ನಿವೇಶನಕ್ಕಾಗಿ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದ ಪತಿರಾಯ


Team Udayavani, Aug 23, 2017, 12:10 PM IST

hus-wife-hang.jpg

ಬೆಂಗಳೂರು: ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಂಡುವಂತೆ ನಿತ್ಯ ಪತ್ನಿಯನ್ನು ಹಿಂಸಿಸುತ್ತಿದ್ದ ವ್ಯಕ್ತಿಯೊಬ್ಬ ಕೊನೆಗೆ ಆಕೆಯನ್ನು ಪ್ಲಾಸ್ಟಿಕ್‌ ಹಗ್ಗದಿಂದ ಕುತ್ತಿಗೆ ಬಿಗಿದು ಕೊಂದಿರುವ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಜಾನಕಿ ಜ್ಯೋತಿ (35) ಕೊಲೆಯಾದ ಮಹಿಳೆ. ಆರೋಪಿ ಪತಿ ಚಂದ್ರಶೇಖರ್‌(43)ಗಾಗಿ ಹುಡುಕಾಟ ನಡೆಯುತ್ತಿದೆ. ಜ್ಯೋತಿ ಹೆಸರಿನಲ್ಲಿದ್ದ ಆಸ್ತಿಯನ್ನು ತನ್ನ ಹೆಸರಿಗೆ ಬರೆದು ಕೊಡುವಂತೆ ಪತಿ ಪೀಡಿಸುತ್ತಿದ್ದ ಎನ್ನಲಾಗಿದ್ದು, ಇದೇ ವಿಚಾರವಾಗಿ ಆಕೆಯನ್ನು ಮಂಗಳವಾರ ನಸುಕಿನಲ್ಲಿ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮೂಲದ ಚಂದ್ರಶೇಖರ್‌, ಬೆಂಗಳೂರಿನಲ್ಲಿ ಸಭೆ ಸಮಾರಂಭಗಳಿಗೆ ಹೂವಿನ ಅಲಂಕಾರ ಮಾಡುವ ಕೆಲಸ ಮಾಡಿಕೊಂಡಿದ್ದಾನೆ. 15 ವರ್ಷಗಳ ಹಿಂದೆ ಜಾನಕಿ ಜ್ಯೋತಿ ಎಂಬಾಕೆಯನ್ನು ವಿವಾಹವಾಗಿದ್ದು, ದಂಪತಿಗೆ ತ್ರಿವಳಿ ಗಂಡು ಮಕ್ಕಳು ಸೇರಿದಂತೆ ಐವರು ಮಕ್ಕಳಿದ್ದಾರೆ. ಈ ಮೊದಲು ಮಾಗಡಿ ರಸ್ತೆ ಮತ್ತು ಜೆ.ಜೆ ನಗರದಲ್ಲಿ ನೆಲೆಸಿದ್ದರು. 

ತಮಿಳುನಾಡಿನಲ್ಲಿರುವ ಖಾಲಿ ನಿವೇಶನವನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಪತ್ನಿಗೆ ಆಗಾಗ ಪೀಡಿಸುತ್ತಿದ್ದ.  ಇದು ದಂಪತಿ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದರಿಂದ ಬೇಸರಗೊಂಡಿದ್ದ ಆಕೆ ನಾಲ್ಕು ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೂ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಶ್ರೀರಾಮಪುರದ ಆನಂದಪುರದಲ್ಲಿರುವ ಪೋಷಕರ ಮನೆಯ ಬಳಿ ಪ್ರತ್ಯೇಕವಾಗಿ ಮಕ್ಕಳೊಂದಿಗೆ ನೆಲೆಸಿದ್ದರು. ಜೀವನ ನಿರ್ವಹಣೆಗಾಗಿ ಖಾಸಗಿ ಕಂಪೆನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸಕ್ಕೆ ಹೋಗುತ್ತಿದ್ದರು.

