ಪಾಲಿಕೆ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ
Team Udayavani, Aug 13, 2017, 11:21 AM IST
ಕೆ.ಆರ್.ಪುರ: ಕೆ.ಆರ್.ಪುರದ ಆಕಾಶ್ ನಗರದ ಎಂವಿಜೆ ಬಡಾವಣೆಯ ಪಾರ್ಕ್ನಲ್ಲಿ ಬಿಬಿಎಂಪಿ ತಂದಿಟ್ಟಿ ಕಬ್ಬಿಣದ ರಾಡ್ಗಳಿಗೆ 13 ವರ್ಷದ ಬಾಲಕಿ ಬಲಿಯಾಗಿದ್ದಾಳೆ. ಆಟವಾಡಲೆಂದು ಉದ್ಯಾನಕ್ಕೆ ತೆರಳಿದ್ದ ಬಾಲಕಿಯ ತಲೆಯ ಮೇಲೆ ರಾಡ್ ಬಿದ್ದು ದುರ್ಘಟನೆ ಸಂಭವಿಸಿದೆ.
ಕೆ.ಆರ್.ಪುರ ಸಮೀಪದ ಎಂಟಿಬಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಪ್ರಿಯಾಂಕ(13) ಮೃತ ಬಾಲಕಿ. ಕೃಷ್ಣಪ್ಪ ಲೇಔಟ್ ವಾಸಿಗಳಾದ ರಿಯಲ್ ಎಸ್ಟೇಟ್ ಉದ್ಯಮಿ ಸುಬ್ರಮಣ್ಯಮ್ ಹಾಗೂ ವಿಜಯ್ ಕುಮಾರಿ ದಂಪತಿಯ ಪುತ್ರಿಯಾದ ಪ್ರಿಯಾಂಕ. ಎಂವಿಜೆ ಪಾರ್ಕ್ನಲ್ಲಿ ನವೀಕರಣ ಕಾಮಗಾರಿ ಕೈಗೊಂಡಿರುವ ಬಿಬಿಎಂಪಿ, ಪಾರ್ಕ್ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಿತ್ತಾದರೂ, ಈ ಬಗ್ಗೆ ಯಾವುದೇ ಕಠಿಣ ಕ್ರಮ ಕೈಗೊಂಡಿರಲಿಲ್ಲ.
ಹೀಗಾಗಿಯೇ ಶನಿವಾರ ಸಂಜೆ 4ಗಂಟೆ ಸಮಯದಲ್ಲಿ ಪ್ರಿಯಾಂಕ ಉದ್ಯಾನವನಕ್ಕೆ ಆಟವಾಡಲು ತೆರಳಿದ್ದಳು. ಅಲ್ಲಿ ಉಯ್ನಾಲೆ ನಿರ್ಮಿಸಲೆಂದು ತಂದಿಟ್ಟಿದ್ದ ಕಬ್ಬಿಣದ ರಾಡ್ಗಳ ಬಳಿ ಪ್ರಿಯಾಂಕ್ ಆಟವಾಡುತ್ತಿದ್ದಳು ಎನ್ನಲಾಗಿದೆ. ಆಗ ರಾಡ್ವೊಂದು ತಲೆ ಮೇಲೆ ಜೋರಾಗಿ ಬಿದ್ದಿದೆ. ಗಂಭೀರ ಗಾಯಗೊಂಡ ಬಾಲಕಿಗೆ ತೀವ್ರ ರಕ್ತ ಸ್ರಾವವಾಗಿದೆ.
ರಕ್ತದ ಮಡುವಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಬೈಯ್ಯಪ್ಪನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ದಿದ್ದಾರೆ. ಆದರೆ, ಅಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಿಯಾಂಕ ಕೊನೆಯುಸಿರೆಳೆದಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್