ಕಾರ್ಮಿಕ ಚಳವಳಿಗೆ ಹೊಸ ರೂಪ ಅಗತ್ಯ


Team Udayavani, May 2, 2019, 3:04 AM IST

karmika

ಬೆಂಗಳೂರು: “ಕಾರ್ಮಿಕ ಚಳವಳಿಗಳನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಿ, ಹೊಸ ರೀತಿಯಲ್ಲಿ ಕಟ್ಟುವ ಅವಶ್ಯಕತೆ ಇದೆ’ ಎಂದು ರಂಗಕರ್ಮಿ ಹಾಗೂ ಪ್ರಗತಿಪರ ಚಿಂತಕ ಪ್ರಸನ್ನ ಅಭಿಪ್ರಾಯಪಟ್ಟರು.

ಕಾರ್ಮಿಕ ದಿನಾಚರಣೆ ಅಂಗವಾಗಿ ಬುಧವಾರ ಕರ್ನಾಟಕ ಇಂಡಸ್ಟ್ರಿಯಲ್‌ ಆಂಡ್‌ ಅದರ್‌ ಎಸ್ಟಾಬ್ಲಿಷ್‌ಮೆಂಟ್ಸ್‌ ಎಂಪ್ಲಾಯೀಸ್‌ ಫೆಡರೇಷನ್‌, ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ಸಭೆಯಲ್ಲಿ ಮಾತನಾಡಿದರು.

ಕಾಯಂ ನೌಕರಿ ಕಲ್ಪಿಸುವುದೇ ಕಾರ್ಮಿಕ ಸಂಘಗಳ ಜವಾಬ್ದಾರಿ ಆಗಿದ್ದ ಒಂದು ಕಾಲ ಇತ್ತು. ಆದರೆ, ಇಂದು ಕಾರ್ಖಾನೆಗಳು ಮತ್ತು ಮನುಷ್ಯರ ನಡುವಿನ ಸಂಪರ್ಕವನ್ನು ಸಾಧ್ಯವಾದಷ್ಟು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ.

ಉತ್ಪಾದಕತೆ ಹೆಸರಲ್ಲಿ ಅತಿರೇಕ ವಿಜೃಂಭಿಸುತ್ತಿದೆ. ಈ ಧೋರಣೆಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಚಳವಳಿ ರೂಪಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಚಳವಳಿಯನ್ನು ಮೂಲದಿಂದಲೇ ಬದಲಾಯಿಸಿ, ಹೊಸ ರೀತಿಯಲ್ಲಿ ಕಟ್ಟಬೇಕಿದೆ ಎಂದು ಪ್ರತಿಪಾದಿಸಿದರು.

ಧರ್ಮ ಮತ್ತು ಸಾಮಾಜಿಕ ನ್ಯಾಯವನ್ನು ಪ್ರತ್ಯೇಕವಾಗಿ ನೋಡುವ ಪರಿಪಾಠ ಇದೆ. ಸಾಮಾಜಿಕ ನ್ಯಾಯವೆಂಬ ಅಸಾಧಾರಣ ಸಂಗತಿಯನ್ನು ನಾವು ಕೊಳಕು ಮಾಡಿದ್ದೇವೆ. ಅದೇ ರೀತಿ, ಧರ್ಮವನ್ನು ಜಗಳಗಂಟನನ್ನಾಗಿಸಿದ್ದೇವೆ.

ಈ ಎರಡರ ನಡುವಿನ ಬಿರುಕು ತೊಡೆದುಹಾಕಬೇಕು. ಕಾಯಕ ಧರ್ಮವಾಗಬೇಕು ಎಂದ ಅವರು, ರವಿದಾಸ, ಕಬೀರದಾಸ ಸೇರಿದಂತೆ ಅನೇಕ ಸಂತರು, ಶರಣರು ಮಾಡಿದ್ದೂ ಇದನ್ನೇ ಎಂದು ಹೇಳಿದರು.

