ಕೆರೆಗಳ ಕಾಯಕಲ್ಪಕ್ಕೆ ಮುಂದಾದ ಪಾಲಿಕೆ

14 ಕೆರೆಗಳಲ್ಲಿ ಕೊಳಚೆ ನೀರು ಸೇರದಂತೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಅಳವಡಿಕೆಗೆ ಚಿಂತನೆ

Team Udayavani, May 22, 2019, 2:14 PM IST

bglre-tdy-2..

ಬೆಂಗಳೂರು: ಬಿಬಿಎಂಪಿ ಒಡೆತನದಲ್ಲಿರುವ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮೂಲಕ ಜಲಮೂಲಗಳನ್ನು ಸಂರಕ್ಷಿಸಲು ಪಾಲಿಕೆ ಯೋಜನೆ ರೂಪಿಸಿದೆ. ಅದರಂತೆ 31 ಕೆರೆಗಳ ಅಭಿವೃದ್ಧಿಗೆ ಟೆಂಡರ್‌ ಕರೆಯಲು ಸಜ್ಜಾಗಿದ್ದು, 14 ಕೆರೆಗಳಲ್ಲಿ ಕೊಳಚೆ ನೀರು ಸೇರದಂತೆ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ (ಎಸ್‌ಟಿಪಿ) ಅಳವಳಡಿಕೆಗೆ ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 842 ಕಿ.ಮೀ. ಉದ್ದ ಬೃಹತ್‌ ಮಳೆನೀರು ಕಾಲುವೆಗಳಲ್ಲಿ ಮಳೆನೀರು ಬದಲಿಗೆ ಕೊಳಚೆಗೆ ನೀರು ಹರಿಯುತ್ತಿದೆ. ಇದರಿಂದಾಗಿ ನಗರದಲ್ಲಿನ ಕೆರೆಗಳು ಮಲೀನವಾಗುತ್ತಿದ್ದು, ಕೆರೆಗಳಲ್ಲಿ ಬೆಂಕಿ, ನೊರೆಯಂತಹ ಸಮಸ್ಯೆಗಳು ಸೃಷ್ಟಿಯಾಗಿವೆ. ಇನ್ನು ಕೆಲವೆಡೆಗಳಲ್ಲಿ ಅಂತರ್ಜಲವೂ ಕಲುಷಿತಗೊಂಡಿರುವುದು ಆತಂಕ ಮೂಡಿಸಿದೆ.

ಆ ಹಿನ್ನೆಲೆಯಲ್ಲಿ ಕೆರೆಗಳಿಗೆ ಕೊಳಚೆ ನೀರು ಪ್ರವೇಶಿಸುವುದುನ್ನು ತಪ್ಪಿಸಲು ಮುಂದಾಗಿರುವ ಪಾಲಿಕೆಯು, ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸುವ ಮೂಲಕ ಕೊಳಚೆ ನೀರು ಕೆರೆ ಸೇರಿದಂತೆ ಮಾಡಲು ಯೋಜನೆ ರೂಪಿಸಿದೆ. ಈಗಾಗಲೇ 5 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸಿರುವ ಪಾಲಿಕೆಯು ಇದೀಗ 14 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸುವ ಕಾರ್ಯ ಆರಂಭಿಸಿದೆ.

ಕಾರ್ಯ ಪ್ರಗತಿ:ಪಾಲಿಕೆಯ ಒಡೆತನದಲ್ಲಿರುವ 124 ಕೆರೆಗಳ ಪೈಕಿ ಈಗಾಗಲೇ 74 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 19 ಕೆರೆಗಳು ಜೂನ್‌ ವೇಳೆಗೆ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲಿವೆ. ಆ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಸದ್ಯ ಅಭಿವೃದ್ಧಿಪಡಿಸುತ್ತಿರುವ 19 ಕೆರೆಗಳ ಪೈಕಿ 14 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪಾಲಿಕೆಯಿಂದ ಅಭಿವೃದ್ಧಿಗೊಳಿಸುವ ಕೆರೆಗಳಲ್ಲಿಯೂ ಎಸ್‌ಟಿಪಿ ಅಳವಡಿಸಲು ಪಾಲಿಕೆ ಯೋಜನೆ ರೂಪಿಸಿದೆ.

