ಕೆರೆಗಳ ಅನಾಹುತ ಮಾನವ ನಿರ್ಮಿತ!


Team Udayavani, Jan 2, 2020, 3:08 AM IST

keregala

ಬೆಂಗಳೂರು: ಕೆರೆಯ ನೀರನ್ನು ಕಡಿಮೆ ಮಾಡುವ ಉದ್ದೇಶದಿಂದ ತೆಗೆದುಕೊಂಡ ಕ್ರಮಗಳೇ ಹುಳಿಮಾವು ಕೆರೆಯ ಅನಾಹುತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಮತ್ತು ಇದು ಮಾನವ ಸೃಷ್ಟಿತ ಅನಾಹುತವಾಗಿದೆ ಎಂದು ತಾಂತ್ರಿಕ ಸಮಿತಿ ತಿಳಿಸಿದೆ.

ಹುಳಿಮಾವು, ಹೊಸಕೆರೆಹಳ್ಳಿ ಹಾಗೂ ದೊಡ್ಡಬಿದರಕಲ್ಲು ಕೆರೆಗಳ ಅಧ್ಯಯನಕ್ಕೆ ಸರ್ಕಾರ ನೇಮಿಸಿದ್ದ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಆರ್‌.ಶ್ರೀನಿವಾಸ ಮೂರ್ತಿ ಅವರ ನೇತೃತ್ವದ ತ್ರಿಸದಸ್ಯರ ತಾಂತ್ರಿಕ ಸಮಿತಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಹುಳಿಮಾವು ಕೆರೆಯ ಪ್ರದೇಶ ಒತ್ತುವರಿಯಾಗಿದೆ. ಕೆರೆಯ ಕೆಳಭಾಗದ ಪ್ರದೇಶದಲ್ಲಿರುವ ಮನೆಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೆರೆಯ ಏರಿ ಪ್ರದೇಶವನ್ನು ಎತ್ತರಿಸಲಾಗಿದೆ.

ಸರಾಗವಾಗಿ ನೀರು ಹರಿದು ಹೋಗಲು ತಗ್ಗು ಪ್ರದೇಶಗಳಲ್ಲಿ ಅವಕಾಶ ನೀಡಿಲ್ಲ. ಇನ್ನು ರಾಜಕಾಲುವೆ ಪ್ರದೇಶದಲ್ಲೂ ಒತ್ತುವರಿ ಮಾಡಿಕೊಳ್ಳಲಾಗಿದೆ. ಸರಾಗವಾಗಿ ನೀರು ಹರಿದು ಹೋಗಲು ಅವಕಾಶ ನೀಡದೆ, ಮತ್ತೂಂದು ಪ್ರದೇಶದಲ್ಲಿ ಅನಗತ್ಯವಾಗಿ ನೀರು ಹರಿಸಲು ಮುಂದಾಗಿದ್ದೇ ಅನಾಹುತಕ್ಕೆ ಮುಖ್ಯ ಕಾರಣ ಎಂದು ಸಮಿತಿ ವರದಿಯಲ್ಲಿ ವಿಶ್ಲೇಷಣೆ ಮಾಡಿದೆ.

ಮಾನವ ಸೃಷ್ಟಿಸಿದ ಅನಾಹುತ: ಹುಳಿಮಾವು ಕೆರೆಯ ಅನಾಹುತ ಮಾನವರೇ ಸೃಷ್ಟಿಸಿದ್ದಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಕೆರೆಯ ನೀರು ಸರಾಗವಾಗಿ ಹೋಗುವ ಎರಡೂ ಮಾರ್ಗವನ್ನು ತಡೆಹಿಡಿಯಲಾಗಿದೆ. ಎಲ್ಲ ಭಾಗದಲ್ಲೂ ಒತ್ತುವರಿಯಾಗಿರುವುದರಿಂದ ನೀರು ಮನೆಗಳಿಗೆ ನುಗ್ಗಿದೆ ಎಂದು ತಿಳಿಸಲಾಗಿದೆ. ಕೆರೆಗಳ ಸಂರಕ್ಷಣೆ ಹಾಗೂ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ನಿರಂತರವಾಗಿ ಸಮಿತಿಗಳು ಎಚ್ಚರಿಕೆ ನೀಡಿದರೂ ಅವುಗಳನ್ನು ಅಳವಡಿಸಿಕೊಳ್ಳುವಲ್ಲಿ ಬಿಬಿಎಂಪಿ ಮತ್ತು ಬಿಡಿಎ ವಿಫ‌ಲವಾಗಿವೆ ಎಂದು ಸಮಿತಿ ದೂರಿದೆ.

