ರೈತರ ಸಾಲ ಮನ್ನಾಕ್ಕೆ ಸಿದ್ದು ಷರತ್ತು


Team Udayavani, Jun 25, 2017, 3:45 AM IST

CM-24-2017.jpg

ಬೆಂಗಳೂರು: ರೈತರ ಸಾಲ ಮನ್ನಾ ಘೋಷಣೆ ಮಾಡಿ ಅಧಿಕೃತ ಆದೇಶವನ್ನೂ ಹೊರಡಿಸಿರುವ ಕರ್ನಾಟಕ ಸರಕಾರ, ಸಾಲ ಮನ್ನಾದ ಪ್ರಯೋಜನ ಸಿಗಬೇಕಾದರೆ ಕೆಲವು ಷರತ್ತುಗಳಿಗೆ ಬದ್ಧವಾಗಿರಬೇಕು ಎಂದು ಖಡಕ್ಕಾಗಿ ಸೂಚನೆ ನೀಡಿದೆ. 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಲ್ಯಾಂಪ್ಸ್‌ , ಡಿಸಿಸಿ ಬ್ಯಾಂಕ್‌ಗಳು ಮತ್ತು ಪಿಕಾರ್ಡ್‌ ಬ್ಯಾಂಕ್‌ಗಳು ವಿತರಿಸಿದ ಅಲ್ಪಾವಧಿ ಬೆಳೆ ಸಾಲದ ಪೈಕಿ 2017ರ ಜೂನ್‌ 20ರ ವರೆಗೆ ಹೊಂದಿರುವ ಹೊರಬಾಕಿ ಸಾಲಕ್ಕೆ ಮಾತ್ರ ಸಾಲ ಮನ್ನಾ ಅನ್ವಯವಾಗುತ್ತದೆ. ಆದರೆ, ಕೃಷಿಯೇತರ ಸಾಲ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ, ಪಶುಭಾಗ್ಯ ಯೋಜನೆಯಡಿ ಪಡೆದ ಸಾಲಗಳಿಗೆ ಇದು ಅನ್ವಯವಾಗುವುದಿಲ್ಲ. ಹೊರಬಾಕಿ ಇರುವ ಅಲ್ಪಾವಧಿ ಸಾಲದ ಪೈಕಿ 50 ಸಾವಿರ ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗುತ್ತದೆ.

ರೈತರಿಗೆ ಷರತ್ತುಗಳು
1. ಸಂಪೂರ್ಣ ಸಾಲ ಚುಕ್ತಾವಾದರೂ 
ನಿಮ್ಮ ಸಾಲದ ಮರುಪಾವತಿ ಅವಧಿ ಮುಗಿಯು ವವರೆಗೆ ಹೊಸ ಸಾಲ ಅಸಾಧ್ಯ
(ಅಂದರೆ ಕಳೆದ ಮಾರ್ಚ್‌ ಅಥವಾ ಎಪ್ರಿಲ್‌ನಲ್ಲಿ ಸಾಲ ಪಡೆದಿದ್ದು, ಅದು ಮನ್ನಾ ಆದರೂ, ಈಗಲೇ ಹೊಸ ಸಾಲ ಸಿಕ್ಕಲ್ಲ. ಏನಿದ್ದರೂ ಮುಂದಿನ ಮಾರ್ಚ್‌ ಅಥವಾ ಎಪ್ರಿಲ್‌ಗೆ ಸಿಗೋದು.)

