ಗಾರ್ಮೆಂಟ್ಸ್‌ ನೌಕರರ ಕನಿಷ್ಠ ವೇತನ ಕಗ್ಗಂಟು


Team Udayavani, Oct 3, 2019, 3:08 AM IST

garments

ಬೆಂಗಳೂರು: ಗಾರ್ಮೆಂಟ್ಸ್‌ ನೌಕರರ ಕನಿಷ್ಠ ವೇತನ ಪರಿಷ್ಕರಣೆ ವಿಚಾರವಾಗಿ ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ತ್ರಿಪಕ್ಷೀಯ ಸಭೆ ವಿಫ‌ಲವಾಗಿದೆ. ಕಾರ್ಖಾನೆ ಮಾಲೀಕರು ನಾ ಕೊಡೆ ಎಂಬ ಹಠಕ್ಕೆ ಬಿದ್ದಿದ್ದರೆ, ಕಾರ್ಮಿಕರು ನಾ ಬಿಡೆ ಎಂಬ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಕಾರ್ಮಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ತ್ರಿಪಕ್ಷೀಯ ಸಮಿತಿ ಸಭೆ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫ‌ಲವಾಗಿದ್ದು, ಈಗ ವಿವಾದ ಸರ್ಕಾರದ ಅಂಗಳಕ್ಕೆ ತಲುಪಿದೆ.

ಗಾರ್ಮೆಂಟ್ಸ್‌ ನೌಕರರ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೆ.5ರಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕ ಪ್ರತಿನಿಧಿಗಳನ್ನು ಒಳಗೊಂಡ ತ್ರಿಪಕ್ಷೀಯ ಸಭೆಯ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಸರ್ಕಾರ ಹೇಳಿತ್ತು.  ಅದರಂತೆ, ಸೆ.20ರಂದು ಕಾರ್ಮಿಕ ಆಯುಕ್ತ ಕೆ.ಜಿ.ಶಾಂತಾರಾಮ್‌ ಅಧ್ಯಕ್ಷತೆಯಲ್ಲಿ ಪುನ: ತ್ರಿಪಕ್ಷೀಯ ಸಮಿತಿ ಸಭೆ ನಡೆಯಿತು. ಆದರೆ, ಸೆ.5ರ ಸಭೆಯಲ್ಲಿ ಇಲಾಖೆ ಪ್ರಸ್ತಾಪಿಸಿದ ಕನಿಷ್ಠ ವೇತನವನ್ನು ಅನಿವಾರ್ಯವಾಗಿ ಒಪ್ಪಿಕೊಂಡಿದ್ದು, ಅದಕ್ಕಿಂತ ಹೆಚ್ಚು ವೇತನ ಕೊಡಲು ಸಾಧ್ಯವೇ ಇಲ್ಲ ಎಂದು ಕಾರ್ಖಾನೆ ಮಾಲೀಕರು ಹೇಳಿದ್ದಾರೆ.

ಆದರೆ, ರಾಜ್ಯದ 75ಕ್ಕೂ ಅಧಿಸೂಚಿತ ಉದ್ದಿಮೆಗಳಿಗೆ ನಿಗದಿಪಡಿಸಲಾಗಿರುವ ಕನಿಷ್ಠ ವೇತನವನ್ನು ಗಾರ್ಮೆಂಟ್ಸ್‌ ಉದ್ದಿಮೆಗೂ ನಿಗದಿಪಡಿಸಬೇಕು ಎಂದು ಗಾರ್ಮೆಂಟ್ಸ್‌ ನೌಕರರ ಪರ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪಟ್ಟು ಹಿಡಿದರು. ಹೀಗಾಗಿ, ಸರ್ಕಾರದ ನಿರ್ದೇಶನದಂತೆ ಹಿಂದಿನ ಸಭೆಯ ಪ್ರಸ್ತಾವನೆಯನ್ನು ಮರು ಪರಿಶೀಲಿಸಲು ಕರೆಯಲಾಗಿದ್ದ ತ್ರಿಪಕ್ಷೀಯ ಸಮಿತಿ ಸಭೆಯಲ್ಲಿ ಅಭಿಪ್ರಾಯ ಮಂಡನೆಗೆ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಯಿತು. ಆದರೆ, ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕ ಪ್ರತಿನಿಧಿಗಳು ತಮ್ಮ, ತಮ್ಮ ನಿಲುವಿಗೆ ಅಂಟಿಕೊಂಡಿದ್ದರಿಂದ ಸಭೆಯಲ್ಲಿ ಸೌಹಾರ್ದಯುತವಾಗಿ ಎಲ್ಲರಿಗೂ ಒಪ್ಪಿಗೆ ಆಗುವಂತಹ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು “ಷರಾ’ ಬರೆದು ಸಭೆಯ ನಡಾವಳಿಗಳನ್ನು ಆಯುಕ್ತರು ಸರ್ಕಾರಕ್ಕೆ ಕಳಿಸಿ ಕೊಟ್ಟಿದ್ದಾರೆ. ಇದೀಗ ಸರ್ಕಾರವೇ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕಿದೆ.

