ಶಾಸಕರ ಆತಿಥ್ಯಕ್ಕೆ ಜತೆಗೂಡಿದ ಜೆಡಿಎಸ್ ಬಂಡಾಯ ಶಾಸಕರು
Team Udayavani, Aug 5, 2017, 7:25 AM IST
ಬೆಂಗಳೂರು: ಈಗಲ್ಟನ್ ರೆಸಾರ್ಟ್ನಲ್ಲಿರುವ ಗುಜರಾತ್ ಶಾಸಕರ ಆತಿಥ್ಯದ ಹೊಣೆಗಾರಿಕೆಯನ್ನು ಇದೀಗ ಸಂಸದ ಡಿ.ಕೆ.ಸುರೇಶ್ ಜತೆಗೆ ಜೆಡಿಎಸ್ ಭಿನ್ನಮತೀಯ ಶಾಸಕರೂ ವಹಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಜೆಡಿಎಸ್ ಬಂಡಾಯ ಶಾಸಕರಾದ ಜಮೀರ್ಅಹಮದ್, ಚೆಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಅಖಂಡ ಶ್ರೀನಿವಾಸಮೂರ್ತಿ ಶುಕ್ರವಾರ ಈಗಲ್ ಟನ್ ರೆಸಾರ್ಟ್ಗೆ ಭೇಟಿ ನೀಡಿ ಗುಜರಾತ್ ಶಾಸಕರ ಕುಶಲೋಪರಿ ವಿಚಾರಿಸಿದರು.
ರೆಸಾರ್ಟ್ನಲ್ಲಿರುವ 44 ಗುಜರಾತ್ ಶಾಸಕರ ಜತೆ ಚರ್ಚಿಸಿದ ಬಂಡಾಯ ಶಾಸಕರು, ನಿಮಗೆ ಇಲ್ಲಿ ಯಾವುದೇ ಆತಂಕ ಬೇಡ. ನಾವಿದ್ದೇವೆ, ನೋಡಿಕೊಳ್ಳುತ್ತೇವೆ ಎಂದು ಧೈರ್ಯ ತುಂಬಿದರು.
ಆಗಸ್ಟ್ 7 ರವರೆಗೂ ಗುಜರಾತ್ ಶಾಸಕರು ರಾಜ್ಯದಲ್ಲೇ ವಾಸ್ತವ್ಯ ಇರುವ ಹಿನ್ನೆಲೆಯಲ್ಲಿ ಶನಿವಾರದಿಂದ ಧಾರ್ಮಿಕ ಅಥವಾ ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ಬಗ್ಗೆಯೂ ಚರ್ಚಿಸಲಾಯಿತು. ಬಹುತೇಕ ಶಾಸಕರು ಎರಡು ದಿನದ ಮಟ್ಟಿಗಾದರೂ ಧಾರ್ಮಿಕ ಕ್ಷೇತ್ರಗಳ ಪ್ರವಾಸ ಮಾಡಿ ಬರೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಗುಜರಾತ್ ಶಾಸಕರು ಪ್ರವಾಸ ಹೋಗುವುದೇ ಆದರೆ ನಾನೇಖುದ್ದಾಗಿ ಕರೆದೊಯ್ಯುವುದಾಗಿಯೂ ಜಮೀರ್ ಅಹಮದ್ ತಿಳಿಸಿದರು ಎನ್ನಲಾಗಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಜಮೀರ್, ಗುಜರಾತ್ ಶಾಸಕರ ಕುಶಲೋಪರಿ ವಿಚಾರಿಸಲು ಬಂದಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅತಿಥಿಗಳಾಗಿ ಬಂದವರಿಗೆ ಆತಿಥ್ಯ ನೀಡುವುದು ನಮ್ಮ ಸಂಸ್ಕೃತಿ. ಈಗಾಗಲೇ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರು ಶಾಸಕರ ಆತಿಥ್ಯದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ನಾವೂ ಅಗತ್ಯಬಿದ್ದರೆ ಜತೆಗೂಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