ಹೈಕೋರ್ಟ್ ಮೆಟ್ಟಿಲೇರಿದ ಇಂದಿರಾ ಕ್ಯಾಂಟೀನ್ ವಿವಾದ
Team Udayavani, Aug 10, 2017, 10:41 AM IST
ಬೆಂಗಳೂರು: ಜಕ್ಕಸಂದ್ರ ವಾರ್ಡ್ನಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ನ ಅಡುಗೆ ಕೋಣೆ ಜಾಗದಲ್ಲಿ ತಮ್ಮ ಜಮೀನು ಇದೆ ಎಂದು ವ್ಯಕ್ತಿಯೊಬ್ಬರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಕೆ.ಎ.ಕೃಷ್ಣಮೂರ್ತಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಇಂದಿರಾ ಕ್ಯಾಂಟೀನ್ ಜಾಗ ಸೇರಿ ಸುತ್ತಲ 1 ಎಕರೆ 6 ಗುಂಟೆ ಜಾಗವನ್ನು ಬೆಂ.ದಕ್ಷಿಣ ತಾಲೂಕು ತಹಶೀಲ್ದಾರ್ ಸರ್ವೇ ನಡೆಸಿ, ಅರ್ಜಿದಾರರಿಗೆ ಸೇರಿದ ಜಾಗ ಎಲ್ಲಿ ಬರಲಿದೆ ಎಂಬ ಬಗ್ಗೆ ಮುಂದಿನ
ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ಬಿಬಿಎಂಪಿ ಹಾಗೂ ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಿ ಆಗಸ್ಟ್ 30ಕ್ಕೆ ವಿಚಾರಣೆ ಮುಂದೂಡಿತು. ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ರಾಜ್ಯಸರ್ಕಾರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೊಳಿಸಿದ್ದು, ಕ್ಯಾಂಟೀನ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಅಲ್ಲದೆ ಕ್ಯಾಂಟೀನ್ನ ಅಡುಗೆಕೋಣೆ ನಿರ್ಮಾಣ ಜಾಗವು ಅರ್ಜಿದಾರರಿಗೆ ಸೇರಿಲ್ಲ, ಒಟ್ಟಾರೆ 1 ಎಕರೆ 6 ಗುಂಟೆ ಜಾಗದಲ್ಲಿ ಗಣಪತಿ ದೇವಾಲಯ,
ಉದ್ಯಾನವನದ ಜಾಗವಾಗಿದ್ದು 4,600 ಚದರ ಅಡಿಯಲ್ಲಿ ಮಾತ್ರ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿದೆ. ಜೊತೆಗೆ
ಅರ್ಜಿದಾರರಿಗೂ ತಮಗೆ ಸೇರಿದ 20 ಗುಂಟೆ ಜಾಗ ಎಲ್ಲಿ ಬರಲಿದೆ ಎಂಬ ಮಾಹಿತಿಯಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯ ಪೀಠ, ಮೊದಲು ಅರ್ಜಿದಾರರಿಗೆ 1 ಎಕರೆ ಪ್ರದೇಶದಲ್ಲಿ ತಮ್ಮ ಸ್ವತ್ತು ಎಲ್ಲಿ ಬರಲಿದೆ ಎಂಬ ಬಗ್ಗೆ ಗೊತ್ತಾಗಲಿ. ಹೀಗಾಗಿ ತಹಶೀಲ್ದಾರ್ ಇಡೀ ಪ್ರದೇಶವನ್ನು ಸರ್ವೇ ಮಾಡಿ ಕೋರ್ಟ್ಗೆ ವರದಿ ನೀಡಲಿ ಎಂದು ಸೂಚಿಸಿ ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