ದ್ವೇಷದ ಕಿಚ್ಚು ಹೆಚ್ಚಿಸಿದ ಲಕ್ಷ್ಮಣನ ಕೊಲೆ


Team Udayavani, Mar 15, 2019, 6:15 AM IST

dveshada.jpg

ಬೆಂಗಳೂರು: ರೌಡಿ ಲಕ್ಷ್ಮಣನ ಹತ್ಯೆಯಾಗುತ್ತಿದ್ದಂತೆ ನಗರದಲ್ಲಿ ಮತ್ತೆ ರೌಡಿಗಳ ನಡುವಿನ ಪರಸ್ಪರ ದ್ವೇಷ ಚಿಗುರೊಡೆಯ ತೊಡಗಿದೆ. ಒಂದು ಕಾಲದಲ್ಲಿ ಲಕ್ಷ್ಮಣನ ಜತೆ ಗುರುತಿಸಿಕೊಂಡು ಲಕ್ಷ್ಮಣನನ್ನೇ ಹತ್ಯೆಗೈದ ರೂಪೇಶ್‌ ಮತ್ತು ತಂಡದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಲಕ್ಷ್ಮಣನ ಬೆಂಬಲಿಗರು ಪಣ ತೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, 2006ರಲ್ಲಿ ಕೊರಂಗು ಕೃಷ್ಣನ ಸಹಚರ ಮಚ್ಚ ಅಲಿಯಾಸ್‌ ಮಂಜನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲಕ್ಷ್ಮಣನ ಹತ್ಯೆಗೆ 13 ವರ್ಷಗಳಿಂದ ಕಾಯುತ್ತಿದ್ದ ಮಂಜುನ ಸಹಚರ ಹೇಮಂತ್‌ ಅಲಿಯಾಸ್‌ ಹೇಮಿ, ಲಕ್ಷ್ಮಣನನ್ನು ಕೊಂದು ಪ್ರತಿಕಾರ ತೀರಿಸಿಕೊಂಡಿದ್ದಾನೆ.

ಇದಕ್ಕೆ ಪ್ರತಿಯಾಗಿ ಇದೀಗ ಲಕ್ಷ್ಮಣನ ಪರಮಾಪ್ತ ಸಂತೋಷ್‌ ಅಲಿಯಾಸ್‌ ಆ್ಯಪಲ್‌ ಸಂತು, ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದು, ಈಗಾಗಲೇ ತನ್ನ ಸಹಚರರಿಗೆ ತಿಳಿಸಿದ್ದಾನೆ. ಮಾತ್ರವಲ್ಲ, ಲಕ್ಷ್ಮಣನ ಸಮಾಧಿ ಬಳಿ ತೆರಳಿ ಆತನ ಸಾವಿನ ಸೇಡು ತೀರಿಸಿಕೊಳ್ಳುವುದಾಗಿ ಶಪಥ ಕೂಡ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಆ್ಯಪಲ್‌ ಸಂತು ತನ್ನ ಸಹಚರರ ಜತೆ ರೂಪೇಶ್‌ ಪ್ರೇಯಸಿಯ ಸಂಬಂಧಿಕರಿಗೆ ಸೇರಿದ್ದೆನ್ನಲಾದ ತುಮಕೂರಿನಲ್ಲಿರುವ ಫಾರ್ಮ್ಹೌಸ್‌ ಧ್ವಂಸ ಮಾಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಅದನ್ನು ನಿರಾಕರಿಸಿರುವ ಸಿಸಿಬಿ ಪೊಲೀಸರು ಅಂತಹ ಯಾವುದೇ ಘಟನೆ ನಡೆದಿಲ್ಲ. ಲಕ್ಷ್ಮಣನ ಸಹಚರರ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದರು.

ಬೇನಾಮಿ ಆಸ್ತಿ ಮೇಲೆ ಕಣ್ಣು: ಹುಲಿಯೂರುದುರ್ಗ ಮೂಲದ ರಾಮ ಮತ್ತು ಲಕ್ಷ್ಮಣ ಸಹೋದರರು 30 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದರು. ಬಳಿಕ  ರೌಡಿಶೀಟರ್‌ ಮುಲಾಮನ ಜತೆ ಗುರುತಿಸಿಕೊಂಡು ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು.

ಲಕ್ಷ್ಮಣ ನೂರಾರು ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾನೆ. ಈ ಆಸ್ತಿ ಮೇಲೆ ಆತನ ವಿರೋಧಿ ಬಣ ಹಾಗೂ ಕೆಲ ರೌಡಿಗಳಿಗೆ ಕಣ್ಣಿತ್ತು. ಇದೀಗ ಲಕ್ಷ್ಮಣ ಹತ್ಯೆಯಾಗಿರುವುದರಿಂದ ಕೆಲ ರೌಡಿಗಳು ಆತನ ಬೇನಾಮಿ ಆಸ್ತಿ ಕಬಳಿಸಲು ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಇದೆ.

ಕೊಲೆಗೆ ಬಳಸಿದ್ದ ವಾಹನ ಕನಕಪುರ ಬಳಿ ಪತ್ತೆ: ಹತ್ಯೆ ನಡೆದ ದಿನ ಕುಖ್ಯಾತ ರೌಡಿ ಲಕ್ಷ್ಮಣ ಚಾಲನೆ ಮಾಡಿಕೊಂಡು ಹೋಗುತ್ತಿದ್ದª ವಾಹನವನ್ನು ಹಿಂಬಾಲಿಸಲು ಹಂತಕರು ಬಳಸಿದ್ದ ಎರಡು ಕಾರುಗಳ ಪೈಕಿ ಒಂದು ಸ್ಕಾರ್ಪಿಯೋ ವಹನವನ್ನು ಪತ್ತೆ ಹಚ್ಚುವಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ.

ಮಾ.7ರಂದು ಲಕ್ಷ್ಮಣನನ್ನು ಕೊಂದ ಬಳಿಕ ಆರೋಪಿಗಳು ಸ್ಕಾರ್ಪಿಯೋ ಮತ್ತು ಟಾಟಾ ಇಂಡಿಕಾ ಕಾರುಗಳಲ್ಲಿ ಪಾರಾರಿಯಾಗಿದ್ದರು. ಈ ಪೈಕಿ ಸ್ಕಾರ್ಪಿಯೋ ಕಾರನ್ನು ಕನಕಪುರ ತಾಲೂಕಿನ ಸಾತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಾರ್ಗಮಧ್ಯೆ ನಿಲ್ಲಿಸಿರುವ ಆರೋಪಿಗಳು, ಅಲ್ಲಿಂದ ಖಾಸಗಿ ಬಸ್‌ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದಿಂದ ಸಿಸಿಬಿ ಪೊಲೀಸರು ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಕೆಯಾಗಿದ್ದ ಟಾಟಾ ಇಂಡಿಕಾ ಕಾರು ನಗರದ ವ್ಯಾಪ್ತಿಯಲ್ಲೇ ಇದೆ ಎಂಬ ಮಾಹಿತಿಯಿದೆ. ಶೋಧ ಕಾರ್ಯ ಮುಂದುವರಿದಿದೆ. ಈ ಕಾರನ್ನು ಕ್ಯಾಟ್‌ ರಾಜ ಕೊಂಡೊಯ್ದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.