ಜೆಡಿಎಸ್ ಕಾನೂನು ಘಟಕ ಪುನರ್ರಚನೆಗೆ ತೀರ್ಮಾನ
Team Udayavani, Sep 16, 2017, 6:05 AM IST
ಬೆಂಗಳೂರು: ಜೆಡಿಎಸ್ ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಪುನರ್ರಚಿಸಿ ಭ್ರಷ್ಟಾಚಾರದ ಬಗ್ಗೆ ವ್ಯಾಪಕ ಹೋರಾಟ ನಡೆಸುವುದು ಹಾಗೂ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ, ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕ ಪುನರ್ರಚಿಸಿ ಯುವಕರಿಗೆ ಹೆಚ್ಚು ಅವಕಾಶ ನೀಡಲು ನಿರ್ಧರಿಸಲಾಯಿತು. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಲು ಕಾನೂನು ಘಟಕ ಕಾರ್ಯಕ್ರಮ ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಎ.ಪಿ.ರಂಗನಾಥ್, ಜೆಡಿಎಸ್ ಕಾನೂನು ಘಟಕದ ವತಿಯಿಂದ ಹಲವಾರು ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವಕೀಲರು ನ್ಯಾಯಾಂಗದ ಒಂದು ಭಾಗವಾಗಿದ್ದು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಅವರಿಗೆ ಮೂಲಸೌಕರ್ಯಗಳು ಇಲ್ಲ ಎಂದು ಹೇಳಿದರು. ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಹಾಗೂ ಬಾರ್ ಕೌನ್ಸಿಲ್ನಿಂದ ವಕೀಲರಿಗೆ ನೀಡುವ ವೆಲ್ಫೇರ್ ಫಂಡ್ನಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ವ್ಯತ್ಯಾಸವಿಲ್ಲದೆ ಸಮಾನವಾಗಿ ನೀಡಬೇಕು. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಬಿಬಿಎಂಪಿಯ 109 ವಾರ್ಡ್ಗಳಲ್ಲಿ 2008 ರಿಂದ ನಡೆದಿರುವ ಅವ್ಯವಹಾರಗಳ ಬಗ್ಗೆ ಕಾನೂನು ಘಟಕ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