ದೊಡ್ಡಬಿದರಕಲ್ಲು: ದೊಡ್ಡಬಿದರಕಲ್ಲು ಕೆರೆಯ ನೀರು ಹರಿಯವ ಮಾರ್ಗದಲ್ಲಿ ಹಲವು ವರ್ಷಗಳ ಹಿಂದೆ ಪೈಪ್‌ ಅಳವಡಿಸಲಾಗಿದ್ದು, ಬಿಬಿಎಂಪಿ ಈ ಪೈಪ್‌ಗ್ಳ ದುರಸ್ತಿ ಮಾಡುವುದಕ್ಕೆ ಅಥವಾ ಪುನಃ ಅಳವಡಿಸುವ ಸಂದರ್ಭದಲ್ಲಿ ಏರಿ ಒಡೆದಿರುವ ಸಾಧ್ಯತೆ ಇದೆ. ಮುಖ್ಯವಾಗಿ ಈ ಭಾಗದಲ್ಲಿನ ರಾಜಕಾಲುವೆಗಳ ವಿಸ್ತೀರ್ಣ ತೀರ ಕಡಿಮೆ ಇದೆ. ಉದ್ದೇಶಪೂರ್ವಕವಾಗಿ ರಾಜಕಾಲುವೆ ಮಾರ್ಗ ಕಡಿಮೆ ಮಾಡಲಾಗಿದೆ ಮತ್ತು ಈ ಭಾಗದಲ್ಲೂ ಒತ್ತುವರಿಯಾಗಿದೆ ಎಂದು ವರದಿ ಹೇಳಿದೆ.

ಹೊಸಕೆರೆಹಳ್ಳಿ ಕೆರೆ: ಈ ಭಾಗದಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ರುವು ದರಿಂದ ಹಾಗೂ ಕೆರೆಯ ಹೆಚ್ಚುವರಿ ನೀರು ಸರಾಗವಾಗಿ ಹರಿದುಹೋಗಲು ಅವಕಾಶ ನೀಡದೆ ಇರುವುದು ಏರಿ ಒಡೆಯಲು ಕಾರಣವಾಗಿರುವ ಸಾಧ್ಯತೆ ಇದೆ. ಈ ಕೆರೆಯ ಹೊರ ಹರಿವಿನ ಪ್ರದೇಶ ಅಥವಾ ಕಾಲುವೆ ಮಾರ್ಗ ಪತ್ತೆಯಾಗಿಲ್ಲ ಎಂದು ವರದಿ ಉಲ್ಲೇಖ ಮಾಡಿದೆ. ಸಮಿತಿಯು ದೊಡ್ಡಬಿದರಕಲ್ಲು, ಹೊಸಕೆರೆಹಳ್ಳಿ ಕೆರೆ ಹಾಗೂ ಹುಳಿಮಾವು ಕೆರೆಗಳ ಸ್ಥಳ ಪರಿಶೀಲನೆ ನಡೆಸಿದ್ದು, ಈ ಕೆರೆಗಳ ನ್ಯೂನತೆಯ ಬಗ್ಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ನೀಡಿದೆ. ಸಂಪೂರ್ಣ ವರದಿ ನೀಡುವುದಕ್ಕೆ ಮತ್ತಷ್ಟು ಕಾಲಾವಕಾಶ ಕೋರಿದೆ.

ಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮಿತಿ: ಸಮಿತಿಯು ತಾಂತ್ರಿಕ ವಿಷಯಗಳನ್ನಷ್ಟೇ ಸರ್ಕಾರದ ಗಮನಕ್ಕೆ ತರುತ್ತಿದೆ. ಇದರ ಹೊರತಾಗಿ ಯಾವುದೇ ತನಿಖೆ ಮಾಡಿಲ್ಲ. ಅಲ್ಲದೆ, ಸಮಿತಿ ನೀಡುವ ವರದಿಯ ಆಧಾರದ ಮೇಲೆ ಯಾರ ಮೇಲಾದರೂ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯೂ ಕಡಿಮೆ ಇದೆ. ಮುಖ್ಯವಾಗಿ ಸಮಿತಿಯು ತನ್ನ ವರದಿಯಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನೇ ದಾಖಲಿಸಿಲ್ಲ. ಈ ಎಲ್ಲ ಹಿನ್ನೆಲೆಯಿಂದ ಸಮಿತಿ ಸಂಪೂರ್ಣ ವರದಿ ಮಂಡನೆ ಮಾಡಿದ ನಂತರ ಸರ್ಕಾರ ಯಾವ ಸುಧಾರಣಾ ಕ್ರಮ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಉಂಟಾಗಿದೆ. ಉಳಿದ ವರದಿಗಳಂತೆ ಈ ವರದಿಯೂ ಮೂಲೆ ಸೇರುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.