ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತನ ಬರ್ಬರ ಕೊಲೆ


Team Udayavani, Apr 15, 2019, 3:00 AM IST

patnige

ಬೆಂಗಳೂರು: ಪತ್ನಿ ಹಾಗೂ ಆಕೆಯ ಸಹೋದರಿ ಜತೆ ಅಸಭ್ಯವಾಗಿ ವರ್ತಿಸಿದ ಸ್ನೇಹಿತನನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಸಂಬಂಧ ದಂಪತಿಯನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.

ರಾಜಗೋಪಾಲನಗರದ ಲವಕುಶನಗರ ನಿವಾಸಿ ಮೋಹನ್‌ (30) ಹಾಗೂ ಆತನ ಪತ್ನಿ ರಮ್ಯಾ (24) ಬಂಧಿತ ದಂಪತಿ. ಆರೋಪಿಗಳು ಶನಿವಾರ ಸಂಜೆ ಹುಳಿಮಾವು ನಿವಾಸಿ, ಅವಿವಾಹಿತ ಮಧು ಎಂಬಾತನನ್ನು ರಾಡ್‌ನಿಂದ ಹೊಡೆದು ಕೊಲೆಗೈದಿದ್ದಾರೆ ಎಂದು ಪೊಲೀಸರು ಹೇಳಿದರು.

ಹಾಸನ ಜಿಲ್ಲೆ ಹೊಳೇನರಸಿಪುರ ತಾಲೂಕಿನ ಗೋಪನಹಳ್ಳಿ ಮೂಲದ ಮೋಹನ್‌ ಹಾಗೂ ಕೊಲೆಯಾದ ಮಧು ಒಂದೇ ಊರಿನವರಾಗಿದ್ದು, ಆಪ್ತ ಸ್ನೇಹಿತರು. ಅಲ್ಲದೆ ದೂರದ ಸಂಬಂಧಿ ಕೂಡ ಹೌದು.

ಕೆಲ ವರ್ಷಗಳ ಹಿಂದೆ ಇಬ್ಬರೂ ಹೊಸ ಕಾರುಗಳನ್ನು ಖರೀದಿಸಿ ಖಾಸಗಿ ಕಂಪನಿ ಜತೆ ಒಪ್ಪಂದ ಮಾಡಿಕೊಂಡು ಕಾರು ಚಾಲನೆ ಮಾಡುತ್ತಿದ್ದರು. ಈ ನಡುವೆ ಆರೇಳು ವರ್ಷಗಳ ಹಿಂದೆ ಮೋಹನ್‌, ಸಂಬಂಧಿ ರಮ್ಯಾ ಅವರನ್ನು ವಿವಾಹವಾಗಿದ್ದು, ರಾಜಗೋಪಾಲನಗರದ ಲವಕುಶನಗರದಲ್ಲಿ ದಂಪತಿ ವಾಸವಾಗಿದ್ದರು. ದಂಪತಿಗೆ ಒಂದು ಗಂಡು ಮಗು ಇದೆ.

ಸಹೋದರಿಯರಿಗೆ ಕಿರುಕುಳ, ಹಲ್ಲೆ: ಹುಳಿಮಾವುನಲ್ಲಿ ಸ್ನೇಹಿತರ ಜತೆ ವಾಸವಾಗಿದ್ದ ಮಧು, ಆಗಾಗ ಮೋಹನ್‌ ಮನೆಗೆ ಬರುತ್ತಿದ್ದ. ಮೂರು ತಿಂಗಳಿಂದ ಮಧು ವರ್ತನೆಯಲ್ಲಿ ಬದಲಾವಣೆಯಾಗಿದ್ದು, ರಮ್ಯಾ ಜತೆ ಅನುಚಿತ ವರ್ತನೆ ತೋರುತ್ತಿದ್ದ. ಪದೇ ಪದೆ ಕರೆ ಮಾಡಿ,”ನಿನ್ನ ಕಂಡರೆ ನನಗಿಷ್ಟ. ನಾನು ಕರೆದ ಕಡೆ ನೀನು ಬರಬೇಕು.

