ನಿರೀಕ್ಷಿತ ಫ‌ಲ ಕೊಡದ ಮಾಸ್ಟರ್‌ಪ್ಲ್ಯಾನ್‌


Team Udayavani, May 20, 2018, 6:00 AM IST

amit-saha.jpg

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರ “ಮಾಸ್ಟರ್‌ ಪ್ಲ್ರಾನ್‌’ ಕೈ ಕೊಟ್ಟಿತಾ? ಅಥವಾ ಕಾಂಗ್ರೆಸ್‌-ಜೆಡಿಎಸ್‌ ಒಗ್ಗಟ್ಟಿನ ಮುಂದೆ ರಾಜ್ಯ ನಾಯಕರು ಮಿಸುಕಾಡಲೂ ಆಗಲಿಲ್ಲವಾ ಎಂಬ ಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಏಕೆಂದರೆ, ಫ‌ಲಿತಾಂಶ ಹೊರಬಿದ್ದ ಮರು ದಿನ ಒಬ್ಬ ಪಕ್ಷೇತರ ಶಾಸಕನನ್ನು ಸೆಳೆದು ಸಂಜೆಯೊಳಗೆ ಕಾಂಗ್ರೆಸ್‌ನತ್ತ ಹೋಗುವುದು ತಡೆಯಲಾಗದ ರಾಜ್ಯ ನಾಯಕರು ಇನ್ನು 14 ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ವಿಶ್ವಾಸಮತ ಪ್ರಕ್ರಿಯೆಯಿಂದ ದೂರ ಇರಿಸುವುದು ಅಥವಾ ವಿಧಾನಸಭೆಯಲ್ಲೇ ಎಂಟು ಮಂದಿ ಬಿಜೆಪಿ ಪರ ಮತ ಚಲಾಯಿಸುವಂತೆ ನೋಡಿಕೊಳ್ಳಲು ಸಾಧ್ಯವಾಗುತ್ತಿತ್ತಾ ಎಂಬ ಪ್ರಶ್ನೆಯೂ ಕೇಂದ್ರ ನಾಯಕರನ್ನು ಕಾಡಿತ್ತು.

ಇದೇ ಕಾರಣಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಪ್ರವೇಶ ಮಾಡಲಿಲ್ಲ. ಈ ತಂತ್ರ ಯಶಸ್ವಿಗೆ ರಾಜ್ಯ ನಾಯಕರು ಶಕ್ತಿ ಮೀರಿ ಶ್ರಮಿಸುವರೇ ಎಂಬ ಬಗ್ಗೆ ಪೂರ್ಣ ನಂಬಿಕೆ ಇಲ್ಲದ ಕಾರಣ ದೆಹಲಿ ಬಿಟ್ಟು ಬರಲಿಲ್ಲ. ಒಂದು ಹಂತದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರ ರಚನೆಗೆ ಬಿಟ್ಟುಬಿಡಿ ಎಂಬ ಸೂಚನೆಯನ್ನೂ ನೀಡಿದರು.
ಯಡಿಯೂರಪ್ಪ ಅವರು ಹಠ ಹಿಡಿದು ಒಮ್ಮೆ ನನಗೆ ಅವಕಾಶ ಕೊಡಿ. ಬಹುಮತ ಸಾಬೀತುಪಡಿಸುತ್ತೇನೆ ಎಂದು ರಾಜ್ಯಪಾಲರು ಮೊದಲು ಬಿಜೆಪಿ  ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ನೋಡಿಕೊಂಡರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಶಾಸಕರಿಗೆ ಸಚಿವಗಿರಿ ಆಮಿಷ ನೀಡಿ ರಾಜೀನಾಮೆ ಕೊಟ್ಟು ಚುನಾವಣೆಗೆ ಸ್ಪರ್ಧಿಸಿದಾಗ ವೆಚ್ಚ ನೋಡಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡುವ ಭರವಸೆ ಕೊಟ್ಟರೆ ಬಿಜೆಪಿ ಪರ ಮತ ಹಾಕಲಿದ್ದಾರೆ. 

