ಶುಕ್ರವಾರವೂ ಸುರಿದು ನಾಗರಿಕರ ಕಾಡಿದ ಮಳೆರಾಯ
Team Udayavani, May 19, 2018, 11:49 AM IST
ಬೆಂಗಳೂರು: ನಗರದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ಹಲವೆಡೆ ಮರಗಳು ಉರುಳಿದ್ದು, ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಆದರೆ, ಯಾವುದೇ ಅನಾಹುತವಾಗಿಲ್ಲ.
ಶುಕ್ರವಾರ ಮಧ್ಯಾಹ್ನ ಸುರಿದ ಮಳೆಗೆ ಬನಶಂಕರಿ 2ನೇ ಹಂತದ ಬಿಡಿಎ ವಾಣಿಜ್ಯ ಸಂಕೀರ್ಣದ ಬಳಿ ಭಾರೀ ಗಾತ್ರದ ಮರವೊಂದು ಧರೆಗುರುಳಿದೆ. ಮರದ ಕೊಂಬೆಗಳು ಸಮೀಪದ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿವೆ.
ಆದರೆ, ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದಂತೆ ಹೆಬ್ಟಾಳದ ಸೀತಪ್ಪ ಬಡಾವಣೆಯ 6ನೇ ಅಡ್ಡರಸ್ತೆ, ಎಚ್ಎಸ್ಆರ್ ಬಡಾವಣೆ 1ನೇ ಹಂತ, ಜೆ.ಪಿ.ನಗರದ 2 ಹಾಗೂ 3ನೇ ಹಂತಗಳಲ್ಲಿ ತಲಾ ಒಂದು ಮರ ಉರುಳಿದ್ದು, ಮತ್ತಿಕೆರೆ, ಎಚ್ಆರ್ಬಿಆರ್ ಬಡಾವಣೆ
ಸೇರಿದಂತೆ ಹಲವು ಕಡೆ ಮುರಿದು ಬಿದ್ದದ್ದ ಮರದ ಕೊಂಬೆಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಇದರೊಂದಿಗೆ ಓಕಳಿಪುರ ಅಂಡರ್ ಪಾಸ್, ಕೆ.ಆರ್.ವೃತ್ತ ಅಂಡರ್ ಪಾಸ್ಗಳಲ್ಲಿ ಸ್ವಲ್ಪಮಟ್ಟಿಗೆ ನೀರು ನಿಂತ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