ಎಸ್ಸಿ ಮೀಸಲು ಕ್ಷೇತ್ರದ ಮೇಲೆ ಬೇಡ ಜಂಗಮರ ಕಣ್ಣು


Team Udayavani, Mar 23, 2018, 6:15 AM IST

voter-machine.jpg

ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಯ ಸಂಘರ್ಷದ ನಡುವೆಯೇ ವೀರಶೈವ ಸಮುದಾಯದ ಜಂಗಮರು ಬೇಡ ಜಂಗಮ ಸಮುದಾಯದ ಪ್ರಮಾಣ ಪತ್ರ ಪಡೆದು ಪರಿಶಿಷ್ಠ ಜಾತಿಗೆ ಮೀಸಲಿರುವ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.

ವೀರಶೈವ ಸಮಾಜದ ಆರಾಧ್ಯ ಕ್ಷೇತ್ರಗಳಾದ ಪಂಚಪೀಠಗಳ ಅನುಯಾಯಿಗಳಾಗಿರುವ ಜಂಗಮ (ಅಯ್ಯನೋರು) ಸಮುದಾಯದವರು ರಾಜ್ಯದ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿದ್ದಾರೆ. ಈಗಾಗಲೇ  ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಬೇಡ ಜಂಗಮ್‌ ಸಮುದಾಯದವರು ಪರಿಶಿಷ್ಠ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.

ಡಾ.ಎಂ.ಪಿ.ದ್ವಾರಕೇಶ್ವರಯ್ಯ ಎನ್ನುವವರು ಅಖೀಲ ಕರ್ನಾಟಕ ಡಾ.ಅಂಬೇಡ್ಕರ್‌ ಬೇಡ ಜಂಗಮ್‌ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಮಾಡಿಕೊಂಡು, ಬೇಡ ಜಂಗಮ್‌ ಸಮುದಾಯಕ್ಕೆ ಎಸ್ಸಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಚಿತ್ರದುರ್ಗ ಜಿಲ್ಲೆಯ ಮಾಯಕೊಂಡ ಮೀಸಲು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಅವರಂತೆ ವಾಗೀಶ್‌ ಹಿರೇಮs… ಹಾಗೂ ಸೋಮಶೇಖರ ಮಂಡಿಮs… ಎನ್ನುವವರೂ ಬೇಡ ಜಂಗಮ್‌ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಎಸ್ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.

2013ರ ಚುನಾವಣೆಗೆ ಡಾ.ಎಂ.ಪಿ.ದ್ವಾರಕೇಶ್ವರಯ್ಯ ಅವರು ಮಾಯಕೊಂಡ ಮೀಸಲು ಕ್ಷೇತ್ರದಿಂದ ಎಸ್ಸಿ ಕೋಟಾದಡಿ ಸ್ಪರ್ಧಿಸಲು ಮುಂದಾಗಿದ್ದಾಗ ಅವರ ಜಾತಿ ಪ್ರಮಾಣ ತಿರಸ್ಕರಿಸಲಾಗಿತ್ತು. ನಂತರ, ತಾವು ಮೂಲ ಬೇಡ ಜಂಗಮರು ಮತ್ತು ಸ್ವಾತಂತ್ರ್ಯ ಪೂರ್ವದಿಂದಲೂ ಬೇಡ ಜಂಗಮ ಸಮುದಾಯ ಪರಿಶಿಷ್ಟ ಜಾತಿಗೆ ಸೇರಿದೆ ಎಂದು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಇವರ ವಾದವನ್ನು ಪುರಸ್ಕರಿಸಿ ಆದೇಶ ನೀಡಿದೆ.

ಇದೇ ವೇಳೆ, ಬಳ್ಳಾರಿ, ರಾಯಚೂರು, ಬೀದರ್‌, ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಎಸ್ಸಿ ಮೀಸಲಾತಿ ಪ್ರಮಾಣ ಪತ್ರ ಪಡೆಯಲು ಬೇಡ ಜಂಗಮ ಸಮುದಾಯದವರು ಅರ್ಜಿ ಸಲ್ಲಿಸಿದ್ದು, ತಹಸೀಲ್ದಾರ್‌ರಿಂದ ಪ್ರಮಾಣ ಪತ್ರ ದೊರೆತರೆ, ಇನ್ನಷ್ಟು ಎಸ್ಸಿ ಮೀಸಲು ಕ್ಷೇತ್ರಗಳಿಗೆ ಸ್ಪರ್ಧೆ ಮಾಡುವ ಇಚ್ಛೆ ಹೊಂದಿದ್ದಾರೆ.

