ವಾಹನ ಸವಾರರ ಕಾಡಿದ ಮಳೆ
Team Udayavani, Aug 31, 2018, 12:11 PM IST
ಬೆಂಗಳೂರು: ಕೆಲ ದಿನಗಳಿಂದ ವಿರಾಮ ನೀಡಿದ್ದ ಮಳೆ ನಗರದಲ್ಲಿ ಗುರುವಾರ ಮತ್ತೆ ಅಬ್ಬರಿಸಿತು. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಜತೆಗೆ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಸಾರ್ವಜನಿಕರು ಪರದಾಡಿದರು.
ಸಂಜೆ 6 ಗಂಟೆ ಸುಮಾರಿಗೆ ಶುರುವಾದ ಮಳೆ, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಪ್ರಮುಖ ರಸ್ತೆಗಳು, ಅಂಡರ್ಪಾಸ್ಗಳು, ಜಂಕ್ಷನ್ಗಳು ಜಲಾವೃತಗೊಂಡವು. ಪರಿಣಾಮ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿತು. ಕೆಲಸ ಮುಗಿಸಿಕೊಂಡು ಮನೆ ಸೇರುವ ಧಾವಂತದಲ್ಲಿದ್ದ ಜನರಿಗೆ ಮಳೆಯ ಬಿಸಿ ತುಸು ಜೋರಾಗೇ ತಟ್ಟಿತು.
ಓಕಳೀಪುರ, ಮಲ್ಲೇಶ್ವರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ರಾಜರಾಜೇಶ್ವರಿ ನಗರ, ಹೆಬ್ಟಾಳ ಮೇಲ್ಸೇತುವೆ ಮತ್ತಿತರ ಕಡೆಗಳಲ್ಲಿ ಕಿ.ಮೀ. ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲಹೊತ್ತಿನಲ್ಲಿ ಮಳೆ ಅಬ್ಬರ ಕಡಿಮೆ ಆಗುತ್ತಿದ್ದಂತೆ, ಸಂಖಚಾರ ವ್ಯವಸ್ಥೆ ಸಹಜ ಸ್ಥಿತಿಯತ್ತ ಮರಳಿತು. ಬಸ್ಗಳನ್ನು ಅವಲಂಬಿಸಿದವರು ಗಂಟೆಗಟ್ಟಲೆ ಕಾದುಕುಳಿತರು.
ನಗರದ ಹೊರವಲಯದಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ವರ್ತೂರಿನಲ್ಲಿ ಅತಿ ಹೆಚ್ಚು 25.5 ಮಿ.ಮೀ. ಮಳೆ ಬಿದ್ದಿದೆ. ಉಳಿದಂತೆ ಕೋರಮಂಗಲ 7.5 ಮಿ.ಮೀ., ಎಚ್ಎಸ್ಆರ್ ಲೇಔಟ್ 13.5, ನಾಗಪುರ 13.5, ತಾವರೆಕೆರೆ 19, ದೊಡ್ಡನೆಕ್ಕುಂದಿ 22, ಹಾಲನಾಯಕನಹಳ್ಳಿ 12.5, ಲಾಲ್ಬಾಗ್ 6, ಕೆಂಗೇರಿ 3, ರಾಜರಾಜೇಶ್ವರಿನಗರ 4, ಹೆಸರಘಟ್ಟ ವ್ಯಾಪ್ತಿಯಲ್ಲಿ 2 ಮಿ.ಮೀ. ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