ಸೆಪ್ಟೆಂಬರ್‌ನಲ್ಲಿ ಗರಿಷ್ಠ ಉಷ್ಣಾಂಶ


Team Udayavani, Sep 12, 2018, 12:28 PM IST

sep-ush.jpg

ಬೆಂಗಳೂರು: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಾಖಲೆ ಮಳೆಗೆ ಸಾಕ್ಷಿಯಾಗಿದ್ದ ಬೆಂಗಳೂರು, ಬೇಸಿಗೆ ಕಾಲದ ಧಗೆಯನ್ನು ಅನುಭವಿಸುತ್ತಿದೆ! ಮಂಗಳವಾರ ನಗರದಲ್ಲಿ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 21.7 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.

ಇದು ಸಾಮಾನ್ಯಕ್ಕಿಂತ ಕ್ರಮವಾಗಿ 3 ಮತ್ತು 2 ಡಿಗ್ರಿ ಅಧಿಕವಾಗಿದೆ. ಕಳೆದ 10 ದಿನಗಳ ಅಂತರದಲ್ಲಿ ಸತತ 2ನೇ ಬಾರಿ ಗರಿಷ್ಠ ತಾಪಮಾನ 30 ಡಿಗ್ರಿ ದಾಟಿದಂತಾಗಿದೆ. ಪರಿಣಾಮ ನಗರದ ನಾಗರಿಕರಿಗೆ ಮಳೆಗಾಲದಲ್ಲೂ ಬೇಸಿಗೆ ಅನುಭವ ಆಗುತ್ತಿದೆ. 2017ರ ಸೆಪ್ಟೆಂಬರ್‌ನಲ್ಲಿ 513.8 ಮಿ.ಮೀ. ಮಳೆಯಾಗಿತ್ತು. 

ಸೆಪ್ಟೆಂಬರ್‌ ಮುಂಗಾರು ಮಾರುತಗಳ ನಿರ್ಗಮನ ಕಾಲ. ಹಾಗಾಗಿ, ನಗರದಲ್ಲಿ ಸಾಮಾನ್ಯವಾಗಿ ಮಳೆ ಪ್ರಮಾಣ ಹೆಚ್ಚು. ಆದರೆ, ಈ ಬಾರಿ ಬಿಸಿಲಿನ ಧಗೆ ನಗರದ ನಾಗರಿಕರನ್ನು ಸುಸ್ತು ಮಾಡುತ್ತಿದೆ. ಇದಕ್ಕೆ ಕಾರಣ- ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಕೆ ಆಗಿರುವುದು ಎನ್ನುತ್ತದೆ ಹವಾಮಾನ ಇಲಾಖೆ. 

ಮುಂಗಾರು ಮಂಕಾಗಿದೆ. ಈ ಮಧ್ಯೆ ಟ್ರಫ್ ಮತ್ತು ಚಂಡಮಾರುತಗಳ ಪರಿಚಲನೆಯಿಂದ ಮೋಡಕವಿದ ವಾತಾವರಣ ಇದೆ. ಇದು ವಾತಾವರಣದಲ್ಲಿನ ಬಿಸಿಯನ್ನು ಹೊರಹೋಗಲು ಬಿಡುವುದಿಲ್ಲ. ವಾಪಸ್‌ ವಾತಾವರಣಕ್ಕೇ ಕಳುಹಿಸುತ್ತದೆ.

ಹಾಗಾಗಿ, ಸಾಮಾನ್ಯಕ್ಕಿಂತ ಕೇವಲ 1 ಅಥವಾ 2 ಡಿಗ್ರಿ ತಾಪಮಾನ ಹೆಚ್ಚು-ಕಡಿಮೆಯಾದರೂ ಹೆಚ್ಚು ಧಗೆಯ ಅನುಭವ ಆಗುತ್ತದೆ. ಸೋಮವಾರ ಗರಿಷ್ಠ ತಾಪಮಾನ 31.1 ಡಿಗ್ರಿ ಇದ್ದರೆ, ಮಂಗಳವಾರ 31.2 ಡಿಗ್ರಿ ದಾಖಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮಳೆ ಬಿದ್ದು 10ರಿಂದ 12 ದಿನಗಳಾಗಿವೆ. ಮತ್ತೂಂದೆಡೆ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಯಾವುದೇ ಮೋಡವಾಗಲಿ ಅಥವಾ ತಂಪು ಗಾಳಿಯಾಗಲಿ ಬರುತ್ತಿಲ್ಲ. ಇದರಿಂದ ವಾತಾವರಣದಲ್ಲಿ ತೇವಾಂಶ ಇಲ್ಲದಂತಾಗಿದೆ. ಈ ಮಧ್ಯೆ ಹೊರಗಡೆಯಿಂದ ಕಿರಣಗಳ ಆಗಮನ ಆಗುತ್ತಿದೆ. ಆದರೆ, ಮೋಡಕವಿದ ವಾತಾವರಣದಿಂದ ನಿರ್ಗಮನ ಆಗುತ್ತಿಲ್ಲ. ಪರಿಣಾಮ ಬೇಸಿಗೆ ಅನುಭವ ಆಗುತ್ತಿದೆ ಎಂದು ಹವಾಮಾನ ತಜ್ಞ ಡಾ.ಎಂ.ಜೆ. ರಾಜೇಗೌಡ ತಿಳಿಸಿದ್ದಾರೆ. 

ಸೆ. 1ರಿಂದ 11ರವರೆಗೆ ನಗರದಲ್ಲಿ ದಾಖಲಾದ ತಾಪಮಾನ ಹೀಗಿದೆ (ಡಿಗ್ರಿ ಸೆಲ್ಸಿಯಸ್‌ನಲ್ಲಿ). 
ದಿನಾಂಕ    ಗರಿಷ್ಠ    ಕನಿಷ್ಠ 

1    28.3    20
2    28.2    20.3
3    29.3    19.7
4    29.8    19.7
5    29.9    20.4
6    29.2    19.9
7    29.2    20.3
8    29.1    20.1
9    29    20.5
10    31.1    21.6
11    31.2    21.7

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.