 ಈ ಮಧ್ಯೆ ಪತಿ ಪತ್ನಿ ಆರು ತಿಂಗಳಿಂದ ಒಂದೇ ಮನೆಯಲ್ಲಿ ನೆಲೆಸಿದ್ದರು. ಆದರೆ ಎರಡು ತಿಂಗಳಿನಿಂದ ಹಣ ಮತ್ತು ನಿವೇಶನ ಕೊಡುವಂತೆ ಪತಿ ಮತ್ತೆ ಪೀಡಿಸುತ್ತಿದ್ದ. ಸೋಮವಾರ ರಾತ್ರಿ ಸಹ ಇದೇ ವಿಚಾರವಾಗಿ ಜಗಳವಾಗಿದೆ. ಇದು ವಿಕೋಪಕ್ಕೆ ಹೋಗಿತ್ತು ಎನ್ನಲಾಗಿದೆ. ಮಂಗಳವಾರ ನಸುಕಿನಲ್ಲಿ ಮನೆಯಲ್ಲಿದ್ದ ಪ್ಲಾಸ್ಟಿಕ್‌ ಹಗ್ಗದಿಂದ ಚಂದ್ರಶೇಖರ್‌ ತನ್ನ ಪತ್ನಿ ಜ್ಯೋತಿಯ ಕುತ್ತಿಗೆ ಬಿಗಿದು ಕೊಲೆಗೈದು ಪರಾರಿಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು”ಉದಯವಾಣಿ’ಗೆ ವಿವರಿಸಿದರು.

ಕುತ್ತಿಗೆಯಲ್ಲಿದ್ದ ಹಗ್ಗ ಕಂಡು ಗಾಬರಿಯಾದ ಮಕ್ಕಳು 
ಮುಂಜಾನೆ 4 ಗಂಟೆ ಸುಮಾರಿಗೆ ಮಗುವೊಂದು ಎಚ್ಚರಗೊಂಡಿದ್ದು, ತಾಯಿಯನ್ನು ಎಬ್ಬಿಸಲು ಯತ್ನಿಸಿದೆ. ಆಕೆ ಪ್ರತಿಕ್ರಿಯೆ ನೀಡಿಲ್ಲ. ಆಗ ಅಕ್ಕನ ಬಳಿ ಹೋಗಿ ಅಳತೊಡಗಿದೆ. ಬಳಿಕ ಹಿರಿಯ ಪುತ್ರಿ ಬಂದು ತಾಯಿಯನ್ನು ಎಬ್ಬಿಸಲು ಯತ್ನಿಸಿದಾಗ, ಆಕೆಯ ಕುತ್ತಿಗೆಯಲ್ಲಿದ್ದ ಹಗ್ಗವನ್ನು ಕಂಡು ಗಾಬರಿಗೊಂಡು, ಹಗ್ಗವನ್ನು ತೆಗೆದಿದ್ದಾಳೆ. ಕೂಡಲೇ ಹತ್ತಿರದಲ್ಲಿದ್ದ ಅಜ್ಜಿಯ ಮನೆಗೆ ಹೋಗಿ ವಿಷಯ ತಿಳಿಸಿದ್ದಾಳೆ. ಅಷ್ಟರಲ್ಲಿ ಸ್ಥಳೀಯರು ಸ್ಥಳಕ್ಕೆ ಬಂದು ಜ್ಯೋತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಶೀಲನೆ ನಡೆಸಿದ ವೈದ್ಯರು ಜ್ಯೋತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. 

ಅಕ್ರಮ ಸಂಬಂಧ
ಆರೋಪಿ ಚಂದ್ರಶೇಖರ್‌ ಕೆ.ಪಿ.ಅಗ್ರಹಾರದಲ್ಲಿ ಮಹಿಳೆಯೊಬ್ಬರನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇದನ್ನು ಪತ್ನಿ ಜ್ಯೋತಿ ಪ್ರಶ್ನಿಸಿದ್ದು, ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಅಲ್ಲದೇ ಜ್ಯೋತಿ ಹೆಸರಿನಲ್ಲಿ ಕೆಲ ಆಸ್ತಿಯನ್ನು ಪ್ರೇಯಸಿಯ ಹೆಸರಿಗೆ ಮಾಡಿಕೊಡಲು ಚಂದ್ರಶೇಖರ್‌ ನಿರ್ಧರಿಸಿದ್ದ. ಇದಕ್ಕಾಗಿಯೇ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಸೋದರ ಸಂಬಂಧಿಕರ ವಿಚಾರಣೆ
ಪತ್ನಿ ಜ್ಯೋತಿಯನ್ನು ಕೊಲೆಗೈದ ಆರೋಪಿ ಚಂದ್ರಶೇಖರ್‌, ನಸುಕಿನಲ್ಲೇ ತನ್ನ ಬೈಕ್‌ ಏರಿ ಬಾಪೂಜಿನಗರದಲ್ಲಿರುವ ತನ್ನ ಪೋಷಕರ ಮನೆ ಬಳಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಆರೋಪಿಯ ಸೋದರ ಸಂಬಂಧಿಗಳನ್ನು ವಿಚಾರಣೆ ನಡೆಸಲಾಗಿದೆ. ಆರೋಪಿ ತಮಿಳುನಾಡು ಕಡೆ ತಲೆಮರೆಸಿಕೊಂಡಿರುವ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.