ಪ್ರೇಯಸಿಯ ಪತಿಯ ಕೊಂದು ಮೂಟೆ ಕಟ್ಟಿದ


Team Udayavani, Aug 26, 2018, 12:26 PM IST

preyasiya.jpg

ಬೆಂಗಳೂರು: ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ಎನ್ನಲಾದ ವರ್ತೂರಿನ ಸರಕು ವಾಹನ ಚಾಲಕ ನವಾಜ್‌ ಶವವಾಗಿ ಪತ್ತೆಯಾಗಿದ್ದಾನೆ. ಆತನನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ನದಿಗೆ ಎಸೆದಿದ್ದಾರೆ.

ಈ ಸಂಬಂಧ ಕೋಲಾರ ಮೂಲದ ಶಿವಕುಮಾರ್‌, ಈತನ ಸ್ನೇಹಿತರಾದ ಪವನ್‌ ಹಾಗೂ ಬಿಎಸ್ಸಿ ವಿದ್ಯಾರ್ಥಿ ರಕ್ಷಿತ್‌ ಎಂಬುವವರನ್ನು ಬಂಧಿಸಲಾಗಿದೆ. ನವಾಜ್‌ ಕೊಲೆ ಪ್ರಕರಣದಲ್ಲಿ ಪತ್ನಿ ಆಯೀಷಾ ಕೈವಾಡ ಇರುವ ಶಂಕೆಯಿದ್ದು, ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಯೀಷಾ ಹಾಗೂ ಆರೋಪಿ ಶಿವಕುಮಾರ್‌ ಕೆಲ ವರ್ಷಗಳಿಂದ ಪರಿಚಯಸ್ಥರಾಗಿದ್ದು, ಇಬ್ಬರ ನಡುವೆ ಸ್ನೇಹವಿತ್ತು. ಶಿವಕುಮಾರ್‌ ವಿನಾ ಕಾರಣ ಮನೆಗೆ ಬರುತ್ತಿದ್ದ ಬಗ್ಗೆ ನವಾಜ್‌ ಪ್ರಶ್ನಿಸಿದ್ದ. ಪತ್ನಿಗೂ ಎಚ್ಚರಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಶಿವಕುಮಾರ್‌ ತನ್ನ ಸ್ನೇಹಿತರ ಜತೆ ಸೇರಿ ಆತನ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ನವಾಜ್‌, ವರ್ಷದ ಹಿಂದೆ ಆಯೀಷಾಳನ್ನು ವಿವಾಹವಾಗಿದ್ದ. ದಂಪತಿ ವರ್ತೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಯೀಷಾ ಆ.20ರಂದು ಪತಿ ನವಾಜ್‌ ನಾಪತ್ತೆಯಾಗಿದ್ದಾರೆ ಎಂದು ವರ್ತೂರು ಠಾಣೆಗೆ ದೂರು ನೀಡಿದ್ದಳು. ಇದರ ಬೆನ್ನಲ್ಲೇ ನವಾಜ್‌ ಪೋಷಕರು ಆ.22ರಂದು ಮತ್ತೂಂದು ದೂರು ನೀಡಿದ್ದರು. ಇದರಿಂದ ಅನುಮಾನಗೊಂಡು ತನಿಖೆ ಚುರುಕುಗೊಳಿಸಿದಾಗ ಕೊಲೆಯಾಗಿರುವುದು ಖಾತ್ರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೆಸಿಕೊಂಡು ಕೊಂದರು: ಸರಕು ಸಾಗಣೆ ವಾಹನ ಚಾಲಕನಾಗಿರುವ ನವಾಜ್‌ಗೆ ಕೆಲ ದಿನಗಳ ಹಿಂದೆ ಆರೋಪಿ ಪವನ್‌, ನಿಮ್ಮ ವಾಹನ ಬಾಡಿಗೆಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದು ಹೇಳಿ ಮನೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾನೆ. ನವಾಜ್‌ ಬರುತ್ತಿದ್ದಂತೆ ಆರೋಪಿಗಳು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಚಾಕುನಿಂದ ಕುತ್ತಿಗೆಗೆ ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ನವಾಜ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆರೋಪಿಗಳು ನವಾಜ್‌ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಕೊಂಡಿದ್ದಾರೆ. ಬಳಿಕ ಕಾರಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಕೊಂಡೊಯ್ದು ಭದ್ರಾ ನದಿಯ ಹಿನ್ನಿರಿನಲ್ಲಿ ಬಿಸಾಡಿದ್ದಾರೆ. ಹೀಗಾಗಿ ಮೂವರು ಆರೋಪಿಗಳನ್ನು ಕರೆದೊಯ್ದು ಶವ ಹೊರಗೆ ತೆಗೆಯಬೇಕಿದೆ ಎಂದು ಪೊಲೀಸರು ತಿಳಿಸಿದರು.

ಇಬ್ಬರಿಗೂ ಎರಡನೇ ಮದುವೆ: ನವಾಜ್‌ ಹಾಗೂ ಆಯೀಷಾಗೆ ಈಗಾಗಲೇ ಮದುವೆಯಾಗಿದ್ದು, ನವಾಜ್‌ ಮೊದಲ ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದ. ಮತ್ತೂಂದೆಡೆ ಆಯೀಷಾ ಕೂಡ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಇಬ್ಬರು ಪರಸ್ಪರ ಪರಿಚಯವಾಗಿದ್ದು, ಮದುವೆ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.