ಲೈವ್ ಬ್ಯಾಂಡ್ ಮುಚ್ಚುವ ವಿಚಾರ: ಆಯುಕ್ತರಿಗೇ ಹೈ ನೋಟಿಸ್
Team Udayavani, Jun 27, 2018, 11:53 AM IST
ಬೆಂಗಳೂರು: ಕಟ್ಟಡ ಸ್ವಾಧೀನ ಪ್ರಮಾಣ ಪತ್ರ ಹೊಂದಿಲ್ಲದಿರುವುದು ಹಾಗೂ ಇನ್ನಿತರೆ ನಿಯಮಾವಳಿ ಉಲ್ಲಂ ಸಲಾಗಿದೆ ಎಂದು ಆಕ್ಷೇಪಿಸಿ ಲೈವ್ಬ್ಯಾಂಡ್ ಮುಚ್ಚಲು ನೋಟಿಸ್ ನೀಡಿದ್ದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗಳ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪೊಲೀಸ್ ಆಯುಕ್ತರು ನೀಡಿರುವ ನೋಟಿಸ್ ಪ್ರಶ್ನಿಸಿ ರೆಸಿಡೆನ್ಸಿ ರಸ್ತೆಯಲ್ಲಿರುವ ನರ್ತಕಿ ಬಾರ್ ಅಂಡ್ ರೆಸ್ಟೋರೆಂಟ್, ಕೆ.ಜಿ ರಸ್ತೆಯ ಕೋಸ್ಟಾರಿಕಾ ಬಾರ್ ಅಂಡ್ ರೆಸ್ಟೋರೆಂಟ್, ಟೌನ್ಹಾಲ್ ಸಮೀಪವಿರುವ ಲವರ್ ನೈಟ್ ಪಬ್ಸ್ ಪ್ರತಿನಿಧಿ ಪಿ.ಆರ್ ನರೇಂದ್ರಬಾಬು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ರಿಟ್ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹಾಗೂ ಇನ್ನಿತರ ಪ್ರತಿವಾದಿ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ಬುಧವಾರಕ್ಕೆ ವಿಚಾರಣೆ ಮುಂದೂಡಿತು. ನಗರ ಪೊಲೀಸರು ಲೈವ್ಬ್ಯಾಂಡ್ ಮುಚ್ಚಲು ಆದೇಶಿಸಿ ಇತ್ತೀಚೆಗೆ ಹಲವು ಬಾರ್ ಅಂಡ್ ರೆಸ್ಟೋರೆಂಟ್ಗಳಿಗೆ ನೋಟಿಸ್ ಜಾರಿಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು