ದುಡ್ಡು ಜನರ ದನಿ ಅಡಗಿಸಿತು


Team Udayavani, May 14, 2018, 11:54 AM IST

duddhu.jpg

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಗೆ ಮತದಾನ ಭದ್ರ ಬುನಾದಿ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕುರುಡು ಕಾಂಚಣ ತಾಂಡವವಾಡಿದು,ª ಜನರ ಧ್ವನಿಯನ್ನು ದುಡ್ಡು ಅಡಗಿಸಿತು ಎಂದು ಕೇಂದ್ರ ಸಚಿವ ಅನಂತಕುಮಾರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಜೆ.ಪಿ.ನಗರದ ಟ್ರೀ ಪಾರ್ಕ್‌ನಲ್ಲಿ ಅದಮ್ಯ ಚೇತನ ಸಂಸ್ಥೆ ಹಮ್ಮಿಕೊಂಡಿದ್ದ 124ನೇ ಹಸಿರು ಭಾನುವಾರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ ಇತ್ತೀಚೆಗೆ ನಿಧನರಾದ ಶಾಸಕ ಬಿ.ಎನ್‌.ವಿಜಯಕುಮಾರ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.

ಸರಳ, ಸಜ್ಜನಿಕೆಗೆ ಹೆಸರಾಗಿದ್ದ ವಿಜಯಕುಮಾರ್‌ ಅವರು ಮಳೆ ನೀರು ಕೊಯ್ಲು, ಉದ್ಯಾನವನ ನಿರ್ಮಾಣ, ಶಿಕ್ಷಣ, ಆರೋಗ್ಯ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಬಡವರಿಗೆ ಶಿಕ್ಷಣ ನೀಡಬೇಕು. ಸೂರಿಲ್ಲದವರಿಗೆ ಸೂರು ಕಲ್ಪಿಸಬೇಕು ಎಂದು ಹಂಬಲಿಸುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ವ್ಯಕ್ತಿಗಳು ಹೆಚ್ಚೆಚ್ಚು ಆಯ್ಕೆಯಾಗಬೇಕು ಎಂದರು.

ಒಳ್ಳೆಯ ಜನಪ್ರತಿನಿಧಿಗಳಿದ್ದಾಗ ಮಾತ್ರ ಒಳ್ಳೆಯ ಸರ್ಕಾರ ಬರಲು ಸಾಧ್ಯ. ಸುಸಂಸ್ಕೃತ ಜನಪ್ರತಿನಿಧಿಗಳು ಆಯ್ಕೆಯಾಗದಿದ್ದರೆ ಉತ್ತಮ ಸರ್ಕಾರ ನಿರೀಕ್ಷಿಸುವುದು ತಪ್ಪು. ಬೆಂಗಳೂರನ್ನು ಭೂ ಮಾಫಿಯಾ ಮತ್ತು ರಿಯಲ್‌ ಎಸ್ಟೇಟ್‌ಗಳು ಹಾಳು ಮಾಡಿದ್ದು, ಉದ್ಯಾನ ನಗರಿಯ ಹಿಂದಿನ ಐಸಿರಿ ಮರುಕಳಿಸುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ಮಾಜಿ ಮೇಯರ್‌ ಎಸ್‌.ಕೆ.ನಟರಾಜ್‌ ಮಾತನಾಡಿ, ಸರಳತೆಗೆ ಹೆಸರಾಗಿದ್ದ ವಿಜಯಕುಮಾರ್‌, ಸಮಯ ಪಾಲನೆಗೆ ಮಹತ್ವ ನೀಡುತ್ತಿದ್ದರು. ಜಯನಗರ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೂಡುಗೆ ನೀಡಿರುವ ಅವರು, ಸಾರಕ್ಕಿಯಲ್ಲಿ ಬಡವರಿಗಾಗಿ ಡಯಾಲಿಸಿಸ್‌ ಕೇಂದ್ರ ತೆರೆಯುವ ಕನಸು ಕಂಡಿದ್ದರು. ಅವರ ಕನಸುಗಳನ್ನು ಈಡೇರಿಸುವ ಕಾರ್ಯ ಮುಂದೆ ನಡೆಯಲಿದೆ ಎಂದು ತಿಳಿಸಿದರು.

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್‌ ಮಾತನಾಡಿ, ಮೆಟ್ರೋದಲ್ಲಿ ಜಯನಗರದತ್ತ ಪ್ರಯಾಣಿಸಿದರೆ ಕಾಡಿನೊಳಗೆ ತೆರಳುತ್ತಿದ್ದೇವೆ ಎಂಬ ಅನುಭವ ಆಗುತ್ತದೆ. ಇದಕ್ಕೆ ಶಾಸಕರಾಗಿದ್ದ ವೇಳೆ ವಿಜಯಕುಮಾರ್‌ ಅವರು ಪರಿಸರಕ್ಕೆ ನೀಡಿದ ಕೊಡುಗೆಗಳೇ ಕಾರಣ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಲಕ್ಷಿ ನಟರಾಜ್‌, ಗೋವಿಂದ ನಾಯ್ಡು, ಬಿಜೆಪಿ ಮುಖಂಡರಾದ ವೇಣುಗೋಪಾಲ ರೆಡ್ಡಿ, ಮಂಜುನಾಥ್‌ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಟ್ರೀ ಪಾರ್ಕ್‌ನಲ್ಲಿ ಹಸಿರು ಭಾನುವಾರ: ಅದಮ್ಯ ಚೇತನ ಸಂಸ್ಥೆಯ 124ನೇ ಹಸಿರು ಭಾನುವಾರದ ಅಂಗವಾಗಿ ಜೆ.ಪಿ.ನಗರದ ಟ್ರೀ ಪಾರ್ಕ್‌ನಲ್ಲಿ ಹಲಸು, ದಾಸವಾಳ, ನಿಂಬೆ, ಆಲ, ಹೆಬ್ಬಲಸು ಸೇರಿದಂತೆ ವಿಭಿನ್ನ ಜಾತಿಯ ಸುಮಾರು 60 ಗಿಡಗಳನ್ನು ನಡೆಲಾಯಿತು. ಕೇಂದ್ರ ಸಚಿವ ಅನಂತಕುಮಾರ್‌ ಮತ್ತು ತೇಜಸ್ವಿನಿ ಅನಂತಕುಮಾರ್‌ ಸಸಿನೆಟ್ಟು, ನೀರೆರೆದರು. ಇದೇ ವೇಳೆ ಪರಿಸರದ ಸಂರಕ್ಷಣೆ ಬಗ್ಗೆ ತಿಳಿ ಹೇಳಿದ ತೇಜಸ್ವಿನಿ ಅನಂತಕುಮಾರ್‌, ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.