2. ರೂ. 50 ಸಾವಿರಕ್ಕಿಂತ ಹೆಚ್ಚು ಸಾಲ ಪಡೆದವರು,ಮರು ಪಾವತಿಯ ಅವಧಿಯೊಳಗೆ 50 ಸಾವಿರ ಕ್ಕಿಂತ ಹೆಚ್ಚು ಅಸಲು ಪಾವತಿಸಿರಬೇಕು.(ಅಂದರೆ 2017ರ ಜೂನ್‌ 20ಕ್ಕೆ ಹೊರಬಾಕಿ ಇರುವ ಸಾಲ ಚಾಲ್ತಿಯಲ್ಲಿದ್ದರೆ ಸಾಲ ಪಡೆದ ರೈತರು 2017ರ ಜೂ. 20 ಅಥವಾ ಸಾಲ ಮರುಪಾವತಿಗೆ ಇರುವ ಅಂತಿಮ ಗಡುವಿನೊಳಗೆ ಈ ಮೊತ್ತ ಪಾವತಿಸಿರಬೇಕು)

3. 20-06-2017ಕ್ಕೆ ಹೊರಬಾಕಿ ಇರುವ ಸಾಲ ಸುಸ್ತಿಯಾಗಿದ್ದಲ್ಲಿ, ಈ ಅವಧಿಗೆ ಬಾಕಿ ಇರುವ ಅಸಲು ಮತ್ತು ಬಡ್ಡಿ ಸೇರಿ ರೂ. 50 ಸಾವಿರವನ್ನು ಈ ವರ್ಷಾಂತ್ಯದೊಳಗೆ ಪಾವತಿಸಬೇಕು. 

4. ಯಾವುದೇ ಸದಸ್ಯರು ಒಂದಕ್ಕಿಂತ ಹೆಚ್ಚು ಸಹಕಾರ ಸಂಸ್ಥೆಗಳಲ್ಲಿ ಸಾಲ ಪಡೆದಿದ್ದರೆ ಒಂದು ಸಂಸ್ಥೆಯ ಸಾಲಕ್ಕೆ ಮಾತ್ರ ಈ ಯೋಜನೆ ಅನ್ವಯ.

5. ಒಂದು ವೇಳೆ ಸಾಲ ಪಡೆದ ರೈತರು ಮೃತರಾಗಿದ್ದಲ್ಲಿ ಅವರ ವಾರಸುದಾರರು ಸಾಲ ಮರುಪಾವತಿಸಿದರೆ ಅವರಿಗೂ ಸಾಲ ಮನ್ನಾ ಸೌಲಭ್ಯ ಅನ್ವಯ.

6. ಸಾಲ ಮನ್ನಾಕ್ಕೆ ಅರ್ಹವಿರುವ 50 ಸಾವಿರ ರೂ. ಅಸಲು ಮತ್ತು ಬಡ್ಡಿಯೊಂದಿಗೆ ಜಾರಿಯಲ್ಲಿರುವ ಬಡ್ಡಿ ಸಹಾಯಧನ ಯೋಜನೆಯ ಕ್ಲೈಮ್‌ ಬಿಲ್‌ಗ‌ಳನ್ನು ಸಾಲ ಮರುಪಾವತಿಸಲು ನಿಗದಿಪಡಿಸಿದ ತಿಂಗಳಿನ 30 ದಿನಗಳೊಳಗೆ ಸಲ್ಲಿಸಬೇಕು. 

ಸಹಕಾರ ಸಂಘಗಳಿಗೆ ಷರತ್ತುಗಳು
1. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್‌ಗಳು, ಡಿಸಿಸಿ ಬ್ಯಾಂಕ್‌ಗಳು ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಮತ್ತು ಕರ್ನಾಟಕ ರಾಜ್ಯ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

2. ವಾಣಿಜ್ಯ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಅಥವಾ ಸ್ವತಂತ್ರ ಕೃಷಿ ಪತ್ತಿನ ಸಹಕಾರ ಸಂಘಗಳ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

3.ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್‌) ಬ್ಯಾಂಕ್‌ಗಳು ಕ್ಲೆ „ಮ್‌ ಬಿಲ್‌ಗ‌ಳನ್ನು ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಕಸ್ಕಾರ್ಡ್‌) ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

4. ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಸಹಕಾರ ಸಂಘಗಳ ನಿಬಂಧಕರು ಆಡಳಿತಾತ್ಮಕ ಮಾರ್ಗಸೂಚಿಗಳನ್ನು ಹೊರಡಿಸಿ ಯೋಜನೆ ಪರಿಣಾಕಾರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.