ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ ಆಗಿದೆ : ದಿನೇಶ್ ಗುಂಡೂರಾವ್
Team Udayavani, Sep 30, 2019, 3:05 PM IST
ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ತೆಗೆದುಕೊಳ್ಳುತ್ತಿರುವ ತೀರ್ಮಾನಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ದೇಶದ ಇತಿಹಾಸದಲ್ಲಿ ಈ ರೀತಿ ನಡೆದುಕೊಂಡಿರಲಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅವರು ಕೇಳದೆ ಹೇಳಿಕೆ ನೋಡುತ್ತಾರೆ. ಅನರ್ಹರ ಪರ ಇವರೇ ವಕಾಲತ್ತು ವಹಿಸುತ್ತಾರೆ ಎಂದು ಹೇಳಿದರು.
ಆಯೋಗ ಸಂವಿಧಾನಿಕ ಸಂಸ್ಥೆ, ಅವರು ದಿನಕ್ಕೊಂದು ಹೇಳಿಕೆ ನೋಡಿದರೆ ಹೇಗೆ ಇವರಿಗೆ ಯಾರು ಆದೇಶ ಮಾಡುತ್ತಿದ್ದಾರೆ. ಕೇಂದ್ರದ ಚುನಾವಣಾ ಆಯೋಗ ಬಿಜೆಪಿ ಆದೇಶದಂತೆ ನಡೆದುಕೊಳ್ಳುತ್ತಿದೆ ಎಂದರು.
ಚುನಾವಣೆ ಘೋಷಣೆ ಆದ ದಿನದಿಂದಲೇ ನೀತಿ ಸಂಹಿತೆ ಜಾರಿಯಾಗುತ್ತದೆ. ಆದರೆ , ಇವರು ಈಗ ಚುನಾವಣೆ ಘೋಷಣೆ ಮಾಡಿ ನವೆಂಬರ್ 11 ರಿಂದ ನೀತಿ ಸಂಹಿತೆ ಜಾರಿಗೊಳಿಸಿದೆ. ಈ ಮೂಲಕ ಅನರ್ಹ ಶಾಸಕರ ಕ್ಷೇತ್ರಗಳಿಗೆ ಬೇಕಾ ಬಿಟ್ಟಿ ಯೋಜನೆ ಜಾರಿಗೊಳಿಸಲು ಇವರೇ ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಸರ್ಕಾರಿ ವ್ಯವಸ್ಥೆ ದುರುಪಯೋಗ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