ಹಿಂದೆಯೂ ಇಂತಹ ತಂತ್ರ ಯಶಸ್ವಿಯಾಗಿರುವುದರಿಂದ ಈಗಲೂ ಆಗುತ್ತದೆ ಎಂದೇ ಯಡಿಯೂರಪ್ಪ ನಂಬಿದ್ದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಯಡಿಯೂರಪ್ಪ ಅವರ ಮುಖದಲ್ಲಿ ಆತಂಕ ಕಡಿಮೆಯಾಗಿರಲಿಲ್ಲ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗಲೂ ಸಪ್ಪೆಯಾಗೇ ಇದ್ದರು. ಬಹುಮತ ಸಾಬೀತು ಸಾಧ್ಯವಾ? ಎಂಬ ಪ್ರಶ್ನೆ ಅವರಲ್ಲೂ ಇತ್ತು.

ಆದರೆ, ರಾಜ್ಯಪಾಲರು ಬಹುಮತ ಸಾಬೀತಿಗೆ ಹದಿನೈದು ದಿನ‌ ಅವಕಾಶ ಕೊಟ್ಟ ರಾಜ್ಯಪಾಲರ ಕ್ರಮದ ವಿರುದ್ಧ ಕಾಂಗ್ರೆಸ್‌ ಸುಪ್ರೀಂಕೋರ್ಟ್‌ ಮೊರೆ ಹೋದ ನಂತರ ಸುಪ್ರೀಂಕೋರ್ಟ್‌ ಶನಿವಾರವೇ ಬಹುಮತ ಸಾಬೀತುಪಡಿಸಬೇಕು ಎಂದು ತೀರ್ಪು ನೀಡಿದ ಮೇಲೆ ಬಿಜೆಪಿಯಲ್ಲಿ ಸಾಧ್ಯವಾ ಎಂಬ ಭಯ ಕಾಡಿತು.

ಯಡಿಯೂರಪ್ಪ ಅವರು ಆಪರೇಷನ್‌ ಕಮಲ ಕಾರ್ಯಾಚರಣೆ ಯಶಸ್ವಿಯಾಗಬಹುದು ಎಂದು ನಂಬಿದ್ದರು. ಅದಕ್ಕಾಗಿ ಜನಾರ್ದನರೆಡ್ಡಿ-ಶ್ರೀರಾಮುಲು, ಉಮೇಶ್‌ಕತ್ತಿ-ಬಸವರಾಜ ಬೊಮ್ಮಾಯಿ-ಮುರುಗೇಶ್‌ ನಿರಾಣಿ ಅವರನ್ನು ನೆಚ್ಚಿಕೊಂಡಿದ್ದರು. ಅವರೂ ಒಂದಷ್ಟು ಪ್ರಯತ್ನಪಟ್ಟರೂ ಆನಂದ್‌ಸಿಂಗ್‌, ಪ್ರತಾಪಗೌಡ ಪಾಟೀಲ್‌ ಬಿಟ್ಟು ಬೇರೆಯವರು ಗಾಳಕ್ಕೆ ಸಿಗಲಿಲ್ಲ.

ಎಷ್ಟೇ ಪ್ರಯತ್ನಪಟ್ಟರೂ ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಅವರ ಕುಟುಂಬ ಸದಸ್ಯರ ಮೂಲಕ ಪ್ರಯತ್ನಿಸಿದರೂ ಆಗಲಿಲ್ಲ. ಹೀಗಾಗಿ, ಬಹುಮತ ಸಾಧ್ಯವಿಲ್ಲ ಎಂಬುದು ಶುಕ್ರವಾರ ರಾತ್ರಿಯೇ ಬಿಜೆಪಿ ನಾಯಕರಿಗೆ ಮನದಟ್ಟು ಆಗಿತ್ತು. ಇಷ್ಟಾದರೂ ಎಲ್ಲೋ ಒಂದು ಭರವಸೆ ಯಡಿಯೂರಪ್ಪ ಅವರಿಗೆ ಇತ್ತು. ಕೊನೇ ಪ್ರಯತ್ನ ಎಂದು ಶುಕ್ರವಾರ ರಾತ್ರಿಯೂ ವೀರಶೈವ-ಲಿಂಗಾಯಿತ ಶಾಸಕರ ಸೆಳೆಯುವ ಯತ್ನ ನಡೆಸಿದರು. ಆದರೆ, ಅದೂ ಫ‌ಲ ನೀಡಲಿಲ್ಲ.

