ಓದು ಪರಿವರ್ತನೆಗೆ ದಾರಿ ದೀಪ
Team Udayavani, Nov 12, 2018, 11:55 AM IST
ಬೆಂಗಳೂರು: ಪುಸ್ತಕ ಓದು ಪರಿವರ್ತನೆಗೆ ದಾರಿ ದೀಪವಾಗಲಿದ್ದು, ಬಿಡುವಿನ ವೇಳೆ ಪುಸ್ತಕ ಓದುವ ಅಭಿರುಚಿ ರೂಢಿಸಿಕೊಳ್ಳುವಂತೆ ಸಂಸದ ಮತ್ತು ಸಾಹಿತಿ ಡಾ.ಎಲ್.ಹನುಮಂತಯ್ಯ ಸಲಹೆ ನೀಡಿದರು.
ಕನ್ನಡ ಪುಸ್ತಕ ಪ್ರಾಧಿಕಾರ ಭಾನುವಾರ ಅಗ್ರಹಾರ ದಾಸರ ಹಳ್ಳಿಯ ಗುಂಡೂರಾವ್ ಕಟ್ಟಡದಲ್ಲಿ ಹಮ್ಮಿಕೊಂಡಿದ್ದ “ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶಗಳ ನಿವಾಸಿಗಳು ಮಕ್ಕಳಿಗೆ ಉತ್ತಮ ರೀತಿಯ ಶಿಕ್ಷಣ ಕೊಡುವುದರತ್ತ ಆಲೋಚನೆ ಮಾಡಬೇಕು ಎಂದು ಹೇಳಿದರು.
ಕನಸು ಕಾಣುವುದು ಒಳ್ಳೆಯದು. ಆದರೆ ಆ ಕನಸ್ಸಿಗೆ ಬೇಕಾಗಿರುವ ಓದು ಇಲ್ಲದಿದ್ದರೆ. ಕನಸು ನೆನಸಾಗಲು ಸಾಧ್ಯವಿಲ್ಲ. ಲೋಕ ಜ್ಞಾನ ಬೆಳೆಸುವುದರ ಜತೆಗೆ ನಮ್ಮ ಬದುಕನ್ನು ರೂಪಿಸಿಕೊಳ್ಳುವ ಉದ್ದೇಶದಿಂದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ತಿಳಿಹೇಳಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, ಸಾಹಿತ್ಯಸಕ್ತರನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಾಧಿಕಾರ ಹಲವು ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಹಲವೆಡೆಗಳಲ್ಲಿ ನಡೆದಿರುವ ಪ್ರಾಧಿಕಾರದ ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ನುಡಿದರು.
ಕೈದಿಗಳಲ್ಲೂ ಓದುವ ಅಭಿರುಚಿ ಬೆಳೆಸಬೇಕು ಎಂಬ ಉದ್ದೇಶದಿಂದ ಈಗಾಗಲೇ ಜೈಲಿನಲ್ಲೂ ಕೂಡ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ಪ್ರಶಂಸೆ ವ್ಯಕ್ತವಾದ ನಂತರ ಇದೀಗ ಕೊಳಗೇರಿ ಪ್ರದೇಶದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪುಸ್ತಕ ಓದು ಹಲವು ರೀತಿಯಲ್ಲಿ ಸಹಾಯಕ್ಕೆ ಬರಲಿದ್ದು, ಬಿಡುವಿನ ವೇಳೆ ಟಿ.ವಿ.ನೋಡುವ ಬದಲು ಪುಸ್ತಕಗಳನ್ನು ಓದಿ ಎಂದು ಕಿವಿಮಾತು ಹೇಳಿದರು. ಹಿರಿಯ ರಂಗ ಕರ್ಮಿ ಕೆ.ವಿ.ನಾಗರಾಜ ಮೂರ್ತಿ, ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ ಮತ್ತು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು