ಕೈ ಕೊಟ್ಟವರಿಗೆ ಬಂಪರ್‌ ಕೊಡುಗೆ


Team Udayavani, Sep 19, 2019, 3:09 AM IST

kai-kotta

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಪ್ರತಿಪಕ್ಷಗಳ ಶಾಸಕರಿಗೆ ಒಂದೊಂದೇ ಶಾಕ್‌ ನೀಡುತ್ತಿದ್ದು, ಅನರ್ಹ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆಯಾಗಿದ್ದ ಅನುದಾನಕ್ಕೂ ಕತ್ತರಿ ಹಾಕುವ ಮೂಲಕ ಆಘಾತ ಉಂಟು ಮಾಡಿದೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಕ್ಷೇತ್ರಗಳಿಗೆ 25 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ 14ನೇ ಹಣಕಾಸು ಆಯೋಗದ ಅನುದಾನದಲ್ಲಿ ಪ್ರತಿ ಶಾಸಕರ ಕ್ಷೇತ್ರಗಳಿಗೆ 5 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆದರೆ, ಈಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ನೀಡಲಾಗಿದ್ದ ಅನುದಾನವನ್ನು ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಆದರೆ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿದ್ದು ಮೈತ್ರಿ ಸರ್ಕಾರದ ವಿರುದ್ದ ಬಂಡೆದ್ದು ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ನಗರದ ಐವರು ಅನರ್ಹ ಶಾಸಕರಿಗೆ ಮಾತ್ರ ಬಂಪರ್‌ ಕೊಡುಗೆ ನೀಡಲಾಗಿದ್ದು, ಅವರಿಗೆ ನೀಡಿದ ಯಾವುದೇ ಅನುದಾನ ಕಡಿತಗೊಳಿಸದೇ ಇರುವುದು ಹೊಸ ಸರ್ಕಾರ ಪ್ರತಿಪಕ್ಷಗಳ ಶಾಸಕರನ್ನು ಮಾತ್ರ ಗುರಿಯಾಗಿಸಿ ನಿರ್ಧಾರ ತೆಗೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುವಂತಿದೆ.

ಬಿಬಿಎಂಪಿ ಬಜೆಟ್‌ನಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ವಿಜಯನಗರ, ಪುಲಕೇಶಿನಗರ, ಶಿವಾಜಿನಗರ, ಸರ್ವಜ್ಞನಗರ, ಶಾಂತಿನಗರ, ಬ್ಯಾಟರಾಯನಪುರ ಕ್ಷೇತ್ರಗಳಿಗೆ ತಲಾ 20 ಕೋಟಿ ಗಾಂಧಿನಗರ ಹಾಗೂ ಯಶ್ವಂತಪುರ ಕ್ಷೇತ್ರಗಳಿಗೆ ತಲಾ 25 ಕೋಟಿ ತಲಾ 25 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿತ್ತು. ಉಳಿದ ಕ್ಷೇತ್ರಗಳಿಗೆ ತಲಾ ಹತ್ತು ಕೋಟಿ ಎಂದು ನಿಗದಿ ಪಡಿಸಲಾಗಿತ್ತು.

ಆದರೆ, ಪರಿಷ್ಕೃತ ಬಜೆಟ್‌ನಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ನೀಡಿರುವ ಅನುದಾನವನ್ನು 20 ಕೋಟಿಯಿಂದ 5 ಕೋಟಿಗೆ ಇಳಿಸಲಾಗಿದೆ. ಆದರೆ, ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸರ್ಕಾರ ಬರಲು ಕಾರಣೀಕರ್ತರಾಗಿರುವ ಶಾಸಕರ ಕ್ಷೇತ್ರಗಳಾದ ಶಿವಾಜಿನಗರ, ಯಶವಂತಪುರ, ಕೆ.ಆರ್‌.ಪುರ, ಆರ್‌.ಆರ್‌. ನಗರ, ಮಹಾಲಕ್ಷ್ಮೀ ಲೇಔಟ್‌ ಅನುದಾನವನ್ನು ಕಡಿತಗೊಳಿಸದೇ ಯಥಾ ಸ್ಥಿತಿಯಲ್ಲಿಯೇಪರಿಷ್ಕೃತ ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ.

ಆದರೆ, ಕಾಂಗ್ರೆಸ್‌ ಶಾಸಕರೇ ಪ್ರತಿನಿಧಿಸುವ ರಾಮಲಿಂಗಾ ರೆಡ್ಡಿ ಪ್ರತಿನಿಧಿಸುವ ಬಿಟಿಎಂ ಲೇಔಟ್‌ ಹಾಗೂ ಅವರ ಪುತ್ರಿ ಸೌಮ್ಯ ರೆಡ್ಡಿ ಪ್ರತಿನಿಧಿಸುವ ಜಯನಗರ ಕ್ಷೇತ್ರದ ಅನುದಾನದ ಬಗ್ಗೆ ಯಾವುದೇ ಬದಲಾವಣೆ ಮಾಡದಿರುವುದು ಕೂಡ ಚರ್ಚೆಗೆ ಗ್ರಾಸವಾಗುವಂತಿದೆ. ಅದೇ ರೀತಿ ಬಿಬಿಎಂಪಿಗೆ 14ನೇ ಹಣಕಾಸು ಆಯೋಗದಿಂದ ಬಿಡುಗಡೆಯಾದ ಅನುದಾನದಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಶಾಸಕರ ಕ್ಷೇತ್ರಗಳಿಗೂ 5 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.

