ಮುಂಬೈನಲ್ಲಿ ಎಟಿಎಂ ಕದ್ದು ನಗರದಲ್ಲಿ ಮೋಜುಮಸ್ತಿ ಮಾಡುತ್ತಿದ್ದವರ ಸೆರೆ


Team Udayavani, Aug 9, 2017, 11:43 AM IST

mubai-atm-theft-artrest.jpg

ಬೆಂಗಳೂರು: ಐಷಾರಾಮಿ ಜೀವನ ನಡೆಸಲು ಮುಂಬೈನ ಕೆಲ ಎಟಿಎಂಗಳಲ್ಲಿ ಹಣ ಕಳವು ಮಾಡಿ ನಗರಕ್ಕೆ ಬಂದು ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕಬ್ಬನ್‌ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಮೂಲದ ರಾಕೇಶ್‌ (24), ವಿಜಯ್‌ ಭಾನುಶಾಲಿ (24) ಹಾಗೂ ಚಡಿಲಾಲ್‌ ಗುಪ್ತ (22) ಬಂಧಿತರು. ಇವರಿಂದ 4.28 ಕೋಟಿ ರೂ. ಕಳವು ಮಾಡಿದ ಹಣದಿಂದ ಖರೀದಿಸಿದ್ದ ಚಿನ್ನಾಭರಣಗಳು ಹಾಗೂ ದುಬಾರಿ ಮೌಲ್ಯದ ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಮುಂಬೈನ ಮೂರು ಎಟಿಎಂ ಕೇಂದ್ರಗಳಲ್ಲಿ 34 ಲಕ್ಷ ರೂ. ಕಳವು ಮಾಡಿದ್ದಾರೆ.

ಬಳಿಕ ಐಷಾರಾಮಿ ಜೀವನ ನಡೆಸಲು ನಾನಾ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ನಂತರ ಲ್ಯಾವೆಲ್ಲಿ ರಸ್ತೆಯಲ್ಲಿರುವ ಸದರನ್‌ ಸ್ಟಾರ್‌ ಹೋಟೆಲ್‌ನಲ್ಲಿ 3-4 ತಿಂಗಳುಗಳಿಂದ ನೆಲೆಸಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು  ಎಂದು ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತಾ ತಿಳಿಸಿದ್ದಾರೆ.

ಆರೋಪಿ ರಾಕೇಶ್‌ ಮುಂಬೈಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕ್ಯಾಷ್‌ ಕಸ್ಟೋಡಿಯನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ವಿಜಯ್‌ ಕೋರಿಯರ್‌ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನು ಮೂರನೇ ಆರೋಪಿ ಗುಪ್ತ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ರಾಕೇಶ್‌ಗೆ ಎಟಿಎಂಗಳಿಗೆ ಹಣ ತುಂಬುವ ಕೆಲಸ ನೀಡಲಾಗಿತ್ತು. ಹಾಗಾಗಿ ಆತನಿಗೆ ಎಟಿಎಂ ಮಷಿನ್‌ಗಳ ಕೀಗಳು ಹಾಗೂ ಪಾಸ್‌ವರ್ಡ್‌ಗಳ ಬಗ್ಗೆ ಹೆಚ್ಚು ಅರಿವಿತ್ತು. 

ಮೋಜಿನ ಜೀವನ ನಡೆಸಲು ತನ್ನ ಸ್ನೇಹಿತರ ಜತೆ ಸೇರಿ ಭದ್ರತಾ ಸಿಬ್ಬಂದಿಗಳಿಲ್ಲದ ಎಟಿಎಂಗಳನ್ನು ಗುರಿಯಾಗಿಸಿಕೊಂಡು ಕೀ ಹಾಗೂ ಪಾಸ್‌ವರ್ಡ್‌ ಬಳಸಿ ಹಣ ದೋಚುತ್ತಿದ್ದರು. ಮೇ 15 ಮತ್ತು 16ರಂದು ಮುಂಬೈನ ಕೊಲೆಗಾಂವ್‌, ಸೊನಾರ್‌ಪಡ್‌ ಮತ್ತು ಪಿಸಾವಲಿಯಾ ಪ್ರದೇಶದಲ್ಲಿನ ಮೂರು ಎಟಿಎಂಗಳಲ್ಲಿ ಸುಮಾರು 34 ಲಕ್ಷ ರೂ. ಹಣವನ್ನು ಕಳವು ಮಾಡಿದ್ದರು.