31 ಕೆರೆಗಳ ಅಭಿವೃದ್ಧಿ ಟೆಂಡರ್‌ ಪಾಲಿಕೆಯ ವ್ಯಾಪ್ತಿಯಲ್ಲಿರುವ 31 ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಿರುವ ಕೆರೆ ವಿಭಾಗವು ತಿಂಗಳಾಂತ್ಯಕ್ಕೆ 31 ಕೆರೆಗಳ ಅಭಿವೃದ್ಧಿ ಅಭಿವೃದ್ಧಿಗೆ ಟೆಂಡರ್‌ ಆಹ್ವಾನಿಸಲು ಮುಂದಾಗಿವೆ. ಉಳಿದ 24 ಕೆರೆಗಳ ಅಭಿವೃದ್ಧಿಗೆ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿರುವ ಪಾಲಿಕೆಯು, ಸರ್ಕಾರದಿಂದ ಅನುದಾನ ಕೋರಲು ಸಿದ್ಧತೆ ನಡೆಸಿದೆ. ಆ ಮೂಲಕ ಪಾಲಿಕೆಯ ಒಡೆತನದಲ್ಲಿರುವ ಕೆರೆಗಳ ಕೆರೆಗಳನ್ನು ಅಭಿವೃದ್ಧಿಗೊಳಿಸಲು ಪಾಲಿಕೆ ನಿರ್ಧರಿಸಿದೆ.

ನಿತ್ಯ 11 ಎಂಎಲ್ಡಿ ಸಂಸ್ಕರಣೆ :ಪಾಲಿಕೆಯಿಂದ ಈಗಾಗಲೇ ಎಸ್‌ಟಿಪಿ ಅಳವಡಿಕೆ ಮಾಡಿರುವ ಕೆರೆಗಳಲ್ಲಿ ನಿತ್ಯ 4.5 ಎಂಎಲ್ಡಿ ತ್ಯಾಜ್ಯನೀರು ಶುದ್ಧೀಕರಿಸಲಾಗುತ್ತಿದೆ. ಜತೆಗೆ 14 ಕೆರೆಗಳಲ್ಲಿ ಎಸ್‌ಟಿಪಿ ಅಳವಡಿಕೆ ಕಾರ್ಯ ಪೂರ್ಣಗೊಂಡರೆ, ನಿತ್ಯ 11 ಎಂಎಲ್ಡಿ ತ್ಯಾಜ್ಯ ನೀರು ಶುದ್ಧವಾಗಲಿದೆ. ಆ ಮೂಲಕ ಕೆರೆಗೆ ಸೇರುವ ತ್ಯಾಜ್ಯನೀರಿನ ಪ್ರಮಾಣ ಕಡಿಮೆ ಮಾಡಬಹುದಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದರು.

30 ಕೋಟಿ ರೂ. ವೆಚ್ಚದಲ್ಲಿ ಎಸ್‌ಟಿಪಿ ನಗರದಲ್ಲಿರುವ ಕೆರೆಗಳ ವಿಸ್ತೀರ್ಣದ ಆಧಾರದ ಮೇಲೆ ಎಸ್‌ಟಿಪಿಗಳನ್ನು ಅಳವಡಿಸಲಾಗುತ್ತಿದೆ. ಅದರಂತೆ 10 ಎಕರೆಗಿಂತಲೂ ಕಡಿಮೆ ವಿಸ್ತೀರ್ಣವಿರುವ ಕೆರೆಗಳಲ್ಲಿ 500 ಕೆಎಲ್ಡಿ ಸಾಮರ್ಥಯದ ಎಸ್‌ಟಿಪಿ ಅಳವಡಿಸುತ್ತಿದ್ದು, 10 ರಿಂದ 20 ಎಕರೆ ವಿಸ್ತೀರ್ಣದ ಕೆರೆಗಳಲ್ಲಿ 1 ಎಂಎಲ್ಡಿ ಸಾಮರ್ಥಯದ ಎಸ್‌ಟಿಪಿ ಅಳವಡಿಸಲಾಗುತ್ತಿದೆ. ಅದರಂತೆ 500 ಕೆಎಲ್ಡಿ ಘಟಕ ನಿರ್ಮಾಣಕ್ಕೆ 1.50 ಕೋಟಿಯಾಗಲಿದ್ದು, 1 ಎಂಎಲ್ಡಿ ಘಟಕ ನಿರ್ಮಾಣಕ್ಕೆ 2.50 ರಿಂದ 3 ಕೋಟಿ ರೂ. ಆಗಲಿದೆ ಎಂದು ಅಂದಾಜಿಸಲಾಗಿದೆ.

● ವೆಂ. ಸುನೀಲ್ಕುಮಾರ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.