ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಹೈಕೋರ್ಟ್‌ ತರಾಟೆ


Team Udayavani, Aug 28, 2018, 12:46 PM IST

highcourt.jpg

ಬೆಂಗಳೂರು: ಬಡವಾಣೆ ನಿರ್ಮಾಣ ಉದ್ದೇಶಕ್ಕಾಗಿ ಬಿಡಿಎಗೆ ಭೂಮಿ ಬಿಟ್ಟುಕೊಟ್ಟವರಿಗೆ ಪರ್ಯಾಯ ಭೂಮಿ ನೀಡದೆ ಸತಾಯಿಸುತ್ತಿರುವ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್‌. ಚೌಹಾಣ್‌ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಗೆ ಹಾಜರಿದ್ದ ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌, ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿತು.

ಬಡಾವಣೆ ನಿರ್ಮಾಣಕ್ಕೆ ಜಮೀನು ಸ್ವಾಧೀನಪಡಿಸಿಕೊಳ್ಳುವಾಗ ರಾಜನ ತರಹ ಅತ್ಯುತ್ಸಾಹ ತೋರಿಸುತ್ತೀರಿ. ಅವರಿಗೆ ಪರ್ಯಾಯ ಭೂಮಿ ನೀಡುವಾಗ ಅನಗತ್ಯ ವಿಳಂಬ ಮಾಡುತ್ತೀರಿ. ಇದೊಂಥರಾ ವಿಮಾ ಕಂಪೆನಿಗಳು ಜನರಿಂದ ಪಾಲಿಸಿ ಮಾಡಿಸಿಕೊಂಡ ಬಳಿಕ, ವಿಮಾ ಸೌಲಭ್ಯಗಳನ್ನು ಪಡೆಯಲು ಬಂದಾಗ ಹತ್ತಾರು ನಿಯಮಗಳನ್ನು ಹೇರುವಂತಿದೆ ನಿಮ್ಮ ಕಾರ್ಯವೈಖರಿ ಎಂದು ನ್ಯಾಯಪೀಠ ಅಸಮಾಧಾನವ್ಯಕ್ತಪಡಿಸಿತು.

ಬಲಾಡ್ಯರು, ರಾಜಕಾರಣಿಗಳ ಕೆಲಸವಾಗಿದ್ದರೆ ಬೇಗ ಮುಗಿಸುತ್ತಿದ್ದಿರಿ. ಆವರು ಹೇಗೋ ಮಾಡಿ ಜಮೀನು ಪಡೆದುಕೊಳ್ಳುತ್ತಾರೆ. ಬಡವರು ನಿಮಗೆ ಜಮೀನು ಕೊಟ್ಟು ಪರ್ಯಾಯ ಭೂಮಿ ಸಿಗದಿದ್ದರೆ ಎಲ್ಲಿಗೆ ಹೋಗಬೇಕು. ಅರ್ಜಿದಾರರಿಗೆ ಭೂಮಿ ನೀಡುವಂತೆ  ತೀರ್ಪು ನೀಡಿ ಎರಡು ವರ್ಷ ಕಳೆದರೂ ಇದುವರೆಗೂ ಪಾಲಿಸಿಲ್ಲ ಎಂದರೆ ಏನರ್ಥ?  

ಪರ್ಯಾಯ ಭೂಮಿ ಕೊಡುತ್ತೇವೆ ಎಂದು ನೀವು ಹೇಳುತ್ತೀರಿ, ಸಚಿವ ಸಂಪುಟದಲ್ಲಿ ಏಕವ್ಯಕ್ತಿಗೆ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬ ತೀರ್ಮಾನವಾಗುತ್ತದೆ ಎಂದು  ನ್ಯಾಯಪೀಠ ಖಾರವಾಗಿ  ಹೇಳಿತು. ಕೋರ್ಟ್‌ ಆದೇಶಗಳನ್ನು ಹಗುರವಾಗಿ ಪರಿಗಣಿಸಿ ಉಲ್ಲಂಘನೆ ಮಾಡುವುದು ಪದೇ ಪದೇ ಆಗುತ್ತಿದೆ. ಸರ್ಕಾರದ ಈ ಅಸಡ್ಡೆ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಾಜ್‌ ಕುಮಾರ್‌ ಖತ್ರಿ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪ ನಿಗದಿಗೆ ಸಂಬಂಧಿಸಿದಂತೆ  ಸೆ.5ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಆ ದಿನ ವಿಚಾರಣೆಗೆ ಮೂವರು ಹಾಜರಿರುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣ ಏನು?: ಆರ್‌ಎಂವಿ ಬಡವಾಣೆ ನಿರ್ಮಾಣಕ್ಕೆ  ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಗೆ ಪರ್ಯಾಯ ಭೂಮಿ ನೀಡುವಂತೆ ಏಕಸದಸ್ಯ ಪೀಠ  2016ರಲ್ಲಿ ತೀರ್ಪು ನೀಡಿದ್ದರೂ ಇದುವೆರಗೂ ಪಾಲಿಸಿಲ್ಲ ಎಂದು ಎಸ್‌.ಎನ್‌ ನರಸಿಂಹ ಮೂರ್ತಿ, ಸುಧಾ ಎಂಬುವವರು ಬಿಡಿಎ,ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಅರ್ಜಿದಾರರ ಪರವಾಗಿ  ವಕೀಲ ಚಂದ್ರನಾಥ ಅರಿಗ ವಾದಿಸಿದರು.

ಟಾಪ್ ನ್ಯೂಸ್

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.