ತಾಯಿ ಶವದೆದುರು ಮಕ್ಕಳ ಆರ್ತನಾದ


Team Udayavani, Jul 14, 2019, 3:00 AM IST

Udayavani Kannada Newspaper

ಬೆಂಗಳೂರು: ಪತ್ನಿಯನ್ನು ಕೊಲೆಗೈದ ವ್ಯಕ್ತಿಯೊಬ್ಬ, ತನ್ನ ಮೂವರು ಮಕ್ಕಳನ್ನು ಮೃತದೇಹದೊಂದಿಗೆ ಬಿಟ್ಟು ಹೊರಗಡೆಯಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದು, ಮೂರೂ ಮಕ್ಕಳು ಎರಡು ಗಂಟೆಗೂ ಹೆಚ್ಚು ಹೊತ್ತು ತಾಯಿಯ ಮೃತದೇಹದ ಮುಂದೆ ಗೋಳಾಡಿದ ಘಟನೆ ಬಿಳಕೇಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೂವರು ಮಕ್ಕಳ ಆರ್ತನಾದ ಕೇಳಿದ ಅಕ್ಕ-ಪಕ್ಕದ ನಿವಾಸಿಗಳು ಬಾಗಿಲು ಒಡೆದು ಒಳಪ್ರವೇಶಿಸಿದಾಗ ಉಮಾರಾಣಿ (30) ಕೊಲೆಯಾಗಿರುವ ಸಂಗತಿ ಗೊತ್ತಾಗಿದ್ದು, ಮಕ್ಕಳನ್ನು ಸಂತೈಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿದ ಮೈಕೋ ಲೇಔಟ್‌ ಠಾಣೆ ಪೊಲೀಸರು, ಉಮಾರಾಣಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೈದು ಪರಾರಿಯಾಗಿರುವ ಆಕೆಯ ಪತಿ ಚಿನ್ನಸ್ವಾಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕುಡಿತ ಪ್ರಶ್ನಿಸಿದ್ದಕ್ಕೆ ಕೊಲೆ: ತಮಿಳುನಾಡು ಮೂಲದ ಚಿನ್ನಸ್ವಾಮಿ ಹಾಗೂ ಉಮಾರಾಣಿ 13 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ 11 ಹಾಗೂ 8 ವರ್ಷದ ಇಬ್ಬರು ಹೆಣ್ಣುಮಕ್ಕಳು, ಆರು ವರ್ಷದ ಮಗನಿದ್ದಾನೆ. ಬಿಳಕೇಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ದಂಪತಿ ನೆಲೆಸಿದ್ದು, ಉಮಾರಾಣಿ ಖಾಸಗಿ ಕಂಪನಿಯಲ್ಲಿ ಹೌಸ್‌ಕೀಪಿಂಗ್‌ ಕೆಲಸ ಮಾಡುತ್ತಿದ್ದರು. ಚಿನ್ನಸ್ವಾಮಿ ಗುಜರಿ ಸಾಮಾನುಗಳ ವ್ಯಾಪಾರ ಮಾಡುತ್ತಿದ್ದ.

ಚಿನ್ನಸ್ವಾಮಿ, ಪ್ರತಿ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬರುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಚಿನ್ನಸ್ವಾಮಿ ಕುಡಿದು ಬಂದಿದ್ದರಿಂದ ಉಮಾರಾಣಿ ಪ್ರಶ್ನಿಸಿದ್ದಕ್ಕೆ ಜಗಳ ನಡೆದಿತ್ತು.

ಬಳಿಕ ಉಮಾರಾಣಿ ಮೂವರು ಮಕ್ಕಳ ಜತೆ ಕೋಣೆಯಲ್ಲಿ ಮಲಗಿದ್ದರು. ಆದರೆ, ಚಿನ್ನಸ್ವಾಮಿ ಮೂವರು ಮಕ್ಕಳನ್ನು ಎಬ್ಬಿಸಿ ಹಾಲ್‌ನಲ್ಲಿ ಮಲಗಿಸಿದ್ದಾನೆ. ಬಳಿಕ ಒಳಗಿನಿಂದ ಕೋಣೆ ಬಾಗಿಲು ಲಾಕ್‌ ಮಾಡಿ, ಮಲಗಿದ್ದ ಉಮಾರಾಣಿ ತಲೆ ಮೇಲೆ ಖಾಲಿ ಸಿಲಿಂಡರ್‌ ಎತ್ತಿ ಹಾಕಿ ಕೊಲೆಗೈದಿದ್ದಾನೆ.

ಉಮಾರಾಣಿ ಕಿರುಚಾಟ ಕೇಳಿ ಮಕ್ಕಳು ನಿದ್ದೆಯಿಂದ ಎದ್ದು ಕೂಗಿಕೊಂಡಿದ್ದಾರೆ. ಬಳಿಕ ಕೋಣೆ ಬಾಗಿಲು ತೆರೆದು ಹೊರಗೆ ಬಂದ ಚಿನ್ನಸ್ವಾಮಿ, ಮಕ್ಕಳನ್ನು ಒಳಗಡೆ ಬಿಟ್ಟು ಮನೆಯ ಬಾಗಿಲನ್ನು ಹೊರಗಡೆಯಿಂದ ಲಾಕ್‌ ಮಾಡಿಕೊಂಡು ಪರಾರಿಯಾಗಿದ್ದಾನೆ.

ಮೂವರು ಮಕ್ಕಳು ಹೊರ ಬರಲಾಗದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯ ಶವದ ಮುಂದೆ ಎರಡು ಗಂಟೆಗೂ ಹೆಚ್ಚು ಕಾಲ ಗೋಳಾಡಿದ್ದಾರೆ. ಅಕ್ಕ-ಪಕ್ಕದ ಮನೆಯವರು ದಂಪತಿ ನಡುವಿನ ಜಗಳವಿರಬಹುದು ಎಂದು ಸುಮ್ಮನಾಗಿದ್ದಾರೆ. ಆದರೆ, ಮಕ್ಕಳ ಕೂಗು ಜೋರಾದಾಗ ಕೆಲವರುಮನೆ ಬಾಗಿಲು ಒಡೆದು ಒಳಪ್ರವೇಶಿಸಿದಾಗ ಕೊಲೆ ಸಂಗತಿ ಬಯಲಾಗಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಪ್ರಕರಣ ಸಂಬಂಧ ಉಮಾರಾಣಿ ಹಿರಿಯ ಮಗಳು ಹಾಗೂ ಸ್ಥಳೀಯರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಚಿನ್ನಸ್ವಾಮಿ ತಮಿಳುನಾಡಿಗೆ ಹೋಗಿ ತಲೆಮರೆಸಿಕೊಂಡಿರುವ ಸಾಧ್ಯವಿದ್ದು, ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.