ಫ‌ಲಕಗಳ ತೆರವಿಗೆ ಗಡುವು ಅಂತ್ಯ


Team Udayavani, Aug 31, 2018, 12:10 PM IST

palaka.jpg

ಬೆಂಗಳೂರು: ನಗರದ ಖಾಸಗಿ ಆಸ್ತಿಗಳಲ್ಲಿ ಅಳವಡಿಸಿರುವ ಜಾಹಿರಾತು ಫ‌ಲಕಗಳ ತೆರುವುಗೊಳಿಸಲು ಬಿಬಿಎಂಪಿ ನೀಡಿದ್ದ ಗಡುವು ಶುಕ್ರವಾರಕ್ಕೆ ಅಂತ್ಯಗೊಳ್ಳಲಿದ್ದು, ಸೋಮವಾರದಿಂದ ಫ‌ಲಕಗಳ ತೆರವು ಕಾರ್ಯಾಚರಣೆ ಆರಂಭಿಸಲು ಪಾಲಿಕೆ ಸಜ್ಜಾಗಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಈಗಾಗಲೇ ನಗರದಲ್ಲಿನ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್ಸ್‌ ತೆರವುಗೊಳಿಸಿರುವ ಪಾಲಿಕೆ, ಅನಧಿಕೃತ ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಲು ಖಾಸಗಿಯವರಿಗೆ ಆ.31ರವರೆಗೆ ಅವಕಾಶ ನೀಡಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಕೆಲ ಏಜೆನ್ಸಿಗಳು ತಾವು ಅಳವಡಿಸಿದ್ದ ಫ‌ಲಕಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಆದರೆ, ಹೆಚ್ಚಿನ ಭಾಗಗಳಲ್ಲಿ ತೆರವಿಗೆ ಏಜೆನ್ಸಿಗಳು ಮುಂದಾಗಿಲ್ಲ.

ನಿಗದಿತ ಅವಧಿಯೊಳಗೆ ಫ‌ಲಕಗಳನ್ನು ತೆರವುಗೊಳಿಸದ ಖಾಸಗಿ ಆಸ್ತಿಗಳಲ್ಲಿರುವ ಫ‌ಲಕಗಳನ್ನು ಪಾಲಿಕೆಯಿಂದಲೇ ತೆರವುಗೊಳಿಸುವ ಕಾರ್ಯ ಆರಂಭವಾಗಲಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಕಟ್ಟಡ ಮಾಲೀಕರಿಂದಲೇ ಸಂಗ್ರಹಿಸಲಾಗುತ್ತದೆ.

ಪಾಲಿಕೆಯಿಂದ ನಗರದಲ್ಲಿನ ಅನಧಿಕೃತ ಜಾಹೀರಾತು ಫ‌ಲಕಗಳ ಪತ್ತೆಗಾಗಿಯೇ ಅಭಿವೃದ್ಧಿಪಡಿಸಲಾಗಿದ್ದ ವಿಶೇಷ ಆ್ಯಪ್‌ ಮೂಲಕ ಯಾವ ವಾರ್ಡ್‌ನಲ್ಲಿ ಎಷ್ಟು ಅನಧಿಕೃತ ಫ‌ಲಕಗಳಿವೆ ಎಂಬ ಮಾಹಿತಿ ಈಗಾಗಲೇ ಲಭ್ಯವಾಗಿದ್ದು, ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಲು ಪಾಲಿಕೆ ಸಿದ್ಧತೆ ನಡೆಸಿದೆ.

