ಸಂಶೋಧನೆಗಳು ಪಿಎಚ್‌ಡಿಗೆ ಸೀಮಿತ


Team Udayavani, Dec 15, 2019, 3:07 AM IST

sanshodhane

ಬೆಂಗಳೂರು: ಇತ್ತೀಚಿನ ಸಂಶೋಧನೆಗಳು ಪಿಎಚ್‌ಡಿಗೆ ಸೀಮಿತವಾಗುತ್ತಿವೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಆರೋಪಿಸಿದ್ದಾರೆ. ಚಿಂತನ ಚಿಲುಮೆ ಸಂಘಟನೆ, ಮಾಲೆ ಪ್ರಕಾಶನ ಸಹಯೋಗದೊಂದಿಗೆ ಶನಿವಾರ ಪ್ರಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ, 1962ರ ಭಾರತ- ಚೀನಾ ಯುದ್ಧ ಕುರಿತು ಲೇಖಕ ಯಡೂರ ಮಹಾಬಲ ಅವರು ರಚಿಸಿದ “ಯುದ್ಧ ಪೂರ್ವ ಕಾಂಡ’, “ಯುದ್ಧಕಾಂಡ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸಂಶೋಧಕ ಭೂತಕಾಲವನ್ನು ಪ್ರಧಾನವಾಗಿಟ್ಟುಕೊಂಡು ವರ್ತಮಾನಕ್ಕೆ ಅನುಗುಣವಾಗುವಂತೆ ಕೃತಿಯನ್ನು ಹೊರ ತರಬೇಕು. ಆದರೆ, ಕೆಲ ಲೇಖಕರು ಭೂತ ಕಾಲವನ್ನು ಪರಿಗಣನೆಗೆ ಪಡೆಯದೇ ಕೃತಿ ರಚಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಧ್ಯಯನ ಮಾಡದೇ ಸಂಶೋಧನೆ ಮಾಡಲಾಗುತ್ತಿದೆ ಎಂದರು.

ಬೃಹತ್‌ ದೇಶಗಳಿಗೆ ಯುದ್ಧ ಒಂದು ಉದ್ಯಮವಾಗಿದೆ. ಈ ಮೊದಲು ರಾಜಪ್ರಭುತ್ವದಲ್ಲಿ ಮತ್ತು ಪ್ರಜಾಪ್ರಭುತ್ವದಲ್ಲಿ ಯುದ್ಧಗಳು ನಡೆಯುತ್ತಿದ್ದವು. ಆದರೆ, ಈಗ ಮತದಾನಕ್ಕಾಗಿ ಹಾಗೂ ಪಕ್ಷದ ಅಸ್ತಿತ್ವಕ್ಕಾಗಿ ಯುದ್ಧಗಳನ್ನು ಮಾಡಿಯೇ ತೀರುತ್ತೇವೆ ಎಂಬ ಕಾಲ ಬಂದಿದೆ. ಸೈನಿಕನ ಬಲಿದಾನಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ವಿಷಾದಿಸಿದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಈ ನಿಟ್ಟಿನಲ್ಲಿ ಯಡೂರ ಮಹಾಬಲ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ವಿಶೇಷ. ಇತ್ತೀಚಿಗೆ ಸಂಸೃತಿಯ ಅಪವ್ಯಾಕ್ಯ ಹೆಚ್ಚಾಗುತ್ತಿದೆ. ಎಲ್ಲದಕ್ಕೂ ನೆಹರು ಅವರನ್ನು ಗುರಿಯಾಗಿಸಿ ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ಭಾರತ ಮತ್ತು ಚೀನಾ ನಡುವಿನ ಯುದ್ಧದ ಘಟನೆಗಳನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖೀಸಿದ್ದಾರೆ. ಯುದ್ಧ ಬೇಡ ಎನ್ನುವವರನ್ನು ದೇಶದ್ರೋಹಿಗಳ ಪಟ್ಟಿಗೆ ಸೇರಿಸುವ ಕಾಲ ಇದಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ “ಲೋಹಿಯಾ ವಿಚಾರಗಳ ಒಂದು ವಿಮರ್ಶೆ’ ವಿಷಯ ಕುರಿತು ವೈದ್ಯ ಬಿ.ಆರ್‌.ಮಂಜುನಾಥ, “ಆಕ್ಸಾಯ್‌ ಚಿನ್‌ ವಿವಾದದ ಇತಿಹಾಸ’ ಕುರಿತು ಸಾಹಿತ್ಯ ವಿಮರ್ಶಕ ರಾಜೇಂದ್ರ ಚೆನ್ನಿ, “ಯುದ್ಧಪೂರ್ವ ಕಾಂಡ’ ಪುಸ್ತಕ ಕುರಿತು ಚಿಂತಕ ಕೆ.ಎನ್‌. ಉಮೇಶ, “ಯುದ್ಧಕಾಂಡ’ ಪುಸ್ತಕದ ಕುರಿತು ಚಿಂತಕ ಡಾ.ಪ್ರಕಾಶ್‌ ಕೃಷ್ಣಪ್ಪ ಅವರು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.