ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  


Team Udayavani, Jun 4, 2023, 2:42 PM IST

ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  

ಬೆಂಗಳೂರು: ಮದ್ಯ ಅಥವಾ ಮಾದಕ ವಸ್ತು ವ್ಯಸನಿಯಾಗಿದ್ದರೆ ಅಂತಹ ವ್ಯಕ್ತಿಯನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಸನ ಮುಕ್ತ ಕೇಂದ್ರದ ಹೆಸರಿನಲ್ಲೇ ಡ್ರಗ್ಸ್‌ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಶ್ರೀನಿವಾಸ ನಗರದ ನಿವಾಸಿ ಸುಹಾಸ್‌ಗೌಡ ಅಲಿಯಾಸ್‌ ಸೂರಜ್‌ಗೌಡ (32) ಬಂಧಿತ. ಆರೋಪಿಯಿಂದ 11.3 ಗ್ರಾಂ ಎಂಡಿಎಂಎ, 3.5 ಗ್ರಾಂ ಎಕ್ಸೈಸಿ ಮಾತ್ರೆಗಳು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇತ್ತೀಚೆಗೆ ಹೊಸಕೆರೆಹಳ್ಳಿಯ ಕಾಲೇಜುವೊಂದರ ಬಳಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ. ಈ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಬಳಿಕ ಆರೋಪಿಯ ವಿಚಾರಣೆಯಲ್ಲಿ ತಾನು ವ್ಯಸನ ಮುಕ್ತ ಕೇಂದ್ರ ನಡೆಸುತ್ತಿರುವುದು ಗೊತ್ತಾಗಿದೆ. ಕೆಂಗೇರಿಯಲ್ಲಿರುವ ಪೂರ್ಣ ಪ್ರಜ್ಞಾ ಫೌಂಡೇಷನ್‌ ಹೆಸರಿನಲ್ಲಿ ಆರೋಪಿ ಮದ್ಯ ಮತ್ತು ಮಾದಕವಸ್ತು ವ್ಯಸನ ಮುಕ್ತ ಕೇಂದ್ರವನ್ನು ನಡೆಸುತ್ತಿದ್ದು, ಈತ ಅವಿವಾಹಿತನಾಗಿದ್ದಾನೆ. ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಸೇರುತ್ತೇನೆ. ಅದಕ್ಕಾಗಿ ಹಣದ ಅಗತ್ಯವಿದೆ ಎಂದು ಹೇಳಿ ಮನೆಯರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆದರಿಂದ ಮನೆಯವರು ಸುಮಾರು 40 ಲಕ್ಷ ರೂ. ಸಾಲ ಮಾಡಿಕೊಟ್ಟಿದ್ದರು. ಆದರೆ, ಈ ಹಣವನ್ನು ಮೋಜು-ಮಸ್ತಿ ಮಾಡಿಕೊಂಡು ಕಾಲ ಕಳೆಯುತ್ತಿದ್ದು, ಐಷಾರಾಮಿ ಹೋಟೆಲ್‌ಗ‌ಳಲ್ಲಿ ವಾಸವಾಗಿ ಮಾದಕ ವಸ್ತು ಸೇವಿಸಿಕೊಂಡು ಜೀವನ ಕಳೆಯುತ್ತಿದ್ದ. ಅದರಿಂದ ಆತನ ಪೋಷಕರು ಆರೋಪಿಯನ್ನು ಮನೆಯಿಂದ ಹೊರ ಹಾಕಿದ್ದರು ಎಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಸನ ಮುಕ್ತ ಕೇಂದ್ರದ ಮುಖ್ಯಸ್ಥನಾಗಿದ್ದು ಹೀಗೆ… : ಅತಿಯಾದ ಮಾದಕ ವಸ್ತು ವ್ಯಸನಿಯಾಗಿದ್ದ ಸುಹಾಸ್‌ ಗೌಡ, ಸುಮಾರು 6 ವರ್ಷಗಳ ಕಾಲ ಕೆಂಗೇರಿಯಲ್ಲಿರುವ ಪೂರ್ಣ ಪ್ರಜ್ಞಾ ಫೌಂಡೇಷನ್‌ ಮದ್ಯ ಮತ್ತು ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ರೋಗಿಯಾಗಿದ್ದ. ಬಳಿಕ ಕೆಲ ದಿನಗಳ ಕಾಲ ವ್ಯಸನ ಮುಕ್ತನಾಗಿದ್ದ. ಈ ವೇಳೆ ಕೇಂದ್ರದ ಮಾಲೀಕರ ಜತೆ ಮಾತುಕತೆ ನಡೆಸಿ, ತಾನೂ ಕೂಡ ಕೇಂದ್ರದ ಮೇಲೆ ಹಣ ಹೂಡಿಕೆ ಮಾಡುತ್ತೇನೆ ಎಂದು ಶೇ.25ರಷ್ಟು ಹೂಡಿಕೆ ಮಾಡಿದ್ದ. ಬಳಿಕ ಅದರ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಎರಡ್ಮೂರು ವರ್ಷಗಳಿಂದ ಈತನೇ ಕೇಂದ್ರ ನಡೆಸುತ್ತಿದ್ದಾನೆ. ಈ ಮಧ್ಯೆ ಕಳೆದ ಎರಡು ತಿಂಗಳ ಹಿಂದೆ ಈತನ ತಂದೆ ತೀರಿಕೊಂಡಿದ್ದರು. ಈ ವೇಳೆ ಖಿನ್ನತೆಗೊಳಗಾಗಿ ಆತ್ಮಹತ್ಯೆಗೂ ಯತ್ನಿಸಿದ್ದ. ಆಗಿನಿಂದಲೂ ಮತ್ತೆ ಮಾದಕ ವಸ್ತು ವ್ಯಸನಿಯಾಗಿದ್ದು, ಕೇಂದ್ರದಲ್ಲಿರುವ ರೋಗಿಗಳಿಗೂ ಎಂಡಿಎಂಎ, ಗಾಂಜಾ, ಕೋಕೇನ್‌ ನೀಡುತ್ತಿದ್ದ. ಹೀಗೆ ಮೈಸೂರಿನಿಂದ ಮಾದಕ ವಸ್ತು ತಂದು ಕಳೆದ 6 ತಿಂಗಳಿನಿಂದ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.