ಸದನಕ್ಕೆ ಚಕ್ಕರ್ ಹಾಕುವ ಸಚಿವರು,ಅಧಿಕಾರಿಗಳ ವಿರುದ್ಧ ಕ್ರಮ: ಹೊರಟ್ಟಿ
Team Udayavani, Jul 1, 2018, 6:00 AM IST
ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಕಲಾಪಕ್ಕೆ ಗೈರು ಹಾಜರಾಗುವ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ
ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರದಿಂದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಲಿದೆ. ಮೊದಲ ದಿನದ ಆರಂಭದಲ್ಲೇ ಸದನದಲ್ಲಿ ಇರಬೇಕಾದ ಸಚಿವರ ಮತ್ತು ಅಧಿಕಾರಿಗಳ ಹೆಸರನ್ನು ಕರೆಯಲಾಗುತ್ತದೆ. ಹೆಸರು ಕರೆದ ಸಚಿವರು, ಅಧಿಕಾರಿಗಳು ಆ ಸಂದರ್ಭ ಸದನದಲ್ಲಿ ಹಾಜರಿರಬೇಕು. ಮೊದಲ ಬಾರಿಗೆ ಇಂತಹ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದರು.
ಸದನದಲ್ಲಿ ಗೈರು ಹಾಜರಾಗುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ. ಸದನಕ್ಕೆ ಬಾರದೇ ಇರುವ ಅಧಿಕಾರಿಗಳ ವಿರುದ್ಧ ಈ ಹಿಂದೆ ತೆಗೆದುಕೊಂಡಿರುವ ಕ್ರಮದ ಬಗ್ಗೆಯೂ ಮಾಹಿತಿ ಪಡೆಯ ಲಾಗುತ್ತದೆ.
ಸದನದಲ್ಲಿ ಸದಸ್ಯರು ಕೇಳುವ ಪ್ರಶ್ನೆ ಅಥವಾ ಮಾಹಿತಿಗೆ ಉತ್ತರ ನೀಡಲು ಸಂಬಂಧ ಪಟ್ಟ ಸಚಿವರು ಹಾಜರಿರಬೇಕು. ಸಚಿವರು ಯಾವುದೇ ಮಾಹಿತಿ ಕೇಳಿದಾಗ ತಕ್ಷಣವೇ ಅಧಿಕಾರಿಗಳು ನೀಡು ವಂತಿರಬೇಕು. ಒಂದು ವೇಳೆ ಸಚಿವರು ಅಥವಾ ಅಧಿಕಾರಿಗಳು ಸದನದಲ್ಲಿ ಹಾಜರಿಲ್ಲದೇ ಇದ್ದರೆ ಸದನದ ಗಾಂಭೀರ್ಯತೆಗೆ ಧಕ್ಕೆ ಬರುತ್ತದೆ.
ಕಲಾಪಗಳು ಸುಗಮವಾಗಿ ನಡೆಯಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು ಎಂದರು.
ಯಾವುದೇ ಮಾಹಿತಿ ನೀಡದೇ ಗೈರು ಹಾಜರಾಗುವ ಅಧಿಕಾರಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರದ
ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುವುದು. ಸದನಕ್ಕೆ ಬಾರದ ಸಚಿವರ ವಿರುದ್ಧ ಯಾವ ರೀತಿ
ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