ಪಾಲಿಕೆಯ ಎಲ್ಲಾ ಸಹಾಯಕ ಕಂದಾಯ ಅಧಿಕಾರಿಗಳು ಈಗಾಗಲೇ ಆ್ಯಪ್‌ಗೆ ತಮ್ಮ ವ್ಯಾಪ್ತಿಗೆ ಬರುವ ಪ್ರತಿಯೊಂದು ಜಾಹೀರಾತು ಫ‌ಲಕಗಳನ್ನು ಹತ್ತಿರದಿಂದ ಫೋಟೋ ತೆಗೆದು ಸ್ಥಳದ ಸಂಪೂರ್ಣ ಮಾಹಿತಿಯೊಂದಿಗೆ ಆ್ಯಪ್‌ಗೆ ಅಪ್‌ಲೋಡ್‌ ಮಾಡಿದ್ದಾರೆ. ಜತೆಗೆ ಫ‌ಲಕವಿರುವ ಖಾಸಗಿ ಕಟ್ಟಡದ ಹತ್ತಿರ ಹೋಗಿ “ಲೊಕೇಷನ್‌’ ಅಪ್‌ಲೋಡ್‌ ಮಾಡಿದ್ದು, ಜಾಗದ ಮಾಲೀಕರ ಹೆಸರು ಹಾಗೂ ಆಸ್ತಿಯ ಪಿಐಡಿ ಸಂಖ್ಯೆಯ ಮಾಹಿತಿ ಪಡೆದಿದ್ದಾರೆ.

ಪಾಲಿಕೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಜಾಹೀರಾತು ಫ‌ಲಕಗಳಿರುವುದು ಈ ಹಿಂದೆ ಪಾಲಿಕೆಯಿಂದ ನಡೆಸಲಾದ ಸಮೀಕ್ಷೆಯಿಂದ ತಿಳಿದುಬಂದಿದ್ದು, ಫ‌ಲಕಗಳ ತೆರವು ಕಾರ್ಯಾಚರಣೆ ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದೆ. ಒಂದು ಜಾಹೀರಾತು ಫ‌ಲಕ ತೆರವುಗೊಳಿಸಲು ಕ್ರೇನ್‌, ಕಟ್ಟರ್‌ ಹಾಗೂ ನಾಲ್ಕೈದು ಸಿಬ್ಬಂದಿಯ ಅಗತ್ಯವಿದೆ. ಆದರೆ, ಪಾಲಿಕೆಯ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣ ಕೊರತೆಯಿರುವ ಕಾರಣ ಫ‌ಲಕಗಳ ತೆರವಿಗೆ ಟೆಂಡರ್‌ ಕರೆಯಲು ಪಾಲಿಕೆ ಚಿಂತನೆ ನಡೆಸಿದೆ. 

ಕ್ರಿಮಿನಲ್‌ ಕೇಸು ದಾಖಲು: ಅನಧಿಕೃತ ಜಾಹೀರಾತು ಫ‌ಲಕಗಳ ತೆರವುಗೊಳಿಸಲು ಪಾಲಿಕೆಯಿಂದ 20 ದಿನಗಳು ಅವಕಾಶ ನೀಡಲಾಗಿತ್ತು. ಜತೆಗೆ ಫ‌ಲಕಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳಿಗೆ ಸಲ್ಲಿಸಲು ಸಹ ಅವಕಾಶ ನೀಡಲಾಗಿತ್ತು. ಆದರೆ, ಈವರೆಗೆ ಯಾರು ದಾಖಲೆಗಳ ಸಲ್ಲಿಕೆಗೆ ಮುಂದಾಗಿಲ್ಲ. ಹೀಗಾಗಿ ಅನಧಿಕೃತ ಜಾಹೀರಾತು ಫ‌ಲಕವಿರುವ ಆಸ್ತಿ ಮಾಲೀಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. 

ಅನಧಿಕೃತ ಜಾಹೀರಾತು ಫ‌ಲಕಗಳ ವಿವರ
ವಲಯ                     ಫ‌ಲಕಗಳ ಸಂಖ್ಯೆ    ನೋಟಿಸ್‌ ಸಂಖ್ಯೆ    ದಂಡ-ತೆರಿಗೆ (ಕೋಟಿಗಳಲ್ಲಿ)

-ಯಲಹಂಕ                      536                    197               20.77
-ಮಹದೇವಪುರ               1,327                   981              67.94
-ದಾಸರಹಳ್ಳಿ                      198                     84                3.03
-ಆರ್‌.ಆರ್‌.ನಗರ              186                     164              5.84
-ಬೊಮ್ಮನಹಳ್ಳಿ                   481                     303              29.61
-ದಕ್ಷಿಣ                          2,293                    749              50.39
-ಪಶ್ಚಿಮ                         1,244                    486              30.21
-ಪೂರ್ವ                        3,907                    1,886           92.14
-ಒಟ್ಟು                         10,172                   4,850           299.95

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.