ಬೇಡ ಜಂಗಮ ಇತಿಹಾಸ
1935ರಲ್ಲಿ ಬೇಡ ಜಂಗಮ ಹಾಗೂ ಬುಡ್ಗ ಜಂಗಮ ಸಮುದಾಯವನ್ನು ಎಸ್ಸಿಗೆ ಸೇರಿಸಲಾಗಿತ್ತು. 1950ರಲ್ಲಿ ಪರಿಶಿಷ್ಟ ಜಾತಿಗೆ ಇವು ಸೇರ್ಪಡೆಯಾದವು. 1956ರಲ್ಲಿ ಬೀದರ್‌, ಕಲಬುರಗಿ, ರಾಯಚೂರಿನಲ್ಲಿ ಮಾತ್ರ ಬೇಡ ಜಂಗಮ ಸಮುದಾಯ ಇದೆ ಎಂದು ರಾಷ್ಟ್ರಪತಿ ಆದೇಶ ಹೊರಡಿಸಿದ್ದರು. 1976ರಲ್ಲಿ ರಾಜ್ಯದ ಎಲ್ಲ ಭಾಗದಲ್ಲಿಯೂ ಬೇಡ ಜಂಗಮರು ಇದ್ದಾರೆ ಎಂದು ಆದೇಶ ಹೊರಡಿಸಲಾಗಿದೆ. 1978ರಲ್ಲಿ ಬೇಡ ಜಂಗಮರು ದಲಿತರಲ್ಲ ಎಂದು ಸರ್ಕಾರ ಆದೇಶ ಹೊರಡಿಸಿತು. ಬೇಡ ಜಂಗಮರು ಹೈಕೋರ್ಟ್‌ ಮೆಟ್ಟಿಲೇರಿದರು. 27-10-1989ರಲ್ಲಿ ಸರ್ಕಾರದ ಆದೇಶವನ್ನು ಹೈಕೋರ್ಟ್‌  ರದ್ದುಪಡಿಸಿತು. ಅದರ ಆಧಾರದ ಮೇಲೆ ಬೇಡ ಜಂಗಮ ಸಮುದಾಯದವರು ಈಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.

ಯಾರು ಬೇಡ ಜಂಗಮರು ?
ಶಸ್ತ್ರ ಹಾಗೂ ಜೋಳಿಗಿ ಹಾಕಿಕೊಂಡು ಮನೆ ಮನೆ ತಿರುಗಿ ಭಿಕ್ಷೆ ಬೇಡಿ ಜೀವನ ನಡೆಸುವ ಸಮುದಾಯ. ಪಂಚಪೀಠಾಧೀಶರ ಅನುಯಾಯಿಗಳಾಗಿರುವ ಇವರು ವೀರಭದ್ರನ ಆರಾಧಕರು.

ನಮ್ಮ ಸಮುದಾಯಕ್ಕೆ ಸ್ವಾತಂತ್ರ ಪೂರ್ವದಿಂದಲೂ ಬೇಡ ಜಂಗಮ್‌ ಎಂದು ಹೇಳಲಾಗಿದೆ. ನಮಗೆ ಮೊದಲಿಂದಲೂ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಈಗ ನಮ್ಮ ಹಕ್ಕನ್ನು ನಾವು ಪಡೆಯುತ್ತಿದ್ದೇವೆ. ನಾನು ಈ ಬಾರಿ ಮಾಯಕೊಂಡ ಎಸ್ಸಿ ಮೀಸಲು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಇನ್ನೂ 2-3 ಕ್ಷೇತ್ರಗಳಲ್ಲಿ  ನಮ್ಮವರು ಸ್ವರ್ಧಿಸಲು ಮುಂದಾಗಿದ್ದಾರೆ.
– ಡಾ.ಎಂ.ಪಿ.ದ್ವಾರಕೇಶ್ವರಯ್ಯ, ಅಖೀಲ ಕರ್ನಾಟಕ ಡಾ. ಅಂಬೇಡ್ಕರ್‌ ಬೇಡ ಜಂಗಮ್‌ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ

ವೀರಶೈವ ಲಿಂಗಾಯತ ಜಂಗಮರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡಲು ಬರುವುದಿಲ್ಲ. ಆ ರೀತಿ ಜಾತಿ ಪ್ರಮಾಣ ಪತ್ರ ಪಡೆದರೆ ಅದು ಕಾನೂನು ಬಾಹಿರವಾಗುತ್ತದೆ. ಆದರೆ, ನಿಜವಾದ ಬೇಡ ಜಂಗಮ ಸಮುದಾಯಕ್ಕೆ ಎಸ್ಸಿ ಪ್ರಮಾಣ ಪತ್ರ ಪಡೆಯಲು ಅವಕಾಶ ಇದೆ.
– ರವಿವರ್ಮಕುಮಾರ್‌, ನ್ಯಾಯವಾದಿ

– ಶಂಕರ ಪಾಗೋಜಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.