ಮತ್ತೂಂದೆಡೆ ತಮ್ಮದೇ ಪಕ್ಷದವರು ಹಂಗಾಮಿ ಸ್ಪೀಕರ್‌ ಆಗಿ ನೋಡಿಕೊಂಡು ಆ ಮೂಲಕ ಬಿಜೆಪಿ ಪರ ಮತ ಹಾಕಿದರೂ ಏನೂ ಆಗುವುದಿಲ್ಲ. ಅನರ್ಹತೆ ವಿಚಾರ ನಮ್ಮ ಸ್ಪೀಕರ್‌ ಬಳಿಯೇ ಬರಲಿದೆ ಎಂಬ ಸಂದೇಶ ರವಾನಿಸಿದರು. ಆದರೆ, ಸುಪ್ರೀಂಕೋರ್ಟ್‌ ಬಹುಮತ ಯಾಚನೆಗೆ ಹದಿನೈದು ದಿನ ಕಾಲಾವಕಾಶ ಕೊಟ್ಟ ರಾಜ್ಯಪಾಲರ ನಿರ್ಧಾರವನ್ನೇ ಮಾರ್ಪಡಿಸಿದೆ. ಇನ್ನು  ಹಂಗಾಮಿ ಸ್ಪೀಕರ್‌ ತೀರ್ಮಾನ ಬದಲಿಸುವುದಿಲ್ಲವೇ? ಒಂದೊಮ್ಮೆ ವಿಪ್‌ ಉಲ್ಲಂ ಸಿ ಅನರ್ಹತೆ ಶಿಕ್ಷೆಗೆ ಗುರಿಯಾದರೆ ಆರು ವರ್ಷ ಚುನಾವಣೆಗೆ ನಿಲ್ಲದಂತಾಗುತ್ತದೆ.

ಜತೆಗೆ, ಕಾಂಗ್ರೆಸ್‌-ಜೆಡಿಎಸ್‌ ಜತಗೂಡಿ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿ ಹಾಕಿದರೆ ಎಷ್ಟು ವೆಚ್ಚ ಮಾಡಿದರೂ ಗೆಲ್ಲುವುದು ಕಷ್ಟ ಎಂಬ ಆತಂಕ ಬಿಜೆಪಿ ಪರ ಬರಲು ಮನಸ್ಸು ಮಾಡಿದ್ದ ಕೆಲವು ಶಾಸಕರಲ್ಲಿ ಮೂಡಿತು. ಹೀಗಾಗಿ, ಅಂತಿಮವಾಗಿ ಅವರು ಹಿಂದೇಟು ಹಾಕಿದರು.

ಬಿಜೆಪಿಯವರಿಗೆ ಬಹುಮತಕ್ಕೆ ಬೇಕಾದ ಸಂಖ್ಯೆ ಹೊಂದಿಸುವುದು ಎಷ್ಟು ಕಷ್ಟ. ಒಂದೊಮ್ಮೆ  ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾದರೆ ಮುಂದಿನ ಅಪಾಯಗಳೇನು ಎಂಬುದನ್ನು ಎರಡೂ ಪಕ್ಷದ ಶಾಸಕರಿಗೆ ದೇವೇಗೌಡ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌ ಅವರು ಭಯ ಹಿಡಿಸುವಲ್ಲಿಯೂ ಯಶಸ್ವಿಯಾಗಿದ್ದರು.

ಎಲ್ಲ ಬಾಗಿಲುಗಳು ಮುಚ್ಚಿದ ನಂತರ ಬಿಜೆಪಿ ನಾಯಕರು ಕೈ ಚೆಲ್ಲಿದರು. ಸೋಮಶೇಖರರೆಡ್ಡಿ ಸುಪರ್ದಿಯಲ್ಲಿದ್ದ ವಿಜಯ್‌ಸಿಂಗ್‌, ಪ್ರತಾಪಗೌಡ ಪಾಟೀಲರನ್ನು ಬಿಟ್ಟು ಕಳುಹಿಸಲು ನಿರ್ಧರಿಸಿದರು ಎಂದು ಹೇಳಲಾಗಿದೆ.
ಹೀಗಾಗಿಯೇ, ಶನಿವಾರ ಸದನಕ್ಕೆ ಬರುವಾಗಲೇ ಭಾವನಾತ್ಮಕ ಭಾಷಣ ಮಾಡಿ ನಿರ್ಗಮಿಸುವ ತೀರ್ಮಾನ ಮಾಡಿಯೇ ಬಂದಿದ್ದರು. ಆದರೆ, ಬಿಜೆಪಿ ಕಾರ್ಯಕರ್ತರು-ಮುಖಂಡರಲ್ಲಿ ಏನಾದರೂ ಮ್ಯಾಜಿಕ್‌ ಆಗಲಿದೆ ಎಂದೇ ಕೊನೇವರೆಗೂ ನಂಬಿದ್ದರು.  ಆದರೆ, ಅದು ಹುಸಿಯಾಯಿತು.

