ಹಳೇ ದ್ವೇಷಕ್ಕೆ ಇಬ್ಬರು ವ್ಯಾಪಾರಿಗಳ ಕೊಲೆ


Team Udayavani, May 16, 2019, 3:02 AM IST

hale

ಬೆಂಗಳೂರು: ವೈಯಕ್ತಿಕ ದ್ವೇಷಕ್ಕೆ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಾಪಾರಿಗಳನ್ನು ಪರಿಚಯಸ್ಥರೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ನಡೆದಿದೆ.

ವೈಯಕ್ತಿಕ ದ್ವೇಷಕ್ಕೆ ಮೀನಿನ ವ್ಯಾಪಾರಿಯನ್ನು ಆರು ಮಂದಿ ದುಷ್ಕರ್ಮಿಗಳು ಆತನ ಮನೆಯಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಘಟನೆ ಡಿ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

ರೋಷನ್‌ನಗರ ನಿವಾಸಿ ಝರಾರ್‌(38) ಕೊಲೆಯಾದ ಮೀನು ವ್ಯಾಪಾರಿ. ಈ ಸಂಬಂಧ ಆತನ ಮನೆ ಸಮೀಪದಲ್ಲೇ ವಾಸವಾಗಿರುವ ಮೊಹಮ್ಮದ್‌ ಇಸಾಕ್‌, ಮೊಹಮ್ಮದ್‌ ಘೋಷ್‌, ಸಾದಿಕ್‌, ರಿಜ್ವಾನ್‌, ಸೈಯದ್‌ ಮತ್ತು ಸಲ್ಮಾನ್‌ ಬಂಧಿತರು.

ಆರೋಪಿಗಳೆಲ್ಲರೂ ಸೋದರ ಸಂಬಂಧಿಗಳಾಗಿದ್ದು, ಬುಧವಾರ ಮುಂಜಾನೆ 4.30ರ ಸುಮಾರಿಗೆ ಝರಾರ್‌ನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಪೊಲೀಸರು ಹೇಳಿದರು.

ರೋಷನ್‌ನಗರದಲ್ಲಿ ಮೀನು ವ್ಯಾಪಾರ ಮಾಡುವ ಝರಾರ್‌ಗೆ ಈ ಮೊದಲು ಆರೋಪಿ ಇಸಾಕ್‌ ಸಹೋದರಿ ಜತೆ ಸ್ನೇಹವಿತ್ತು. ಈ ವಿಚಾರ ತಿಳಿದ ಇಸಾಕ್‌ ಸಹೋದರಿಗೆ ಮತ್ತೂಮ್ಮ ಝರಾರ್‌ ಜತೆ ಮಾತನಾಡದಂತೆ ಬುದ್ದಿ ಹೇಳಿದ್ದ.

ಹೀಗಾಗಿ ಆಕೆ ಕೂಡ ಆತನಿಂದ ದೂರವಾಗಿದ್ದರು. ಅದಕ್ಕೆ ಆಕ್ರೋಶಗೊಂಡಿದ್ದ ಝರಾರ್‌, ಪ್ರತಿನಿತ್ಯ ಮದ್ಯದ ಅಮಲಿನಲ್ಲಿ ಆರೋಪಿಗಳ ಮನೆ ಮುಂದೆ ಗಲಾಟೆ ಮಾಡುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಪೊಲೀಸರು ಹೇಳಿದರು.

ಮನೆಯಲ್ಲೇ ಭೀಕರ ಹತ್ಯೆ: ಮದ್ಯದ ಅಮಲಿನಲ್ಲಿ ಝರಾರ್‌ ಮಂಗಳವಾರ ರಾತ್ರಿಯೂ ಇಸಾಕ್‌ ಮನೆ ಮುಂದೆ ಗಲಾಟೆ ಮಾಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಆತನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಸ್ಥಳೀಯರು ಇಬ್ಬರನ್ನು ಸಮಾಧಾನ ಪಡಿಸಿ ಮನೆಗೆ ಕಳುಹಿಸಿದ್ದರು.

ರಂಜಾನ್‌ ಹಬ್ಬದ ಪ್ರಯುಕ್ತ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಊಟ ಮಾಡಲು ಸ್ಥಳೀಯರು ಝರಾರ್‌ ಮನೆ ಬಾಗಿಲು ಬಡಿದು ಎದ್ದೇಳುವಂತೆ ಕೂಗಿದ್ದಾರೆ. ಆದರೆ, ಮಧ್ಯದ ಅಮಲಿನಲ್ಲಿದ್ದ ಆತ, ಇಸಾಕ್‌ ಕುಟುಂಬದರೇ ಬಾಗಿಲು ಬಡಿದ್ದಾರೆ ಎಂದು ಭಾವಿಸಿ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದರಿಂದ ಆಕ್ರೋಶಕೊಂಡ ಆರೋಪಿಗಳು ಮಾರಕಾಸ್ತ್ರಗಳನ್ನು ತಂದು ಆತನ ಮನೆಯಲ್ಲೇ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದರು.

