ಕಾಶ್ಮೀರದ ಇಂಚಿಂಚು ಭೂಮಿ ನಮ್ಮದು


Team Udayavani, Sep 25, 2019, 3:06 AM IST

kashmirada

ಬೆಂಗಳೂರು: ಕಾಶ್ಮೀರದ ಇಂಚಿಂಚು ಭೂಮಿ ನಮ್ಮದು. ಈ ವಿಚಾರದಲ್ಲಿ ನೆರೆ- ಹೊರೆ ದೇಶಗಳು ಮೂಗು ತೂರಿಸುವ ಅವಶ್ಯಕತೆಯಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ. ಮಂಗಳವಾರ ವಿಜಯ ಕಾಲೇಜಿನಲ್ಲಿ ಬಿ.ಎಚ್‌.ಎಸ್‌. ಹೈಯರ್‌ ಎಜುಕೇಷನ್‌ ಸೊಸೈಟಿ ಹಮ್ಮಿ ಕೊಂಡಿದ್ದ “ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತ ಕೂಡ ಇತರ ದೇಶಗಳ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ.

ಅದೇ ರೀತಿಯಲ್ಲಿ ನಮ್ಮ ನೆರೆ- ಹೊರೆ ದೇಶಗಳು ಕೂಡ ಇದೇ ಮಾರ್ಗವನ್ನು ಅನುಸರಿಸುವುದು ಉತ್ತಮ ಎಂದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. 370ನೇ ವಿಧಿ ರದ್ದತಿ ರಾಷ್ಟ್ರೀಯ ವಿಚಾರವಾಗಿದೆ. ಇದನ್ನು ಯಾರು ರಾಜಕೀಯ ವಿಚಾರಕ್ಕೆ ಬಳಕೆ ಮಾಡಿ ಕೊಳ್ಳಬಾರದು. ಆದರೆ ಇತಿಹಾಸದ ಬಗ್ಗೆ ಅರಿವಿಲ್ಲದವರು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ದೂರಿದರು.

ಹಲವು ವಿಚಾರಗಳಲ್ಲಿ ವಿಶ್ವವೇ ಭಾರತದತ್ತ ದಿಟ್ಟಿಸಿ ನೋಡುತ್ತಿದೆ. ಸಣ್ಣ, ಸಣ್ಣ ದೇಶಗಳು ಕೂಡ ಭಾರತದೊಂದಿಗೆ ಸಂಬಂಧ ಹೊಂದಲು ಹವಣಿಸುತ್ತಿವೆ. ಮುಂದಿನ ದಿನಗಳಲ್ಲಿ ಆರ್ಥಿಕ ಕ್ಷೇತ್ರದಲ್ಲೂ ಭಾರತ ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂಬ ದೃಢ ವಿಶ್ವಾಸ ವ್ಯಕ್ತಪಡಿಸಿದರು.

ಭಾರತದಲ್ಲಿ ಶೇ.65 ರಷ್ಟು ಯುವ ಸಮುದಾಯದವರಿದ್ದಾರೆ. ಯುವ ಭಾರತವನ್ನು ಕೇಂದ್ರೀಕರಿಸಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ, ಸ್ವಚ್ಛ್ ಭಾರತ್‌, ಫಿಟ್‌ ಇಂಡಿಯಾ ಸೇರಿದಂತೆ ಹಲವು ಅನುಪಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯುವಕರನ್ನು ಕೇಂದ್ರೀಕರಿಸಿ ಯೋಜನೆಗಳನ್ನು ರೂಪಿಸುತ್ತಿರುವುದು ಸ್ವಾಗತಾರ್ಹ ವಿಚಾರ ಎಂದರು.

ಉದ್ಯೋಗಕ್ಕಾಗಿ ಶಿಕ್ಷಣ ಎಂಬ ಪರಿಸ್ಥಿತಿ ನಿರ್ಮಾಣ: ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣ ಕಲಿಯುತ್ತಿದ್ದು, ಇದು ಆರೋಗ್ಯಕರವಾದ ಬೆಳವಣಿಗೆಯಲ್ಲ. ಶಿಕ್ಷಣ ಹಲವು ಕೌಶಲ್ಯಗಳನ್ನು ಕಲಿಸಿಕೊಡಲಿದ್ದು ಕೇವಲ ಉದ್ಯೋಗಕ್ಕಾಗಿ ಶಿಕ್ಷಣ ಎಂಬ ಪರಿಸ್ಥಿತಿ ದೂರ ಮಾಡಬೇಕಾಗಿದೆ. ಶಿಕ್ಷಣ ಕ್ಷೇತ್ರದಲ್ಲೂ ಹಲವು ರೀತಿಯ ಬದಲಾವಣೆಯಾಗಬೇಕಾಗಿದ್ದು, ಗುರುಕುಲ ಪದ್ಧತಿಯನ್ನು ಮತ್ತೆ ಹುಟ್ಟು ಹಾಕಬೇಕಾ ಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದರು.

