ಶಾಲಾ ಮಕ್ಕಳ ಬ್ಯಾಗ್‌ ಭಾರ ಇಳಿಸಿದ ಸರ್ಕಾರ


Team Udayavani, May 4, 2019, 3:03 AM IST

shala

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಬ್ಯಾಗ್‌ ಭಾರ ಎಷ್ಟಿರಬೇಕು ಎಂಬುದನ್ನು ಸ್ಪಷ್ಟಪಡಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ ತೂಕವು ವಿದ್ಯಾರ್ಥಿಗಳ ದೇಹ ತೂಕಕ್ಕಿಂತ ಸರಾಸರಿ ಶೇ.10ರಷ್ಟು ಮೀರಬಾರದು, 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಮನೆ ಕೆಲಸ (ಹೋಂ ವರ್ಕ್‌) ನೀಡಬಾರದು, 3ನೇ ಶನಿವಾರವನ್ನು “ಬ್ಯಾಗ್‌ ರಹಿತದಿನ’ ಆಚರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿ ಆದೇಶ ಹೊರಡಿಸಿದೆ.

2019-20ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1ನೇ ತರಗತಿ ಮಕ್ಕಳಿಗೆ 2 ಕೆಜಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಗರಿಷ್ಠ 5 ಕೆಜಿ ತೂಕ ಮೀರದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ.

ಮಕ್ಕಳಿಗೆ ಹೆಚ್ಚಿನ ಹೊರೆ ಹೊರಿಸುವುದರಿಂದ ಬೆನ್ನು ನೋವು, ಕತ್ತು ನೋವುಗಳು ಶಾಶ್ವತವಾಗಿ ಕಾಣಿಸಿಕೊಳ್ಳಲಿವೆ ಎಂಬ ಸದುದ್ದೇಶದಿಂದ ಬ್ಯಾಗ್‌ ತೂಕ ಕಡಿಮೆ ಮಾಡಲಾಗಿದ್ದು, 1ರಿಂದ 2ನೇ ತರಗತಿ ವಿದ್ಯಾರ್ಥಿಗಳಿಗೆ 1.5ರಿಂದ 2 ಕಿ.ಗ್ರಾಂ., 3ರಿಂದ5ನೇ ತರಗತಿ 2ರಿಂದ 3 ಕಿ.ಗ್ರಾಂ., 6ರಿಂದ8ನೇ ತರಗತಿ 3ರಿಂದ 4 ಕಿ.ಗ್ರಾಂ., 9ರಿಂದ 10ನೇ ತರಗತಿಗೆ 4ರಿಂದ5 ಕಿ.ಗ್ರಾಂ. ಮೀರಬಾರದು ಎಂದು ಸೂಚಿಸಿದೆ.

ವಿದ್ಯಾರ್ಥಿಗಳಿಗೆ ಆಯಾ ದಿನದ ವೇಳಾಪಟ್ಟಿಗೆ ಅನುಗುಣವಾಗಿ ಪಠ್ಯಪುಸ್ತಕ, ನೋಟ್‌ ಪುಸ್ತಕಗಳನ್ನು ಶಾಲೆಗೆ ತರಲು ಅಗತ್ಯ ಸೂಚನೆ ನೀಡಬೇಕು. ಶಾಲೆಗಳಲ್ಲಿಯೇ ಶುದ್ಧ ನೀರಿನ ವ್ಯವಸ್ಥೆ ಮಾಡಬೇಕು, 100 ಪೇಜ್‌ ಮೀರಿದ ನೋಟ್‌ ಪುಸ್ತಕಗಳನ್ನು ನಿಗದಿಗೊಳಿಸಬಾರದು, ಕಡಿಮೆ ಖರ್ಚಿನ ಹಗುರವಾದ, ದೀರ್ಘ‌ಕಾಲ ಬಾಳಿಕೆ ಬರುವಂತಹ ಬ್ಯಾಗ್‌ ಹಾಗೂ ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ಬಳಸುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ಸರ್ಕಾರ ತಿಳಿಸಿದೆ.

ಬ್ಯಾಗ್‌ ರಹಿತ ದಿನ: ಪ್ರತಿ ತಿಂಗಳ 3ನೇ ಶನಿವಾರವನ್ನು “ಬ್ಯಾಗ್‌ ರಹಿತ ದಿನ’ವನ್ನಾಗಿ ಆಚರಿಸಬೇಕು. ಆ ದಿನ ಶಿಕ್ಷಕರು ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಬೇಕು.

ವಿಜ್ಞಾನ ಪ್ರಯೋಗ ಮತ್ತು ಪ್ರದರ್ಶನಗಳು, ಸಾಮಾನ್ಯ ಜ್ಞಾನ, ಶೈಕ್ಷಣಿಕ ಸಂಘದ ಚಟುವಟಿಕೆಗಳು, ಚಿತ್ರಕಲೆ, ಚಿತ್ರಗಳಿಗೆ ಬಣ್ಣ ತುಂಬುವ ಚಟುವಟಿಕೆ, ಭಕ್ತಿಗೀತೆಗಳು, ದೇಶಭಕ್ತಿ ಗೀತೆಗಳ ಚಟುವಟಿಕೆ, ನಕ್ಷೆ ಓದಿಸುವುದು, ಕ್ರೀಡೆಗೆ ಪ್ರೋತ್ಸಾಹ ನೀಡುವುದು, ಗಣಿತದ ವಿನೋದ, ಅಬ್ಯಾಕಸ್‌ ಸೇರಿ ಶಾಲಾ ಪರಿಸರಕ್ಕೆ ಅನುಗುಣವಾಗಿ ಶೈಕ್ಷಣಿಕ ಚಟುವಟಿಕೆ ಹಮ್ಮಿಕೊಳ್ಳಲು ನಿರ್ದೇಶಿಸಿದೆ.

ಎಷ್ಟು ತೂಕ
ತರಗತಿ ಬ್ಯಾಗ್‌ ತೂಕ
1-2 1.5-2 ಕೆ.ಜಿ
3-5 2-3 ಕೆ.ಜಿ
6-8 3-4 ಕೆ.ಜಿ
9-10 4-5 ಕೆ.ಜಿ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.