ಪರಿಷ್ಕೃತ ಬಜೆಟ್‌ನಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಹೆಬ್ಬಾಳ, ವಿಜಯನಗರ, ಪುಲಕೇಶಿನಗರ, ಚಾಮರಾಜಪೇಟೆ, ಶಾಂತಿನಗರ, ಗಾಂಧಿನಗರ ಕ್ಷೇತ್ರಗಳಿಗೆ ನೀಡಿರುವ ಅನುದಾನವನ್ನು 5 ಕೋಟಿಯಿಂದ 2 ಕೋಟಿಗೆ ಇಳಿಕೆ ಮಾಡಲಾಗಿದ್ದು, ಅನರ್ಹರ ಕ್ಷೇತ್ರಗಳಿಗೆ ನೀಡಿರುವ ಅನುದಾನವನ್ನು ಮಾತ್ರ ಕಡಿತಗೊಳಿಸದೇ ಇರುವುದು ಕಾಂಗ್ರೆಸ್‌ ಶಾಸಕರನ್ನು ಕೆರಳಿಸುವಂತೆ ಮಾಡಿದೆ.

2019-20 ನೇ ಸಾಲಿನ ಬಿಬಿಎಂಪಿ ಪಾಲಿಕೆ ಆದಾಯ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬರುವ ಅನುದಾನವನ್ನು ಲೆಕ್ಕ ಹಾಕಿ 12997 ಕೋಟಿ ಆದಾಯದ ನಿರೀಕ್ಷೆ ಇಟ್ಟು ಬಜೆಟ್‌ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಆದರೆ, ವೆಚ್ಚದ ಪ್ರಮಾಣ 12,958 ಕೋಟಿ ಎಂದು ಅಂದಾಜಿಸಲಾಗಿತ್ತು. ಹೊಸ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಬಿಎಂಪಿ ಅನುಮೋದನೆ ಪಡೆದ ಬಜೆಟ್‌ಗೆ ತಡೆಯೊಡ್ಡಿ ಪರಿಷ್ಕೃರಣೆಗೊಳಿಸಲು ಸೂಚಿಸಿತ್ತು.

ಬಿಬಿಎಂಪಿ ಆಯವ್ಯಯದಲ್ಲಿ ನಿರೀಕ್ಷಿತ ಆದಾಯ ಬರದಿದ್ದರೂ, ವೆಚ್ಚಗಳಿಗೆ ಬರುವ ಅನುದಾನಕ್ಕೆ ಅನುಗುಣವಾಗಿ ಜಾಬ್‌ ಕೋಡ್‌ ನೀಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದರಿಂದ ಪ್ರತಿ ವರ್ಷ ಗುತ್ತಿಗೆದಾರರಿಗೆ ನೀಡುವ ಬಾಕಿ ಪ್ರಮಾಣ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕೆ ಅನುದಾನ ಕಡಿತ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. 2018-19 ನೇ ಸಾಲಿಗೆ ಹೋಲಿಸಿದಾಗ 19-20 ನೇ ಸಾಲಿನಲ್ಲಿ ಪಾಲಿಕೆ ಸ್ವಂತ ಮೂಲಗಳಿಂದ ಸಂಗ್ರಹಿಸಿದ ಆದಾಯ ಮತ್ತು ವೆಚ್ಚದ ಲೆಕ್ಕದಲ್ಲಿ ವ್ಯತ್ಯಾಸವಿದ್ದು,

ಆದಾಯದ ಪ್ರಮಾಣ 148.51 ಇದ್ದು, ವೆಚ್ಚದ ಪ್ರಮಾಣ 151.90 ಯಷ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನದಲ್ಲಿಯೂ ಅದೇ ರೀತಿಯ ವ್ಯತ್ಯಾಸವಿರುವುದರಿಂದ ಆಯವ್ಯಯ ಪರಿಷ್ಕರಿಸಲು ಸರ್ಕಾರ ಸೂಚನೆ ನೀಡಿದ್ದು, ಅದರಂತೆ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಯೋಜನೆಗಳಿಗೆ ಕತ್ತರಿ ಹಾಕಿ ಪರಿಷ್ಕೃತಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆಯಾಗಿದ್ದ ಹಣ ವಾಪಸ್‌ ಪಡೆಯಲಾಗಿದ್ದು ಕಾಂಗ್ರೆಸ್‌ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ.

ನಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಬಿಡುಗಡೆಯಾಗಿರುವ ಹಣವನ್ನು ವಾಪಸ್‌ ಪಡೆದರೆ ನಾವು ಹೇಗೆ ಕೆಲಸ ಮಾಡುವುದು. ಹಣ ಬಿಡುಗಡೆಯಾಗಿದೆ ಎಂದು ಜನರಿಗೆ ಭರವಸೆ ನೀಡಿ ಕೆಲಸ ಆರಂಭಿಸಿರುತ್ತೇವೆ. ಈ ಸಂದರ್ಭದಲ್ಲಿ ಹಣ ವಾಪಸ್‌ ಪಡೆದರೆ, ಜನರಿಗೆ ಏನು ಉತ್ತರ ಹೇಳುವುದು. ಈ ರೀತಿ ದ್ವೇಷ ಮಾಡಿದರೆ ಹೇಗೆ ?
-ಎನ್‌.ಎ. ಹ್ಯಾರೀಸ್‌, ಶಾಂತಿನಗರ ಕಾಂಗ್ರೆಸ್‌ ಶಾಸಕ

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.