ಸಂಕಷ್ಟದ ಪರಿಸ್ಥಿತಿಯಿಂದ ಅಪರಾಧಿಗಳ ಹುಟ್ಟು


Team Udayavani, Dec 19, 2019, 3:05 AM IST

sankashta

ಬೆಂಗಳೂರು: ಮನುಷ್ಯ ಹುಟ್ಟಿನಿಂದಲೇ ಅಪರಾಧಿಯಾಗಿ ಹುಟ್ಟುವುದಿಲ್ಲ. ಪರಿಸ್ಥಿತಿ ಅವರನ್ನು ಅಪರಾಧಿಯನ್ನಾಗಿ ಮಾಡಿಸುತ್ತದೆ ಎಂದು ಲೇಖಕ ಹಾಗೂ ನಿವೃತ್ತ ಡಿಜಿಪಿ ಡಿ.ವಿ.ಗುರುಪ್ರಸಾದ್‌ ಅಭಿಪ್ರಾಯಪಟ್ಟರು. ಬುಧವಾರ ಎಂ.ಜಿ.ರಸ್ತೆಯ ಹಿಗ್ಗಿನ್‌ ಬೋಥಮ್‌ ಪುಸ್ತಕ ಮಳಿಗೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಪ್ರತಿಭಾ ನಂದಕುಮಾರ್‌ ಅವರ “ದಿ ಗ್ಯಾಂಗ್‌ಸ್ಟರ್ ಗೀತ’ ( ಇದು ಅಗ್ನಿ ಶ್ರೀಧರ್‌ ಅವರ ಕನ್ನಡದ “ಎದೆಗಾರಿಕೆ’ ಕೃತಿಯ ಅನುವಾದ) ಆಂಗ್ಲ ಕಾದಂಬರಿಯನ್ನು ಬಿಡುಗಡೆ ಗೊಳಿಸಿದರು.

ಯಾರು ಕೂಡ ಹುಟ್ಟುತ್ತಲೇ ಅಪರಾಧಿಯಾಗಿರುವುದಿಲ್ಲ. ಸಂದರ್ಭ ಅವರನ್ನು ಅಪರಾಧಿಯನ್ನಾಗಿಸಿ ಬಿಡುತ್ತದೆ. ನನ್ನ ಸುಮಾರು 37 ವರ್ಷಗಳ ಪೊಲೀಸ್‌ ಅಧಿಕಾರ ಅವಧಿಯ ದಿನಗಳಲ್ಲಿ ಹಲವು ಅಪರಾಧಿಗಳನ್ನು ನೋಡಿದ್ದೇನೆ ಎಂದು ಹೇಳಿದರು. ಅಗ್ನಿ ಶ್ರೀಧರ್‌ ಅವರು ಕನ್ನಡದಲ್ಲಿ ಬರೆದಿರುವ ಎದೆಗಾರಿಕೆ ಕೃತಿಯನ್ನು ಓದಿದ್ದೇನೆ. ಅದರಲ್ಲಿ ಬರುವಂತಹ ಸೋನು ಪಾತ್ರ ನನ್ನ ಮನಸಿಗೆ ಹಿಡಿಸಿತು. ಇಡೀ ಕೃತಿ ಭೂಗತ ಲೋಕದ ಹೊಸ ಬಗೆಯ ಅನುಭವವನ್ನು ಕಟ್ಟಿಕೊಡುತ್ತದೆ ಎಂದರು.

ಸುಲಭದ ಕೆಲಸವಲ್ಲ: ಕೇರಳ ಮೂಲದ ಆಂಗ್ಲ ಭಾಷೆಯ ಕಾದಂಬರಿಗಾರ್ತಿ ಅನಿತಾ ನಾಯರ್‌ ಮಾತನಾಡಿ, ಕೃತಿಯನ್ನು ಒಂದು ಭಾಷೆಯಿಂದ ಮತ್ತೂಂದು ಭಾಷೆಗೆ ಅನುವಾದ ಮಾಡುವುದು ಸುಲಭದ ಕೆಲಸಲ್ಲ. ಮೂಲ ಕೃತಿಗೆ ಮತ್ತು ಅಲ್ಲಿ ಬರುವ ಪಾತ್ರಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದ ರೀತಿಯಲ್ಲಿ ಲೇಖಕಿ ಪ್ರತಿಭಾ ನಂದಕುಮಾರ್‌ ಅವರು ಅನುವಾದ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಅನುವಾದದ ಭಾಷೆ ಕೂಡ ಕ್ಲಿಷ್ಟವಾಗಿಲ್ಲ. ಸರಳ ರೀತಿಯಲ್ಲಿ ಕೃತಿ ಓದಿಸಿಕೊಂಡು ಹೋಗುತ್ತದೆ.

ಭೂಗತ ಲೋಕದ ಹಲವು ರೂಪಗಳನ್ನು “ದಿ ಗ್ಯಾಂಗ್‌ಸ್ಟರ್ ಗೀತ’ ಕೃತಿ ಕಟ್ಟಿಕೊಡುತ್ತದೆ ಎಂದು ಹೇಳಿದರು. ಅಗ್ನಿ ಶ್ರೀಧರ್‌ ಮಾತನಾಡಿ, ನಾನು ಸಾಹಿತ್ಯ ಮತ್ತು ಕಲೆಯ ಬಗ್ಗೆ ಹೆಚ್ಚು ಆಸಕ್ತಿಯುಳ್ಳವನ್ನಾಗಿದ್ದೆ. ಐ.ಎ.ಎಸ್‌. ಪರೀಕ್ಷೆ ಬರೆಯಬೇಕೆಂದು ಸಿದ್ಧಗೊಳ್ಳುತ್ತಿದ್ದೆ. ಆದರೆ ಒಂದೇ ಒಂದು ಸನ್ನಿವೇಶ ನನ್ನನ್ನು ಭೂಗತ ಲೋಕದಲ್ಲಿರುವಂತೆ ಮಾಡಿತು ಎಂದರು. ಈ ವೇಳೆ ಲೇಖಕಿ ಪ್ರತಿಭಾನಂದಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.