ನೆಮ್ಮದಿ ವಾತಾವರಣ ಸೃಷ್ಟಿಯೇ ಗುರಿ
Team Udayavani, May 8, 2018, 12:32 PM IST
ಬೆಂಗಳೂರು: ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೋಮವಾರ ಅಲಸೂರು ವಾರ್ಡ್ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ನಡೆಸಿದರು. ಸಂಸದ ಪಿ.ಸಿ.ಮೋಹನ್ ಸೇರಿದಂತೆ ಪಕ್ಷದ ನಾಯಕರು ಹಾಗೂ ಮುಖಂಡರ ಜತೆ ಮನೆ ಮನೆಗೆ ತೆರಳಿದ ಅವರು ತಮಗೆ ಆಶೀರ್ವಾದ ನೀಡುವಂತೆ ಮನವಿ ಮಾಡಿದರು.
ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ, ಎಲ್ಲ ಧರ್ಮದವರು ನೆಮ್ಮದಿಯಿಂದ ಜೀವನ ನಡೆಸುವ ವಾತಾವರಣ ನಿರ್ಮಾಣ ಮಾಡಲಾಗುವುದು. ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸಲಾಗುವುದು ಎಂದು ಹೇಳಿದರು. ಈ ಹಿಂದೆ ಶಾಸಕನಾಗಿದ್ದಾಗ ಆರೋಗ್ಯ ತಪಾಸಣೆ ಶಿಬಿರ, ಹಿರಿಯ ನಾಗರಿಕರಿಗೆ ಉಚಿತ ಕನ್ನಡಕ ವಿತರಣೆ ಸೇರಿದಂತೆ ಹಲವಾರು ಶಿಬಿರಗಳನ್ನು ಮಾಡಿದ್ದು,
ಕ್ಷೇತ್ರದಲ್ಲಿದ್ದ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಹೇಳಿದರು. ಈ ಕ್ಷೇತ್ರದ ಶಾಸಕನಾಗಿ ಜನತೆಯ ಜತೆ ಉತ್ತಮ ಸಂಬಂಧ ಹೊಂದಿದ್ದು, ನಾನು ಈ ಹಿಂದೆ ಮಾಡಿರುವ ಕೆಲಸಗಳು ನನಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