ರಾಜಧಾನಿಯಲ್ಲೀಗ ಮಾವಿನ ಘಮಲು


Team Udayavani, Apr 17, 2019, 3:00 AM IST

rajadhaniyall

ಬೆಂಗಳೂರು: ಮುಂಗಾರು ಪೂರ್ವದಲ್ಲಿಯೇ ಉದ್ಯಾನ ನಗರಿಗೆ ಹಣ್ಣುಗಳ ರಾಜನ ಪ್ರವೇಶವಾಗಿದ್ದು, ಪ್ರಮುಖ ಮಾರುಕಟ್ಟೆ, ರಸ್ತೆಗಳಲ್ಲಿ ಈಗಾಲೇ ಮಾವಿನ ಘಮಲು ಶುರುವಾಗಿದೆ.

ನಗರದ ಪ್ರಮುಖ ಮಾರುಕಟ್ಟೆ, ಹಣ್ಣಿನ ಮಳಿಗೆಗಳು, ಸೂಪರ್‌ ಮಾರ್ಕೆಟ್‌, ಬಜಾರ್‌ಗಳಿಂದ ಹಿಡಿದು ಹಾಪ್‌ಕಾಮ್ಸ್‌, ತಳ್ಳುಗಾಡಿಗಳು, ಬೀದಿಬದಿ ವ್ಯಾಪಾರ ಮಳಿಗೆಗಳಲ್ಲಿ ಮಾವಿನ ಹಣ್ಣಿನ ರಾಶಿ ಕಾಣುತ್ತಿದ್ದು, ಇಲ್ಲಿನ ಸ್ವಾದಿಷ್ಟ ಮಾವಿನ ಹಣ್ಣುಗಳಿಗೆ ಜನ ಮಾರುಹೋಗಿದ್ದಾರೆ. ಇನ್ನು ಮುಂದಿನ ಮೂರ್‍ನಾಲ್ಕು ತಿಂಗಳ ಕಾಲ ನಗರದಲ್ಲಿ ಮಾವಿನ ಪಾರುಪತ್ಯ ಮುಂದುವರಿಯಲಿದೆ.

ಈ ಬಾರಿ ಪ್ರಮುಖ ತಳಿಗಳಾದ ಬಾದಾಮಿ, ಮಲ್ಗೊವಾ, ಮಲ್ಲಿಕಾ, ರಸಪೂರಿ, ಹಿಮಾಯತ್‌, ಸಿಂಧೂರ, ತೋತಾಪುರಿ, ದಶೇರಿ, ಕಾಲಾಪಹಾಡ್‌, ಕುದಾದಾಸ್‌, ಬೈಗಾನ್‌ಪಲ್ಲಿ ಸೇರಿದಂತೆ 10ಕ್ಕೂ ಹೆಚ್ಚಿನ ತಳಿಗಳು ಮಾರುಕಟ್ಟೆಗೆ ಬಂದಿವೆ. ಈ ತಳಿಯ ಪೈಕಿ ಬಾದಾಮಿ ಹಾಗೂ ಮಲ್ಗೊàವಾ ಹಣ್ಣಿಗೆ ಬೇಡಿಕೆ ಹೆಚ್ಚಿದೆ.

ಸದ್ಯ ಈಗ ಆಂಧ್ರ ಭಾಗದ ಮಾವು ಬೆಂಗಳೂರಿಗೆ ಪೂರೈಕೆ ಯಾಗುತ್ತಿದ್ದು, ಈ ತಿಂಗಳ ಅಂತ್ಯಕ್ಕೆ ಕೋಲಾರ, ಶ್ರೀನಿವಾಸಪುರ, ರಾಮನಗರ ಭಾಗದ ಹಣ್ಣು ಮಾರುಕಟ್ಟೆಗೆ ಬಲಿರಲಿದೆ. ಮುಂದಿನ ತಿಂಗಳು ಹಾವೇರಿ, ಧಾರವಾಡ, ಕೊಪ್ಪಳ ಮತ್ತಿತರ ಭಾಗಗಳ ಮಾವು ಮಾರುಕಟ್ಟೆಗೆ ಲಗ್ಗೆ ಇಡಲಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಜಯಮಹಲ್‌ ರಸ್ತೆಯ ಫ‌ನ್‌ವರ್ಲ್ಡ್ ಮುಂಭಾಗದ ಖಾಲಿ ಜಾಗದಲ್ಲಿ ತಮಿಳುನಾಡಿನ ಸೇಲಂ, ತಿರಕೋಯಿಲೂರು, ಕಾಟಾ³ಡಿ, ಧರ್ಮಪುರಿ ಮೂಲದ ವಲಸಿಗ ವ್ಯಾಪಾರಿಗಳು ಮಾವಿನಹಣ್ಣಿನ ಅಂಗಡಿಗಳನ್ನು ಹಾಕುತ್ತಿದ್ದು, ಸದ್ಯ ಇಪ್ಪತ್ತಕ್ಕೂ ಹೆಚ್ಚು ಮಳಿಗೆಗಳು ಈ ಭಾಗದಲ್ಲಿವೆ.

