ಹೆಣ್ಣು ಮಗುವಿನ ಆಸೆಗೆ ಬಾಲಕಿ ಅಪಹರಿಸಿದ್ದ ತಾಯಿ, ಮಗನ ಬಂಧನ


Team Udayavani, May 24, 2017, 12:24 PM IST

arrest.jpg

ಬೆಂಗಳೂರು: ಹೆಣ್ಣು ಮಗು ಮೇಲಿನ ಆಸೆಗಾಗಿ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿ ಕತೀಜಾಳನ್ನು ಅಪಹರಣ ಮಾಡಿದ್ದ ತಾಯಿ, ಮಗನನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿಯ ಶಿಕಾರಿಪಾಳ್ಯದ ನಿವಾಸಿ, ವಿಪ್ರೋ ಕಂಪನಿಯಲ್ಲಿ ಸ್ವತ್ಛತಾ ಕೆಲಸ ಮಾಡುವ ಫಾತೀಮಾ (30) ಮತ್ತು ಆಕೆಯ ಅಪ್ರಾಪ್ತ ಮಗನನ್ನು ಬಂಧಿಸಲಾಗಿದೆ.

ಏ.30ರಂದು ಗುಟ್ಟೆಪಾಳ್ಯದಲ್ಲಿ ಕತೀಜಾಳನ್ನು ಫಾತೀಮಾ ತನ್ನ ಅಪ್ರಾಪ್ತ ಮಗನ ಮೂಲಕ ಅಪಹರಿಸಿದ್ದರು. ಘಟನೆ ಬಳಿಕ ಬಾಲಕಿ ಫೋಟೋ ಮತ್ತು ಸಿಸಿಟಿವಿಯ ದೃಶ್ಯಾವಳಿಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದನ್ನು ಕಂಡು ಗಾಬರಿಗೊಂಡು, ಮಸೀದಿಯೊಂದರ ಬಳಿ ಮಗುವನ್ನು ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ ಚಾಲಕ ಕೊಟ್ಟ ಸುಳಿವು: ಪ್ರಕರಣದ ತೀವ್ರತೆ ಅರಿತ ಆರೋಪಿ ಮಹಿಳೆ ಅಪಹರಿಸಿದ ಎರಡು ದಿನಗಳ ಬಳಿಕ ಕತೀಜಾಳ ಮನೆ ಬಳಿಯ ಸೋಮೇಶ್ವರ ದರ್ಗಾದ ಬಳಿ ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದರು. ವಾಪಸ್‌ ಹೋಗುವಾಗ ಕಲಾಸಿಪಾಳ್ಯದಿಂದ ಮಡಿವಾಳಕ್ಕೆ ಹೋಗುವ ಮಿನಿ ಬಸ್‌ನಲ್ಲಿ ಪ್ರಯಾಣಿಸಿದ್ದರು.

ಈ ವೇಳೆ ಬಸ್‌ನ ಚಾಲಕನಿಗೆ ಚೀಟಿಯೊಂದನ್ನು ಕೊಟ್ಟು, ಇದರಲ್ಲಿರುವ ನಂಬರ್‌ಗೆ ಕರೆ ಮಾಡಿ ಬಾಲಕಿ ದರ್ಗಾ ಬಳಿ ಇದ್ದಾಳೆ ಎಂದು ತಿಳಿಸುವಂತೆ ಹೇಳಿ ಮಡಿವಾಳದಲ್ಲಿ ಇಳಿದು ನಾಪತ್ತೆಯಾಗಿದ್ದರು. ಕೃತ್ಯದ ಹಿಂದಿನ ರಹಸ್ಯ ತಿಳಿಯದ ಚಾಲಕ, ಕತೀಜಾಳ ತಂದೆ ಸೈಯದ್‌ ಹಿಮಾಮುದ್ದೀನ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಮಗು ಸಿಕ್ಕ ಬಳಿಕ ಹಿಮಾಮುದ್ದೀನ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  

ಈ ಮಧ್ಯೆ ಫಾತೀಮಾ ಬಸ್‌ ಚಾಲಕನ ನಂಬರ್‌ ಪಡೆದು ರಾತ್ರಿ 8 ಗಂಟೆ ಸುಮಾರಿಗೆ ಕರೆ ಮಾಡಿ ಮಗು ಇರುವ ಬಗ್ಗೆ ಪೋಷಕರಿಗೆ ಹೇಳಿರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ. ಇದರಿಂದ ಅನುಮಾನಗೊಂಡು ಮೊಬೈಲ್‌ ಕರೆಗಳ ದಾಖಲೆಗಳನ್ನು ಸಂಗ್ರಹಿಸಿ ವಿಚಾರಣೆ ನಡೆಸಿದಾಗ ಫಾತೀಮಾಳ ಕೃತ್ಯ ಬಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಣಿಯಂತೆ ನೋಡಿಕೊಂಡ ಫಾತಿಮಾ: ಫಾತೀಮಾ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದರು. ಆದರೆ, ಅವರಿಗೆ ಹೆಣ್ಣು ಮಕ್ಕಳ ಮೇಲೆ ಅತೀಯಾದ ಆಸೆಯಿತ್ತು. ಅದಕ್ಕಾಗಿ ಒಂದು ಹೆಣ್ಣು ಮಗುವನ್ನು ದತ್ತು ಪಡೆಯಬೇಕೆಂದಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ನಡುವೆ ಆಗಾಗ್ಗೆ ಗುಟ್ಟೆಪಾಳ್ಯದ ತನ್ನ ಸಹೋದರಿಯ ಸೊಸೆ ಮನೆಗೆ ಹೋಗುತ್ತಿದ್ದರು. ಆಗ ಕತೀಜಾಳನ್ನು ಕಂಡು ಇಂತಹ ಮಗುವನ್ನೇ  ಸಾಕಬೇಕು ಎಂದುಕೊಂಡು ಅಪಹರಣ ಕೂಡ ಮಾಡಿಸಿದ್ದರು.

ಎರಡು ದಿನಗಳ ಕಾಲ ತನ್ನ ವಶದಲ್ಲಿ ಇಟ್ಟುಕೊಂಡಿದ್ದ ಫಾತೀಮಾ ಕತೀಜಾಳನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾರೆ. ಸರಿಯಾದ ಸಮಯಕ್ಕೆ ಊಟ, ತಿಂಡಿ ಹಾಗೇ ಮಗು ಕೇಳಿದ ತಿಂಡಿಗಳನ್ನು ತಂದು ಕೊಟ್ಟು ರಾಣಿಯಂತೆ ಪಾಲನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ಎಸಗಿದ ಮರು ದಿನ ತನ್ನ ಸೊಸೆಯ ಮನೆಗೆ ಬಂದ ಫಾತೀಮಾ ಮಗು ಅಪಹರಣದ ಬಗ್ಗೆ ಸೊಸೆಗೆ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಸೊಸೆ, ಪೊಲೀಸರು ಇಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಫೋಟೋ, ಮಗುವಿನ ಫೋಟೋವನ್ನು ಮನೆ ಮನೆಗೆ ಹಂಚುತ್ತಿದ್ದಾರೆ. ಮಗುವನ್ನು ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದರು. ಭಯಗೊಂಡ ಫಾತೀಮಾ, ಎರಡು ದಿನದ ನಂತರ ಮಗುವನ್ನು ದರ್ಗಾ ಬಳಿ ಬಿಟ್ಟು ಹೋಗಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.