ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ಗೆ ಚಾಲನೆ
Team Udayavani, Mar 6, 2019, 6:20 AM IST
ಬೆಂಗಳೂರು: ಬಹುನಿರೀಕ್ಷಿತ ಯಶವಂತಪುರ-ದೆಹಲಿ ನಡುವೆ “ಯಶವಂತಪುರ-ಹಜರತ್ ನಿಜಾಮುದ್ದೀನ್’ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳವಾರ ಹಸಿರು ನಿಶಾನೆ ತೋರಿದರು.
ಪ್ರತಿ ಮಂಗಳವಾರ ಯಶವಂತಪುರದಿಂದ ಮಧ್ಯಾಹ್ನ 12.30ಕ್ಕೆ ಹೊರಡಲಿರುವ ಈ ಎಕ್ಸ್ಪ್ರೆಸ್ ರೈಲು, ಚಿಕ್ಕಬಳ್ಳಾಪುರ, ಚಿಂತಾಮಣಿ, ಕೋಲಾರ, ಬಂಗಾರಪೇಟೆ ಮಾರ್ಗವಾಗಿ ಸಂಚರಿಸಿ ಗುರುವಾರ ಬೆಳಗ್ಗೆ 9.30ಕ್ಕೆ ದೆಹಲಿ ತಲುಪಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ವೇಳಾಪಟ್ಟಿ ಪರಿಷ್ಕರಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಈ ವೇಳೆ ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಉದ್ದೇಶಿತ “ಯಶವಂತಪುರ-ನಿಜಾಮುದ್ದೀನ್ ಎಕ್ಸ್ಪ್ರೆಸ್’ ರಾಜ್ಯ ರಾಜ್ಯಧಾನಿ ಮತ್ತು ದೇಶದ ರಾಜಧಾನಿಗೆ ಸಂಪರ್ಕ ಕಲ್ಪಿಸಲಿದೆ. ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಘೋಷಿಸಿದ್ದ ರೈಲ್ವೆ ಯೋಜನೆಗಳ ಪೈಕಿ ಬಹುತೇಕ ಯೋಜನೆಗಳನ್ನು ಪೂರೈಸಿದೆ. ಪ್ರತಿ ಬಜೆಟ್ನಲ್ಲಿ ರೈಲ್ವೆಗೆ ಬಜೆಟ್ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.
ಸಂಸದ ಕೆ.ಎಚ್. ಮುನಿಯಪ್ಪ ಮಾತನಾಡಿ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಬಹುದಿನಗಳ ಬೇಡಿಕೆಯಾಗಿದ್ದ ಯಶವಂತಪುರ-ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಸಂಚಾರ ಈಗ ಈಡೇರಿದೆ. ಹಾಗಾಗಿ, ಕೇಂದ್ರ ರೈಲ್ವೆ ಸಚಿವರಿಗೆ ಕೃತ್ಯಜ್ಞತೆ ಹೇಳುವುದಾಗಿ ತಿಳಿಸಿದರು. ಸಂಸದ ಪಿ.ಸಿ. ಮೋಹನ್, ಬೆಂಗಳೂರು ರೈಲ್ವೆ ವಿಭಾಗದ ವಿಭಾಗೀಯ ವ್ಯವಸ್ಥಾಪಕ ಆರ್.ಎಸ್.ಸಕ್ಸೇನಾ, ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