ನರ್ಮದಾ ವಿವಾದ ಇತ್ಯರ್ಥಕ್ಕೆ 13 ಪಕ್ಷಗಳ ಜತೆ ಹೆಣಗಾಡಿದ್ದೆ


Team Udayavani, Dec 24, 2017, 6:10 AM IST

23BNP-(25).jpg

ಬೆಂಗಳೂರು: “ನಾನು ಅಂದು 13 ಪಕ್ಷಗಳನ್ನು ಕಟ್ಟಿಕೊಂಡು ನರ್ಮದಾ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕೆ ದಿಟ್ಟನಿಲುವು ತೆಗೆದುಕೊಂಡಿದ್ದಕ್ಕೆ ಸರ್ದಾರ್‌ ಸರೋವರ ಯೋಜನೆ ಬಂತು. ಇಂದು ಬಿಜೆಪಿ ಸಂಸತ್ತಿನಲ್ಲಿ 286 ಸೀಟು ಹೊಂದಿದ್ದರೂ ಮಹದಾಯಿ -ಕಾವೇರಿ ಸಮಸ್ಯೆ ಯಾಕೆ ಇತ್ಯರ್ಥವಾಗುತ್ತಿಲ್ಲ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಸಪ್ನ ಬುಕ್‌ ಹೌಸ್‌ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತ ಡಾ.ಪ್ರಧಾನ್‌ ಗುರುದತ್ತ ಮತ್ತು ಡಾ.ಸಿ. ನಾಗಣ್ಣ ರಚಿಸಿದ “ಸಾಧನೆಯ ಶಿಖರಾರೋಹಣ’ ಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಅತ್ಯುನ್ನತ ಸ್ಥಾನದಲ್ಲಿರುವವರಿಗೆ ತಾರತಮ್ಯ ಮನೋಭಾವ ಇರಬಾರದು. ಯಾವೊಂದು ಸಮಸ್ಯೆ ಬಗೆಹರಿಸುವಾಗ ಪಕ್ಷಾತೀತವಾಗಿ ದೇಶದ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕೆಂದು ಸೂಕ್ಷ್ಮವಾಗಿ ಹೇಳಿದರು. ಕಾವೇರಿ ಮತ್ತು ಮಹದಾಯಿ ವಿಚಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರಕ್ಕೆ ಶಕ್ತಿ ಕೊಟ್ಟವರು ಇದೇ ಕರ್ನಾಟಕದ ಆರು ಕೋಟಿ ಜನ ಎಂಬುದನ್ನು ಮರೆಯಬಾರದು ಎಂದು ತರಾಟೆಗೆ ತೆಗೆದುಕೊಂಡರು.

ಕುರ್ಚಿ ಮುಖ್ಯವಲ್ಲ: “ಮನುಷ್ಯನಿಗೆ ಕುರ್ಚಿ ಮುಖ್ಯವಲ್ಲ; ಸಾಮಾಜಿಕ ಕಳಕಳಿ ಇರುವ ದೃಢ ನಿರ್ಣಯಗಳನ್ನು ಕೈಗೊಳ್ಳುವುದು ಮುಖ್ಯ. ಕಾವೇರಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ನಾನು ಪ್ರಧಾನಿಯಾಗಿದ್ದಾಗ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಹೊಗೇನಕಲ್‌ ಬಳಿ ಜಲಾಶಯ ನಿರ್ಮಿಸಿ, ನೀರು ಸಂಗ್ರಹಿಸೋಣ, ತಮಿಳುನಾಡಿಗೆ ತೊಂದರೆಯಾದಾಗ ನೀರು ಹರಿಸಲಾಗುವುದು ಎಂದು ಅಂದಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರಿಗೆ ಹೇಳಿದೆ. ಆದರೆ, ಅವರು ಕೇಳಲಿಲ್ಲ. ಹಾಗಾಗಿ, ಇತ್ಯರ್ಥ ಆಗಲಿಲ್ಲ ಎಂದು ಹೇಳಿದರು.