ನಿಂಬೆಹಣ್ಣು ವ್ಯಾಪಾರಿ ಹತ್ಯೆ: ಮತ್ತೂಂದು ಪ್ರಕರಣದಲ್ಲಿ ಹಳೇ ದ್ವೇಷಕ್ಕೆ ನಿಂಬೆಹಣ್ಣು ವ್ಯಾಪಾರಿಯನ್ನು ನಾಲ್ವರು ದುಷ್ಕರ್ಮಿಗಳು ಕೆ.ಆರ್‌. ಮಾರುಕಟ್ಟೆ ಆವರಣದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಹಳೆಗುಡ್ಡದಹಳ್ಳಿ ನಿವಾಸಿ ಭರತ್‌(31) ಕೊಲೆಯಾದವ. ಕೃತ್ಯ ಎಸಗಿದ ರೌಡಿಶೀಟರ್‌ ಮಾರ್ಕೆಟ್‌ ವೇಲು ಸಂಬಂಧಿ, ಹಣ್ಣಿನ ವ್ಯಾಪಾರಿ ಶರವಣ, ಆತನ ಸಹೋದರ ವೆಂಕಟೇಶ್‌ ಹಾಗೂ ಇತರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕೆ.ಆರ್‌.ಮಾರುಕಟ್ಟೆಯ ಪೂರ್ವ ದ್ವಾರದ ಬಳಿ ಭರತ್‌ ನಿಂಬೆಹಣ್ಣು ವ್ಯಾಪಾರ ಮಾಡುತ್ತಿದ್ದು, ಅದೇ ಸ್ಥಳದಲ್ಲಿ ಶರವಣ ಹಣ್ಣಿನ ವ್ಯಾಪಾರ ಮಾಡುತ್ತಾನೆ. ಆರೇಳು ತಿಂಗಳ ಹಿಂದೆ ಭರತ್‌ ಸಂಬಂಧಿ ಮಹಿಳೆಯೊಬ್ಬರು ಹೂವಿನ ಅಂಗಡಿ ಇಡಲು ಮುಂದಾಗಿದ್ದರು. ಈ ವೇಳೆ ಮಾರ್ಕೆಟ್‌ ವೇಲು ಬಂಬಲಿಗರು ಗಲಾಟೆ ಮಾಡಿ, ಅಡ್ಡಿಪಡಿಸಿದ್ದರು. ಆಗ ಆರೋಪಿ ಶರವಣ ಮಧ್ಯಸ್ಥಿಕೆ ವಹಿಸಿ ಭರತ್‌ಗೆ ಸಹಕಾರ ನೀಡಿದ್ದ.

ಆದರೆ, ಈ ಮಧ್ಯೆ ಮೂರು ತಿಂಗಳ ಹಿಂದೆ ಏಕಾಏಕಿ ಶರವಣ, ಭರತ್‌ ಜತೆ ವೈಯಕ್ತಿಕ ವಿಚಾರಕ್ಕೆ ಜಗಳ ಮಾಡಿಕೊಂಡು, ಮಾರ್ಕೆಟ್‌ ವೇಲು ಜತೆ ಗುರುತಿಸಿಕೊಂಡಿದ್ದ. ಇದರಿಂದ ಆಕ್ರೋಶಗೊಂಡಿದ್ದ ಭರತ್‌ 15 ದಿನಗಳ ಹಿಂದೆ ಜೆ.ಜೆ.ನಗರದ ಗೋರಿಪಾಳ್ಯದಲ್ಲಿ ಶರವಣ ಮೇಲೆ ಹಲ್ಲೆ ನಡೆಸಿ,ಜೈಲು ಸೇರಿದ್ದ ಎಂದು ಪೊಲೀಸರು ಹೇಳಿದರು.

ಮಾರುಕಟ್ಟೆಯಲ್ಲೇ ಹರಿದ ನೆತ್ತರು: ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಭರತ್‌ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಮಾರುಕಟ್ಟೆಯ ಪೂರ್ವ ದ್ವಾರದ ಬಳಿ ಹೋಗುವಾಗ, ಮಾರಕಾಸ್ತ್ರಗಳನ್ನು ಹಿಡಿದು ಬಂದ ಆರೋಪಿಗಳು ಭರತ್‌ ಮೇಲೆ ಮನಸೋಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಭರತ್‌ನ ಕಿವಿ, ಎದೆ ಭಾಗಕ್ಕೆ ಗಂಭೀರವಾದ ಗಾಯಗಳಾವೆ.

ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫ‌ಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಈ ಸಂಬಂಧ ಭರತ್‌ ಸಹೋದರ ಅಪ್ಪು ಎಂಬಾತ ಶರವಣ ಮತ್ತು ಆತನ ಸಹೋದರ ವೆಂಕಟೇಶ್‌ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.