ಪ್ರಸ್ತುತ ಸಂದರ್ಭದಲ್ಲಿ ರಾಜಕಾರಣಿಗಳು ಮತ್ತು ಉದ್ಯಮಿಗಳು ಉತ್ಪಾದಕತೆ ಹಿಂದೆ ಬಿದ್ದಿದ್ದಾರೆ. ಇದಕ್ಕಾಗಿ ಯಂತ್ರಗಳ ಅವಲಂಬನೆ ಹೆಚ್ಚಾಗುತ್ತಿದೆ. ಮಾನವ ಮಾಡುವ ಕೆಲಸಗಳನ್ನು ಮಾನವಯಂತ್ರ (ರೋಬೋಟ್‌) ಮಾಡುತ್ತದೆ.

ಇನ್ನೂ ವಿಶೇಷವೆಂದರೆ, ಆ ಯಂತ್ರ ಯಾವುದೇ ಸೌಲಭ್ಯಗಳನ್ನು ಬಯಸುವುದಿಲ್ಲ. ರಜೆ ಕೇಳುವುದಿಲ್ಲ. ಚಳವಳಿ, ಸಹಕಾರ, ಸಮಾನತೆ ಬಗ್ಗೆ ಮಾತನಾಡುವುದಿಲ್ಲ. ಆದ್ದರಿಂದ ಆಳುವ ವರ್ಗ ದುರಾಸೆಗೆ ಬಿದ್ದಿದೆ.

ಈ ಮೂರ್ಖ ವ್ಯವಸ್ಥೆಯನ್ನು ತಿದ್ದುವ ಕೆಲಸ ಕಾರ್ಮಿಕ ಚಳವಳಿಯಿಂದ ಆಗಬೇಕಿದೆ. ಹಾಗೊಂದು ವೇಳೆ ಯಂತ್ರಚಾಲಿತ ಸಮಾಜವನ್ನು ಒಪ್ಪಿಕೊಂಡರೆ, ನಮ್ಮ ವಿನಾಶ ಖಚಿತ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಮಿಕರ ರಕ್ಷಣೆಗೆ ಕೋರ್ಟ್‌ಗಳು: ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಮಾತನಾಡಿ, ದೇಶದ ನ್ಯಾಯಾಂಗ ವ್ಯವಸ್ಥೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವವರೆಗೂ ಇಲ್ಲಿನ ಯಾವೊಬ್ಬ ಪ್ರಜೆಯೂ ಹೆದರಬೇಕಿಲ್ಲ. ನ್ಯಾಯಾಲಯಗಳು ಆ ವ್ಯಕ್ತಿಯ ರಕ್ಷಣೆಗೆ ನಿಲ್ಲಲಿವೆ. ಅದರಲ್ಲೂ ಕಾರ್ಮಿಕರು ದೇಶದ ಸಂಪತ್ತು. ಅವರನ್ನು ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ಕಾನೂನಿನಲ್ಲಿ ಕಾರ್ಮಿಕರ ಪ್ರತಿಭಟನೆ ಮತ್ತು ಕೈಗಾರಿಕೆಗಳಿಗೆ ಬೀಗ ಹಾಕಲು ಅವಕಾಶ ಇದೆ. ಆದರೆ, ಇವುಗಳಲ್ಲಿ ಯಾವುದಾದರೂ ಒಂದು ಮಾಡಿದರೂ, ಇಬ್ಬರಿಗೂ ಸಮಸ್ಯೆ ಆಗುತ್ತದೆ ಎಂದ ಲೋಕಾಯುಕ್ತರು, ಕಾರ್ಮಿಕರ ಬೇಡಿಕೆಗಳು ನ್ಯಾಯಸಮ್ಮತ ಮತ್ತು ಸಮಂಜಸವಾಗಿರಬೇಕು. ಆಗ, ಉದ್ಯಮಿಗಳೂ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಿಳಿಸಿದರು.

ಒಕ್ಕೂಟದ ಅಧ್ಯಕ್ಷ ಟಿ.ಎಸ್‌. ಅನಂತರಾಮ್‌, ಉಪಾಧ್ಯಕ್ಷ ಡಿ. ಗಂಗಭೈರಯ್ಯ, ಪ್ರಧಾನ ಕಾರ್ಯದರ್ಶಿ ಕೆ.ಎ.ಗಂಗಣ್ಣ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸ್ವಾತಂತ್ರ್ಯ ಉದ್ಯಾನದಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದವರೆಗೆ “ಕಾರ್ಮಿಕರ ಮೆರವಣಿಗೆ’ ನಡೆಯಿತು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.