ಅಸಮತೋಲನವೇ ಸಮಸ್ಯೆಗಳ ಮೂಲ


Team Udayavani, Feb 25, 2018, 11:49 AM IST

asamatolana.jpg

ಬೆಂಗಳೂರು: “ಫೇಸ್‌ಬುಕ್‌ನಲ್ಲಿ ಸಾವಿರಾರು ಸ್ನೇಹಿತರಿದ್ದರೂ ಹಿಂದೆಂದಿಗಿಂತ ಹೆಚ್ಚು ಏಕಾಂಗಿತನ. ಲಕ್ಷಗಟ್ಟಲೆ ಗಳಿಸುತ್ತಿದ್ದರೂ ನೆಮ್ಮದಿ ಇಲ್ಲದ ಬದುಕು. ಮನೆ ಹಿಂದಿನ ಬೇವಿನ ಮರ ಮರೆಯಾಗಿದ್ದರೂ, ನಮ್ಮ ನಡೆ-ನುಡಿಗಳಲ್ಲಿ ಉಳಿದ ಬೇವಿನೆಲೆಯ ಕಹಿ. ಈ ಅಸಮತೋಲನಗಳೇ ಸಮಾಜದ ಈಗಿನ ಎಲ್ಲ ಸಮಸ್ಯೆಗಳ ಮೂಲ,’ ಎಂದು ಸದ್ಗುರು ಮಾತಾ ಅಮೃತಾನಂದಮಯಿ ಅಭಿಪ್ರಾಯಪಟ್ಟರು.  

ಉಲ್ಲಾಳ ಉಪನಗರದ ಜ್ಞಾನಭಾರತಿ ಆಶ್ರಮದಲ್ಲಿರುವ ಬ್ರಹ್ಮಸ್ಥಾನಂ ವಾರ್ಷಿಕೋತ್ಸವದಲ್ಲಿ ಶನಿವಾರ ಪಾಲ್ಗೊಂಡು ಮಾತನಾಡಿದ ಅವರು, ಸ್ವಾರ್ಥ ಮತ್ತು ಬ್ಯುಸಿನೆಸ್‌ಗಳೇ ಇಂದು ಬಹುಮುಖ್ಯ ಮೌಲ್ಯಗಳಾಗಿವೆ. ಪ್ರಪಂಚದಾದ್ಯಂತ ಇದಕ್ಕೆ ಬೇಡಿಕೆ ಬಂದಿದೆ. ಮನೆಗಳಲ್ಲೂ ಇವುಗಳನ್ನು ಪೋಷಿಸುವ ವಾತಾವರಣ ನಿರ್ಮಾಣವಾಗಿದೆ. ಇಡೀ ಸಮಾಜವೇ ಇದರ ಹಿಡಿತದಲ್ಲಿ ಸಿಲುಕಿರುವುದರಿಂದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಲಕ್ಷಾಂತರ ರೂ. ಗಳಿಸುತ್ತಿದ್ದರೂ ಬದುಕಿನಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಭಯೋತ್ಪಾದನೆ, ಕೊಲೆ, ಮತ-ರಾಜಕೀಯ ಹೆಸರಿನಲ್ಲಿ ನಡೆಯುವ ಹಿಂಸಾಚಾರಗಳಲ್ಲಿ ಸಮಾಜ ನಲುಗಿದೆ. ಆದರೆ, ನಿಜವಾದ ಸಂತೋಷ ಅಂತರಂಗದಿಂದ ಬರುವುದು. ಹಾಗೂ ಅದು ಮಾತ್ರ ಶಾಶ್ವತವಾಗಿರುತ್ತದೆ ಎಂದರು. 

ಮುಖವಾಡದ ಬದುಕು: ಪ್ರಸ್ತುತ ಬರೀ ಮುಖವಾಡ ತೊಟ್ಟ ಜನರೇ ನಮ್ಮ ಮಧ್ಯೆ ಇದ್ದಾರೆ. ದೈಹಿಕ ಆರೋಗ್ಯಕ್ಕೆ ಕೊಡುವ ಪ್ರಾಮುಖ್ಯತೆ ಮಾನಸಿಕ ಆರೋಗ್ಯಕ್ಕೆ ಸಿಗುತ್ತಿಲ್ಲ. ಹಾಗಾಗಿ, ಒಂದೇ ಕುಟುಂಬದಲ್ಲಿದ್ದೂ ಪರಸ್ಪರ ನಂಬಲಾರದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಾತಾ ಅಮೃತಾನಂದಮಯಿ, ಜಗತ್ತಿನ ಎಲ್ಲ ಚರಾಚರಗಳಿಗೆ ಎರಡೆರಡು ಭಾವಗಳಿವೆ. ಹೊರಗೊಂದು ಮತ್ತು ಒಳಗೊಂದು. ಇವೆರಡೂ ಮೇಳೈಸಿದಾಗ ಬದುಕು ಪರಿಪೂರ್ಣವಾಗುತ್ತದೆ. ಈ ಪರಿಪೂರ್ಣತೆಯತ್ತ ಸಮಾಜ ಸಾಗಬೇಕಿದೆ ಎಂದು ಅಮೃತಾನಂದಮಯಿ ಸಲಹೆ ಮಾಡಿದರು. 

ಮನೋದೌರ್ಬಲ್ಯದ ನಿವಾರಣಾ ಶಕ್ತಿ ನಮ್ಮೊಳಗೇ ಇರುತ್ತದೆ. ಅದು ಸದಾ ಜಾಗೃತವಾಗಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ವ್ಯಕ್ತಿ ಸ್ವಾತಂತ್ರ್ಯ ಮುಖ್ಯ. ಆದರೆ, ಅದಕ್ಕಿಂತ ಮಿಗಿಲಾದುದು ಕುಟುಂಬ. ಇಡೀ ವಿಶ್ವವೇ ಒಂದು ಕುಟುಂಬವಾಗಿರುವುದರಿಂದ ವ್ಯಕ್ತಿಗಿಂತ ಸಮಾಜ ಮುಖ್ಯವಾಗುತ್ತದೆ. ಈ ದೃಷ್ಟಿಕೋನದಲ್ಲಿ ನಮ್ಮ ಆಲೋಚನೆಗಳಿರಬೇಕು. ನಮ್ಮ ಸ್ವಾತಂತ್ರ್ಯ ಮತ್ತೂಬ್ಬರ ಹಿತಕ್ಕೆ ಧಕ್ಕೆ ತರುವಂತಿರಬಾರದು ಎಂದು ಸೂಚ್ಯವಾಗಿ ಹೇಳಿದರು. 

ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಮಾತನಾಡಿ, ಕೊಪ್ಪಳ, ಬೀದರ್‌ನಲ್ಲಿ ನೆರೆ ಉಂಟಾದಾಗ ನಿರಾಶ್ರಿತರಿಗೆ ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿ, ಆಶ್ರಯ ನೀಡಿದರು. ಗಂಗಾ ಕಲುಷಿತಗೊಂಡಾಗ ಪುನಶ್ಚೇತನದ ಕಾರ್ಯಕ್ರಮದಲ್ಲಿ ಸುತ್ತಲಿನ ನಿವಾಸಿಗಳಿಗೆ ಶೌಚಾಲಯಗಳು, ಅಲ್ಲಿನ ಮಕ್ಕಳಿಗೆ ಶಾಲೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮಾಜಕ್ಕೆ ನಿಜವಾಗಿಯೂ “ಅಮ್ಮ’ ಆಗಿದ್ದಾರೆ ಎಂದು ಸ್ಮರಿಸಿದರು.  ನಟಿ ನಂದಿನಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.