ಹಳ್ಳಿಗಳತ್ತ ಮುಖ ಮಾಡಬೇಕು: ಹಳ್ಳಿಗಳು ಬೆಳವಣಿಗೆ ಸಾಧಿಸಿದರೆ ಮಾತ್ರ ದೇಶ ಬೆಳವಣಿಗೆ ಸಾಧ್ಯ ಎಂದು ಮಹಾತ್ಮಗಾಂಧೀಜಿ ಅವರು ಹೇಳಿದ್ದಾರೆ. ಶಿಕ್ಷಣ ಕ್ಷೇತ್ರ ಕೂಡ ಪ್ರಬಲವಾದ ಆಯುಧವಾಗಿದ್ದು, ಶಿಕ್ಷಣ ಸಂಸ್ಥೆಗಳು ಕೂಡ ಕೇವಲ ನಗರ, ಪಟ್ಟಣ್ಣ ಪ್ರದೇಶವನ್ನು ಕೇಂದ್ರೀಕರಿಸದೆ ಹಳ್ಳಿಗಳತ್ತ ಮುಖ ಮಾಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ಬಿ.ಎಚ್‌.ಎಸ್‌. ಹೈಯರ್‌ ಎಜುಕೇಷನ್‌ ಸೊಸೈಟಿಯನ್ನು ಹಲವು ವರ್ಷಗಳಿಂದ ಭಲ್ಲೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ ಹಲವು ಶೈಕ್ಷಣಿಕ ಕಾಲೇಜುಗಳನ್ನು ತೆರೆದಿರುವ ಈ ಸಂಸ್ಥೆ, ಹಳ್ಳಿಗಾಡು ಪ್ರದೇಶ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಶಾಲೆಯನ್ನು ಸ್ಥಾಪನೆ ಮಾಡಿರುವುದು ಸಂತಸ ವಿಚಾರ ಎಂದರು. ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಬಿ.ಎಚ್‌.ಎಸ್‌.ಹೈಯರ್‌ ಎಜುಕೇಷನ್‌ ಸೊಸೈಟಿಯ ಬೆಳವಣಿಗೆಗೆ ಹಲವರು ಕೊಡುಗೆ ನೀಡಿದ್ದಾರೆ.ಇಂತಹ ಶಿಕ್ಷಣ ಸಂಸ್ಥೆಯಲ್ಲಿ ನಾನು ಕಾನೂನು ಶಿಕ್ಷಣ ಪೂರೈಸಿರುವುದು ಸಂತಸ ನೀಡಿದೆ ಎಂದು ಹೇಳಿದರು.

ಸಂಸದ ಪಿ.ಸಿ.ಮೋಹನ್‌, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ, ಬಿ.ಎಚ್‌.ಎಸ್‌.ಹೈಯರ್‌ ಎಜುಕೇಷನ್‌ ಸೊಸೈಟಿಯ ಅಧ್ಯಕ್ಷ ಜಿ.ವಿ.ವಿಶ್ವನಾಥ್‌, ಸಂಸ್ಥೆಯ ಉಪಾಧ್ಯಕ್ಷ ಎನ್‌.ವಿ.ಭಟ್‌, ಡಾ.ಕೆ.ಎಸ್‌.ಸಮೀರ ಸಿಂಹ, ಡಾ.ಎ.ಕೆ.ಅತ್ರೆ, ಡಾ. ಆರ್‌.ವಿ.ಪ್ರಭಾಕ್‌ ಇದ್ದರು.

ರಾಗಿ ಮುದ್ದೆ- ಬಸ್ಸಾರು ಸೇವಿಸಿ: ಯುವ ಸಮೂಹ ದೇಶಿಯ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು. ಫೀಜಾ-ಬರ್ಗರ್‌ ಸಂಸ್ಕೃತಿಗೆ ಮಾರು ಹೋಗದೇ ರಾಗಿ ಮುದ್ದೆ-ಬಸ್ಸಾರು, ಬೆಳೆ ಸಾರು, ಇಡ್ಲಿ, ದೋಸೆಗಳನ್ನು ಸೇವಿಸುವುದನ್ನು ಕಲಿಯಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ತೋರಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.