ಉದ್ದಿಮೆ ಮುಚ್ಚಬೇಕಾಗುತ್ತದೆ: ಬೇರೆ ಅಧಿಸೂಚಿತ ಉದ್ದಿಮೆಗಳಿಗೆ ನೀಡುತ್ತಿರುವ ಕನಿಷ್ಠ ವೇತನವನ್ನು ಗಾರ್ಮೆಂಟ್ಸ್‌ ವಲಯಕ್ಕೂ ನೀಡಿದರೆ, ಈಗಿನ ಆರ್ಥಿಕ ಪರಿಸ್ಥಿತಿಯಲ್ಲಿ ಉದ್ದಿಮೆಗಳನ್ನು ಮುಚ್ಚಬೇಕಾಗುತ್ತದೆ. ವೇತನ ನೀಡುವ ಉದ್ದಿಮೆದಾರರ ಸಾಮರ್ಥಯ ಪರಿಗಣಿಸಬೇಕು. ನಷ್ಟದಿಂದ ಕಾರ್ಖಾನೆಗಳು ಮುಚ್ಚಲ್ಪಟ್ಟರೆ ನೌಕರರು ಕೆಲಸ ಕಳೆದುಕೊಳ್ಳುತ್ತಾರೆ. ಹಿಂದಿನ ಸಭೆಯಲ್ಲಿ ತೀರ್ಮಾನಿಸಲಾದ ವೇತನ ದರಗಳು ಹೆಚ್ಚಾಗಿದ್ದರೂ ಸಹ ಕಾರ್ಮಿಕರ ಹಿತದೃಷ್ಟಿಯಿಂದ ಅನಿವಾರ್ಯವಾಗಿ ಒಪ್ಪಿಕೊಳ್ಳಲಾಗಿತ್ತು. ಆದರೆ, ಈಗ ಅದನ್ನೂ ಪರಿಷ್ಕರಿಸಬೇಕು ಎಂದರೆ ಕಷ್ಟ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಖಾನೆ ಮಾಲೀಕರ ಪ್ರತಿನಿಧಿಗಳು ಪ್ರತಿಪಾದಿಸಿದರು.

ಕಾನೂನು ಹೋರಾಟಕ್ಕೆ ಚಿಂತನೆ: ತ್ರಿಪಕ್ಷೀಯ ಸಮಿತಿ ಸಭೆ ಒಮ್ಮತದ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ವಿಫ‌ಲವಾಗಿದೆ. ವೇತನ ಹೆಚ್ಚಳಕ್ಕೆ ಕಾರ್ಖಾನೆ ಮಾಲೀಕರು ಒಪ್ಪುತ್ತಿಲ್ಲ. ಕನಿಷ್ಠ ವೇತನ ನಿಗದಿಪಡಿಸುವಾಗ ಉದ್ದಿಮೆದಾರರ ಸಾಮರ್ಥಯದ ಬಗ್ಗೆ ಸುಪ್ರೀಂಕೋರ್ಟ್‌, ಹೈಕೋರ್ಟ್‌ ಹಲವಾರು ಪ್ರಕರಣಗಳಲ್ಲಿ ಸ್ಪಷ್ಟ ಆದೇಶಗಳನ್ನು ಹೊರಡಿಸಿದೆ. ಬೇರೆ ಅಧಿಸೂಚಿತ ಉದ್ದಿಮೆಗಳ ನೌಕರರಿಗೆ ಸಿಗುತ್ತಿರುವ ಕನಿಷ್ಠ ವೇತನ ಗಾರ್ಮೆಂಟ್ಸ್‌ ನೌಕರರಿಗೂ ಸಿಗಬೇಕು ಅನ್ನುವುದು ನಮ್ಮ ವಾದ. ಒಮ್ಮತದ ತೀರ್ಮಾನ ಆಗದ ಹಿನ್ನೆಲೆಯಲ್ಲಿ ಕಾನೂನು ಹೋರಾಟದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ಕಾರ್ಮಿಕರ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ಸತ್ಯಾನಂದ “ಉದಯವಾಣಿ’ಗೆ ತಿಳಿಸಿದ್ದಾರೆ.

ಗಾರ್ಮೆಂಟ್ಸ್‌ ನೌಕರರ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಆಯುಕ್ತರ ಪ್ರಸ್ತಾವನೆ ಸರ್ಕಾರದ ಬಳಿ ಇದೆ. ಈಗ ಸರ್ಕಾರವೇ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿದೆ.
-ಕೆ.ಜಿ. ಶಾಂತಾರಾಮ್‌, ಆಯುಕ್ತರು, ಕಾರ್ಮಿಕ ಇಲಾಖೆ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.