ಈ ಸಂಬಂಧ ಮುಂಬೈಯಲ್ಲಿ ಆರೋಪಿಗಳ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರಿಂದ ತಲೆಮರೆಸಿಕೊಳ್ಳುವ ಸಲುವಾಗಿ ಆರೋಪಿಗಳು, ದೆಹಲಿಯ ಕುಲುಮನಾಲಿ, ಅಮೃತ್‌ಸರ್‌, ಜಮ್ಮು, ಗೋವಾ, ಪೂನಾಗಳ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ಅವರು ತಿಳಿಸಿದರು.

ಜೂನ್‌ನಲ್ಲೇ ಬಂದಿದ್ದ ಆರೋಪಿಗಳು
ಜೂನ್‌ 23ರಂದೆ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಇಲ್ಲಿನ ಸದರನ್‌ ಸ್ಟಾರ್‌ ಹೋಟೆಲ್‌ನಲ್ಲಿ ತಂಗಿದ್ದರು. ಅಕ್ಕ-ಪಕ್ಕದ ಬಾರ್‌ ಮತ್ತು ಪಬ್‌ಗಳಿಗೆ ನಿತ್ಯ ಹೋಗುತ್ತಿದ್ದರು. ಅಲ್ಲದೇ ಆ.7ರಂದೆ ಕೊಠಡಿ ಖಾಲಿ ಮಾಡಿ ಮುಂಬೈಗೆ ಹೋಗುವ ತಯಾರಿಯಲ್ಲಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಪಾಸಣೆ ವೇಳೆ ಪತ್ತೆ
ಸಾಮಾನ್ಯವಾಗಿ ಆ.15ರಂದು ಸ್ವಾತಂತ್ಯ ದಿನಾಚರಣೆ ಪ್ರಯುಕ್ತ ನಗರಾದ್ಯಂತ ಎಲ್ಲಾ ಹೋಟೆಲ್‌ಗ‌ಳು, ಪ್ರವಾಸಿಗಳಲ್ಲಿರುವ ವಸತಿ ಗೃಹಗಳು ಹಾಗೂ ಶಂಕಾಸ್ಪದ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಇದೇ ರೀತಿ ತಮ್ಮ ವ್ಯಾಪ್ತಿಯ ಎಂ.ಜಿ.ರಸ್ತೆ, ಲ್ಯಾವೆಲ್ಲಿ ರಸ್ತೆ ಸೇರಿದಂತೆ ಕೆಲ ಹೋಟೆಲ್‌ಗ‌ಳಲ್ಲಿ ಅತಿಥಿಗಳ ಬಗ್ಗೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿತ್ತು.

ಈ ಸಂಬಂಧ ಅವರನ್ನು ವಿಚಾರಣೆ ನಡೆಸಿದಾಗ ಆರಂಭದಲ್ಲಿ ವಿವರ ನೀಡಲು ನಿರಾಕರಿಸಿದರು. ಅಲ್ಲದೇ ಜೂನ್‌ ತಿಂಗಳಿಂದ ಇದುವರೆಗೂ ಯಾವುದೇ ಕೆಲಸಕ್ಕೆ ಹೋಗದೆ ತಂಗಿರುವುದು ಅನುಮಾನಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಠಾಣೆಗೆ ಕರೆದೊಯ್ದು ವಿಚಾರಣೆ ತೀವ್ರಗೊಳಿಸಿದಾಗ ಕಳವು ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.