ಎತ್ತಿನ ಹೊಳೆ ಯೋಜನೆಯಿಂದ ನಷ್ಟವೇ ಹೆಚ್ಚು


Team Udayavani, Jun 5, 2019, 3:05 AM IST

ettina

ಬೆಂಗಳೂರು: ಎತ್ತಿನಹೊಳೆ ಯೋಜನೆ ಮುಂದುವರೆಸಿದರೆ ರಾಜ್ಯದ ಹಲವು ಜೀವನದಿಗಳು ನಾಶವಾಗಲಿದೆ ಎಂದು ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರ ಕೆ.ಎನ್‌.ಸೋಮಶೇಖರ್‌ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಸೋಮವಾರ ಸುಧೀರ್‌ ಶೆಟ್ಟಿ ಅವರ “ನೇತ್ರಾವತಿ ನದಿಯನ್ನು ನುಂಗುತ್ತಿದೆಯೇ ಎತ್ತಿನಹೊಳೆ ಯೋಜನೆ ಕಾಮಗಾರಿ’ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವೆಂದು 2014ರಿಂದ ಪ್ರತಿಭಟನೆ ಮಾಡುತ್ತಿದ್ದೇವೆ.

ಆದರೆ, ಸರ್ಕಾರ ಇದನ್ನು ಲೆಕ್ಕಿಸದೆ ಕಾಮಾಗಾರಿ ಮುಂದುವರಿಸಿದೆ. ಕುಡಿಯುವ ನೀರಿನ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಜೀವ ನದಿಗಳ ಕತ್ತು ಹಿಸುಕುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ಹೀಗಾಗಿ ನಾವು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿದ್ದೇವೆ. ಯೋಜನೆ ಸ್ಥಗಿತಗೊಳಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಮಾತನಾಡಿ, ಎತ್ತಿನಹೊಳೆ ಯೋಜನೆಯಿಂದ ಅರಣ್ಯ ನಾಶವಾಗುತ್ತಿದ್ದು, ನದಿಗಳು ಬತ್ತಿಹೋಗುತ್ತಿವೆ. ಸರ್ಕಾರ ಮಾತ್ರ ಈ ಯೋಜನೆಯನ್ನು ಮುಂದುವರಿಸುತ್ತಿದೆ. ಇದು ಕರ್ನಾಟಕದ ದೊಡ್ಡ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಮಿಯ ಮೇಲಿನ ವೈಪರೀತ್ಯ, ಹವಾಮಾನ, ಉಷ್ಣಾಂಶ ಮಿತಿಮೀರಿದೆ. ಆದರೂ ಈ ಯೋಜನೆಯನ್ನು ಕೈಬಿಡಲು ಸರ್ಕಾರ ಸಿದ್ಧವಿಲ್ಲ. ಈ ಯೋಜನೆಯು ಪಶ್ಚಿಮ ಘಟ್ಟಗಳ ಮಾತ್ರವಲ್ಲದೆ, ಇಡೀ ಕರ್ನಾಟಕದ ಜೀವ ಜಲವನ್ನು ನಾಶಪಡಿಸುತ್ತದೆ.

ಎತ್ತಿನಹೊಳೆ ಯೋಜನೆಗೆ ಸಾವಿರಾರು ಮರಗಳನ್ನು ಕಡಿದು ಅರಣ್ಯ ನಾಶಮಾಡಿದ್ದಾರೆ.ಇದನ್ನು ಅರಿಯದ ಜನರಿಗೆ ನೇತ್ರಾವತಿ ನೀರು ಎಂಬ ಹಸಿಸುಳ್ಳನ್ನು ಹೇಳಿ ನಂಬಿಸಿಲಾಗಿದೆ. ಜನರಿಗೆ ಇದೆಲ್ಲದರ ಕುರಿತು ಜಾಗೃತಿ ಮೂಡಿಸಿ ಅವರನ್ನೂ ಒಳಗೊಂಡು ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರು ಮಾತನಾಡಿ, ಎತ್ತಿನಹೊಳೆ ಯೋಜನೆಯಿಂದ ರಾಜ್ಯದ ನೀರಿನ ದಾಹ ಹೆಚ್ಚಾಗಲಿದೆ. ಅದನ್ನು ಬಿಟ್ಟರೆ ಈ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ. ಇದನ್ನು ರಾಜಕೀಯ ವಿಚಾರವಾಗಿ ಮುನ್ನೆಲೆಗೆ ತಂದಿರುವುದರಿಂದ ಹೋರಾಟ ನಡೆಸುವ ತುರ್ತು ಎದುರಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ವಾತಂತ್ರ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ, ಶಾಸಕ ಹರೀಶ್‌ ಪೂಂಜಾ, ಬಯಲುಸೀಮೆ ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.