ಇಲ್ಲವಾದರೆ ನಿನ್ನ ಗಂಡನಿಗೆ ನಿನ್ನ ಬಗ್ಗೆ ಕೆಟ್ಟದಾಗಿ ಹೇಳಿ, ನಿನ್ನ ಮರ್ಯಾದೆ ತೆಗೆಯುತ್ತೇನೆ’ ಎಂದು ಬೆದರಿಸುತ್ತಿದ್ದ. ಅಷ್ಟೇ ಅಲ್ಲದೆ, ರಾಜರಾಜೇಶ್ವರಿನಗರದಲ್ಲಿದ್ದ ರಮ್ಯಾ ಸಹೋದರಿಗೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದ. ಈ ವಿಚಾರವನ್ನು ಸಹೋದರಿಯರು ತಮ್ಮ ಗಂಡಂದಿರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆ ರೀತಿ ವರ್ತಿಸದಂತೆ ಮಧುಗೆ ಮೋಹನ್‌ ದಂಪತಿ ಬುದ್ಧಿ ಹೇಳಿದ್ದರೂ, ಆತ ಚಾಳಿ ಮುಂದುವರಿಸಿದ್ದ.

20ಕ್ಕೂ ಹೆಚ್ಚು ಬಾರಿ ಹಲ್ಲೆ, ಇರಿದು ಕೊಲೆ: ಕೆಲ ದಿನಗಳ ಹಿಂದಷ್ಟೇ ರಮ್ಯಾಅವರ ಮತ್ತೂಬ್ಬ ಸಹೋದರಿ ಅರಕಲಗೂಡಿನಿಂದ ಮನೆಗೆ ಬಂದಿದ್ದರು. ಈ ಮಧ್ಯೆ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮೋಹನ್‌ ಮತ್ತು ಮಧು ರಾಜಗೋಪಾಲನಗರದ ಬಾರ್‌ವೊಂದರಲ್ಲಿ ಮದ್ಯ ಸೇವಿಸಿ, ಒಟ್ಟಿಗೆ ಮನೆಗೆ ಬಂದಿದ್ದಾರೆ.

ಕೆಲ ಹೊತ್ತಿನ ಬಳಿಕ ಮದ್ಯದ ಅಮಲಿನಲ್ಲಿ ಮಧು, ರಮ್ಯಾ ಸಹೋದರಿ ಜತೆ ಅಸಭ್ಯವಾಗಿ ವರ್ತಿಸಿದಲ್ಲದೆ, ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನು ಪ್ರಶ್ನಿಸಿದ ರಮ್ಯಾ ಮುಖಕ್ಕೆ ಗುದ್ದಿ ಗಾಯಗೊಳಿಸಿದ್ದ.

ಆಗ ಅಲ್ಲೇ ಇದ್ದ ಆರೋಪಿ ಮೋಹನ್‌, ಹಿಂದಿನಿಂದ ಮಧುನನ್ನು ಹೊಡೆಯದಂತೆ ಹಿಡಿದುಕೊಂಡಿದ್ದಾನೆ. ಘಟನೆಯಿಂದ ಆಕ್ರೋಶಗೊಂಡ ರಮ್ಯಾ, ಅಲ್ಲೇ ಇದ್ದ ಕಬ್ಬಿಣದ ರಾಡ್‌ನಿಂದ ಮಧು ತಲೆಗೆ ಸುಮಾರು 20ಕ್ಕೂ ಹೆಚ್ಚು ಬಾರಿ ಹೊಡೆದು, ಎದೆ, ಮುಖ, ಹೊಟ್ಟೆ ಭಾಗಕ್ಕೆ ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಮಧು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಮೋಹನ್‌ ಮನೆಯಲ್ಲಿ ಜೋರಾಗಿ ಗಲಾಟೆ ನಡೆಯುತ್ತಿದ್ದನ್ನು ಕೇಳಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ರಾಜಗೋಪಾಲನಗರ ಪೊಲೀಸರು, ಕೃತ್ಯ ಎಸಗಿ ಪರಾರಿಯಾಗುತ್ತಿದ್ದ ದಂಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣ ರಾಜಗೋಪಾಲನಗರ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.