟು ಆಸ್ತಿ ಸಂಪಾದಿಸಿದ್ದಾರೆ. ಎಷ್ಟು ಕೋಟಿ ರೂ. ಮೌಲ್ಯದ ಡ್ರಗ್ಸ್‌ ಡೀಲಿಂಗ್‌ ನಡೆಸಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡ್ರಗ್ಸ್‌ ಶೇಖರಿಸಿಡಲೆಂದೇ ಬಾಡಿಗೆ ಮನೆ! : ಆರೋಪಿಗಳಾದ ರಾಮಣ್ಣ, ಇರ್ಫಾನ್‌, ಬಾಷಾ, ಮೊಹಮ್ಮದ್‌ ಮುಜಾಯಿದ್‌, ಇಲಿಯಾಜ್‌ ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸಂಗ್ರಹಿಸಿಡುವ ಸಲುವಾಗಿಯೇ ಬಾಡಿಗೆ ಮನೆಯನ್ನು ಪಡೆದು ಶೇಖರಿಸಿಟ್ಟುಕೊಂಡಿದ್ದರು. ಹೊಸ ವರ್ಷದ ಪ್ರಯುಕ್ತ ತಮ್ಮ ಗಿರಾಕಿಗಳ ಬೇಡಿಕೆಗೆ ಅನುಗುಣವಾಗಿ ಅವುಗಳನ್ನು ಮಾರಾಟ ಮಾಡಿ ಅಥವಾ ಡ್ರಗ್ಸ್‌ ಶೇಖರಿಸಿಟ್ಟ ಬಾಡಿಗೆ ಮನೆಯಲ್ಲೇ ಡೀಲ್‌ ಕುದುರಿಸಲು ಮುಂದಾಗಿದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.