ಬಿಎಸ್‌ವೈ ಕನಸು ಭಗ್ನ
ಮೇ 17 ರಂದು ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಯೇ ತೀರುತ್ತೇನೆ ಎಂದು ಹೇಳಿದ್ದ ಮಾತು ಸತ್ಯವಾಯಿತಾದರೂ ಮುಖ್ಯಮಂತ್ರಿಯಾಗಿ ಮುಂದುವರಿಯುವ ಕನಸು ಭಗ್ನಗೊಂಡಿತು. ಚುನಾವಣೆಗೆ ಮುನ್ನ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಂಟು ದಿನದ ಸುಲ್ತಾನ ಎಂದು ಟೀಕಿಸಿದ್ದ ಯಡಿಯೂರಪ್ಪ ಮೂರು ದಿನದ ಸುಲ್ತಾನರಾದರು. ರಾಜಕೀಯ ಮೇಲಾಟದಲ್ಲಿ ಬಿ.ಎಸ್‌.ಯಡಿಯೂರಪ್ಪ ಮತ್ತೂಮ್ಮೆ “ದುರಂತ ನಾಯಕ’ ಆಗಬೇಕಾಯಿತು. ಹಿಂದೊಮ್ಮೆ ಏಳು ದಿನ ಮುಖ್ಯಮಂತ್ರಿಯಾಗಿ ನಿರ್ಗಮಿಸಿದಂತೆ ಈಗ ಮೂರು ದಿನಕ್ಕೆ ಸೀಮಿತವಾಗಿ ಹೋಗಬೇಕಾಯಿತು.

“ಚಾಣಕ್ಯ’ನ ತಂತ್ರ ವಿಫ‌ಲವಾಯ್ತಾ?
ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್‌ ಸಂಖ್ಯೆ ಪಡೆಯುವಲ್ಲಿ ಬಿಜೆಪಿ ವಿಫ‌ಲವಾಯ್ತಾ? ಚುನಾವಣಾ ಪೂರ್ವದಲ್ಲಿ ಅಮಿತ್‌ ಶಾ ಹೂಡಿದ್ದ ಕಾರ್ಯತಂತ್ರ ಪೂರ್ಣವಾಗಿ ಫ‌ಲಿಸಲಿಲ್ಲವಾ? ಎಂಬ ಚರ್ಚೆಯೂ ನಡೆಯುತ್ತಿದೆ. 72 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಂತರ ಬಿಡುಗಡೆಯಾದ ಅಭ್ಯರ್ಥಿಗಳಲ್ಲಿ ಗೆದ್ದೇ ಗೆಲ್ಲುವ ಗಟ್ಟಿ ಕುಳಗಳು ಹೆಚ್ಚು ಇರಲಿಲ್ಲ. ಹಳೇ ಅಭ್ಯರ್ಥಿಗಳನ್ನು ಬಿಟ್ಟು ಮಣೆ ಹಾಕಿದ ಹೊಸಬರು ಗೆಲುವಿನ ಹತ್ತಿರ ಬರಲಿಲ್ಲ. ಕೆಲವು ಕಡೆ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗಲಿಲ್ಲ, ಟಿಕೆಟ್‌ ಕೊಟ್ಟವರು ಬೇಡ ಎಂದು ಹೇಳಿದ್ದರು. ಇದು ಮೊದಲ ಹಂತದ ಫೇಲ್‌. ಇಷ್ಟರ ನಡುವೆಯೂ  ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಭಾಷಣ, ಶೋಭಾ ಕರಂದ್ಲಾಜೆ ಸೇರಿ ವಾರ್‌ ರೂಂ ತಂಡದಿಂದ ಕಾಂಗ್ರೆಸ್‌ ವಿರುದ್ಧ ವಾಗಾœಳಿ, ಆಡಳಿತ ವಿರೋಧಿ ಅಲೆಯಿಂದಾಗಿ ಬಿಜೆಪಿ 104 ತಲುಪಲು ಸಾಧ್ಯವಾಯಿತು. ಇದು ಸಕ್ಸಸ್‌. ಇಲ್ಲದಿದ್ದರೆ ಬಿಜೆಪಿ 75 ಸ್ಥಾನ ಗಳಿಸುವುದು ಕಷ್ಟವಾಗುತ್ತಿತ್ತು ಎಂಬ ಮಾತುಗಳು ಬಿಜೆಪಿಯಲ್ಲೇ ಕೇಳಿಬರುತ್ತಿವೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.