“ಸಾಧನೆಯ ಶಿಖರಾರೋಹಣ’ ಕೃತಿಗೆ ನಾನು ಒಪ್ಪಿದ್ದು ಪ್ರಚಾರಕ್ಕಲ್ಲ. ಈ ಪ್ರಚಾರದಿಂದ ನನಗೆ ಆಗಬೇಕಾದ್ದೂ ಏನಿಲ್ಲ. ಒಂದು ಸಣ್ಣ ಹಳ್ಳಿಯ ರೈತನ ಮಗ ಹೇಗೆ ಆಡಳಿತ ನಡೆಸಿದ ಎನ್ನುವುದು ಜನರಿಗೆ ತಿಳಿಯಲಿ ಎಂಬ ಕಾರಣಕ್ಕೆ ನಾನು ಸಮ್ಮತಿಸಿದೆ ಎಂದು ಹೇಳಿದರು.  ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಮಾತನಾಡಿ, ದೇವೇಗೌಡರು ಪ್ರಧಾನಿಯಾಗಿ ದೆಹಲಿಗೆ ಬಂದಾಗ ದೇಶದ ಅತ್ಯುನ್ನತ ಹುದ್ದೆಯನ್ನು ನಮ್ಮವರು ಹೇಗೆ ನಿಭಾಯಿಸುತ್ತಾರೆ ಎಂಬ ಕುತೂಹಲ ಅಲ್ಲಿದ್ದ ನಮ್ಮಂತಹ ಕನ್ನಡಿಗರಲ್ಲಿತ್ತು. ಆದರೆ, ಅವರೊಬ್ಬ ಅತ್ಯುತ್ತಮ ಆಡಳಿತಗಾರ. ಇದನ್ನು ಸ್ವತಃ ನಿರೂಪಿಸಿದರು ಎಂದು ಕೊಂಡಾಡಿದರು. ನಾಡೋಜ ಡಾ.ಹಂಪ ನಾಗರಾಜಯ್ಯ ಮಾತನಾಡಿ, ಸಾಧನೆಯ ಶಿಖರಾರೋಹಣ ಹಿಂದಿ ಮತ್ತು ಇಂಗ್ಲಿಷ್‌ನಲ್ಲೂ ಅನುವಾದ ಆಗಬೇಕು. ಆ ಮೂಲಕ ದೇಶಕ್ಕೆ ಪರಿಚಯ ಆಗಬೇಕೆಂದು ಹೇಳಿದರು. ಪ್ರಧಾನ್‌ ಗುರುದತ್ತ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದೇಶಿ ಪ್ರವಾಸಕ್ಕೆ ಆಸಕ್ತಿ ತೋರಲಿಲ್ಲ
ನಾನು ಹೆಚ್ಚು ವಿದೇಶಿ ಪ್ರವಾಸಕ್ಕೆ ಆಸಕ್ತಿ ತೋರಿಸಲಿಲ್ಲ. ಬದಲಿಗೆ ನನ್ನ ನಾಡಿನ ಸಮಸ್ಯೆಗಳನ್ನು ಬಗೆಹರಿಸುವುದು ನನಗೆ ಆದ್ಯತೆಯಾಗಿತ್ತು. ಆಕಸ್ಮಿಕವಾಗಿ ಪ್ರಧಾನಿಯಾದ ನನ್ನ ಮುಂದೆ ಅನೇಕ ಸವಾಲುಗಳಿದ್ದವು. ತೈಲ ಪೂರೈಸಿದ ಅರಬ್‌ ದೇಶಗಳಿಗೆ 17,800 ಕೋಟಿ ರೂ. ಬಾಕಿ ಪಾವತಿ, ಜಮ್ಮು-ಕಾಶ್ಮೀರ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳು ಇದ್ದವು. ಆದರೆ, ಅವುಗಳನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ದೇವೇಗೌಡರು ಸ್ಮರಿಸಿದರು.

ಬೆಳವಣಿಗೆಗೆ ಪತ್ನಿ ಸಾಥ್‌
“ನನ್ನ ಬೆಳವಣಿಗೆಗೆ ಪತ್ನಿ ಚೆನ್ನಮ್ಮ ಕಾರಣ. ಅವಳ ಸಹಕಾರ ಇಲ್ಲದಿದ್ದರೆ, ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಿರಲಿಲ್ಲ’ ಎಂದು ದೇವೇಗೌಡರು ಬಣ್ಣಿಸಿದರು. ನನಗೆ ನಾಲ್ಕು ಮಕ್ಕಳು. ಇದರಲ್ಲಿ ಇಬ್ಬರು ಗಂಡುಮಕ್ಕಳು ಮತ್ತು ಇಬ್ಬರು ಹೆಣ್ಣುಮಕ್ಕಳು. “ನನ್ನ ಮಕ್ಕಳಿಗೆ ಏನು ಮಾಡಿದೆ’ ಎಂದು ಯಾವತ್ತೂ ಪತ್ನಿ ಚೆನ್ನಮ್ಮ ಕೇಳಲಿಲ್ಲ. ನನ್ನ ಬೆಳವಣಿಗೆಗೆ ಬೆನ್ನೆಲುಬಾಗಿ ನಿಂತಳು’ ಎಂದು ಸ್ಮರಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.