ಸಿಐಡಿ ಕಾರ್ಯವೈಖರಿಗೆ ಹೈಕೋರ್ಟ್ ಬೇಸರ
Team Udayavani, Mar 13, 2019, 6:46 AM IST
ಬೆಂಗಳೂರು: ವಕೀಲೆ ಎಸ್.ಧರಣಿ ಆತ್ಮಹತ್ಯೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಮತ್ತೆ ಬೇಸರ ಹೊರಹಾಕಿರುವ ಹೈಕೋರ್ಟ್, ಪ್ರಕರಣದ “ಕೇಸ್ ಡೈರಿ’ ಸಲ್ಲಿಸುವಂತೆ ಸಿಐಡಿ ಪೊಲೀಸರಿಗೆ ಮಂಗಳವಾರ ನಿರ್ದೇಶನ ನೀಡಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಸಲ್ಲಿಸಿರುವ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತನಿಖೆ ವಿಚಾರವಾಗಿ ಸಿಐಡಿ ಪೊಲೀಸರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.
ಅರ್ಜಿ ವಿಚಾರಣೆ ವೇಳೆ, ಪ್ರಮಾಣಪತ್ರದೊಂದಿಗೆ ತನಿಖೆಯ ಪ್ರಗತಿಯ ವಿವರಣಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್, ಕೃತ್ಯಕ್ಕೆ ಕಾರಣರಾದ ಆರೋಪಿಗಳ ಸುಳಿವು ಸಿಕ್ಕಿದೆ. ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಕೆಲವರು ತಲೆ ಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಕ್ರಮ ಜರುಗಿಸಲಾಗಿದೆ ಎಂದರು. ಇದಕ್ಕೆ ಪೀಠ, ಸಿಐಡಿ ತನಿಖೆ ಮುನ್ನಾ ಏನೆಲ್ಲಾ ಆಗಿತ್ತು. ಬಳಿಕ ಏನೆಲ್ಲಾ ಬೆಳವಣಿಗೆಗಳು ನಡೆದಿವೆ. ಪ್ರಕರಣದ ಕೇಸ್ ಡೈರಿ ಸಲ್ಲಿಸಬೇಕು ಎಂದು ಸಿಐಡಿಗೆ ಆದೇಶಿಸಿ, ವಿಚಾರಣೆ ಮಾ.19ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್