ಈ ಬಾರಿ ಹೆಚ್ಚು ಇಳುವರಿ: ರಾಜ್ಯದಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಿರುವುದರಿಂದ ಹಾಗೂ ಹವಾಮಾನ ವೈಪರಿತ್ಯ ಕಡಿಮೆ ಇರುವುದರಿಂದ ಮಾವುವಿನ ಉತ್ತಮ ಇಳುವರಿ ನಿರೀಕ್ಷಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 1.80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆದಿದ್ದು, 10 ಲಕ್ಷ ಟನ್‌ ಮಾವು ಉತ್ಪಾದನೆಯಾಗಬಹುದು ಎಂದು ಅಂದಾಜಿಸಲಾಗಿದೆ. ಜತೆಗೆ ಇಲ್ಲಿಯವರೆಗೆ ಮಳೆ ಬೀಳದ ಕಾರಣ ಮುಂದೆ ಮೂರು ಹಂತದಲ್ಲಿ ಮಾವು ಕೊಯ್ಲಿಗೆ ಬರಲಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ಮಾವು ಮಂಡಳಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಮಾವು ಮೇಳಕ್ಕೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ. ಮಾವು ಮೇಳದ ಕುರಿತು ಯಾವುದೇ ಸಭೆಗಳು ಈವರೆಗೆ ನಡೆದಿಲ್ಲ. ಜತೆಗೆ ರಾಜ್ಯದ ಎಲ್ಲಾ ಭಾಗದ ಮಾವು ಮಾರುಕಟ್ಟೆಗೆ ಬಂದ ನಂತರವೇ ಅಂದರೆ ಮೇ ಕೊನೆಯ ವಾರದ ನಂತರವೇ ಈ ಬಾರಿ ಮೇಳ ಆಯೋಜನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ದರ ಪಟ್ಟಿ (ಕೆ.ಜಿ.ಗೆ): ಆಲ್ಫನ್ಸ್‌ – 65, ಅಮರ್‌ಪಾಲಿ – 80, ಬೈಗನ್‌ಪಾಲಿ – 99, ಮಲ್ಗೊವಾ- 150, ರಸಪೂರಿ-80 ರೂ. ಮಲ್ಲಿಕಾ- 109 ರೂ. ನೀಲಂ- 52, ರಸಪೂರಿ- 96, ಸೆಂಧೂರ- 42 ರೂ. ಕಾಲಾಪಹಡ್‌-100 ರೂ. ದಶೇರಿ -150ರೂ. ತೊತಾಪುರಿ-40 ರೂ.

ಈ ವರ್ಷ ಸರಿಯಾದ ಸಮಯಕ್ಕೆ ಮಾವಿನ ಮರಗಳು ಹೂ ಬಿಟ್ಟಿದ್ದು, ಕಳೆದ ಬಾರಿಗಿಂತ ಶೇ.20ರಷ್ಟು ಉತ್ತಮ ಇಳುವರಿಯಾಗಲಿದೆ. ಕಳೆದ ವರ್ಷ ಮಳೆ ಕೈಕೊಟ್ಟ ಪರಿಣಾಮ ಕಾಯಿಗಳ ಗಾತ್ರದಲ್ಲಿ ವ್ಯತ್ಯಾಸವಾಗಬಹುದು. ಪ್ರತಿ ಬಾರಿಯಂತೆ ಹಾಪ್‌ಕಾಮ್ಸ್‌ನಲ್ಲಿ ಮಾರುಕಟ್ಟೆಗಿಂತ ಶೇ.20 ರಷ್ಟು ಕಡಿಮೆ ಬೆಲೆಯಲ್ಲಿ ಹಣ್ಣು ಸಿಗಲಿವೆ.
-ಪ್ರಸಾದ್‌, ವ್ಯವಸ್ಥಾಪಕ ನಿರ್ದೇಶಕರು, ಹಾಪ್‌ಕಾಮ್ಸ್‌

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.