ದೇಶಪ್ರೇಮ ಬೆಳೆಸುವ ಪ್ರಬುದ್ಧ ಸಾಹಿತ್ಯ ಅಗತ್ಯ


Team Udayavani, May 21, 2018, 11:30 AM IST

deshsprema.jpg

ಬೆಂಗಳೂರು: ಪ್ರಮೋದ ಸಾಹಿತ್ಯಕ್ಕಿಂತ ಸ್ವಾರ್ಥವನ್ನು ತ್ಯಾಗ ಮಾಡಿ, ದೇಶ ಪ್ರೇಮ ಬೆಳೆಸುವಂತಹ ಪ್ರಬುದ್ಧ ಸಾಹಿತ್ಯದ ಅವಶ್ಯಕತೆ ಪ್ರಸ್ತುತ ದಿನಗಳಲ್ಲಿ ಹೆಚ್ಚಿದೆ ಎಂದು ಹಿರಿಯ ಸಾಹಿತಿ ಪೊ›.ಜಿ. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಚಾಮರಾಜಪೇಟೆ ಕಸಾಪ ಆವರಣ ಕುವೆಂಪು ಸಭಾಂಗಣದಲ್ಲಿ ಭಾನುವಾರ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅನಿಕೇತನ ಕನ್ನಡ ಬಳಗ ಹಾಗೂ ಪರಸ್ಪರ ಸ್ನೇಹ ಬಳಗ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನಾಚರಣೆ ಹಾಗೂ ಬಾಬು ಕೃಷ್ಣಮೂರ್ತಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಮನೋರಂಜನೆಯ ಸಾಹಿತ್ಯ ರಚಿಸುತ್ತಿರುವವರ ನಡುವೆ ಬಾಬು ಕೃಷ್ಣಮೂರ್ತಿ ಅವರು ತಮ್ಮ ಸಾಹಿತ್ಯ ಮೂಲಕ ದೇಶ ಮತ್ತು ನಾಡಿನ ಕುರಿತು ಅಭಿಮಾನ ಮೂಡಿಸುವ ಸಾಹಿತ್ಯವನ್ನು ರಚಿಸುತ್ತಿದ್ದಾರೆ. ಸಂಶೋಧನಾ ಸಾಹಿತ್ಯ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ದೇಶಭಕ್ತರ ಚರಿತ್ರೆಗಳನ್ನು ಸಂಶೋಧನೆ ಹಾಗೂ ಅನ್ವೇಷಣೆ ಮಾಡುವ ಮೂಲಕ ಸಂಶೋಧನಾ ಸಾಹಿತ್ಯದತ್ತ ಓದುಗರ ಒಲವನ್ನು ತಿರುಗಿಸಿದ ಮಹನೀಯ ಎಂದು ಹೇಳಿದರು.

ಬಾಲ್ಯದಿಂದಲೇ ಸಾಹಿತ್ಯ ಒಲವನ್ನು ಇಟ್ಟುಕೊಂಡಿದ್ದ ಬಾಬು ಕೃಷ್ಣಮೂರ್ತಿ ಸಂಶೋಧನಾ ಸಾಹಿತ್ಯದ ಜತೆಗೆ ಮಕ್ಕಳ ಸಾಹಿತ್ಯ, ಚಲನಚಿತ್ರ ಸಾಹಿತ್ಯ, ಪತ್ರಿಕೋದ್ಯಮ ಬರಹ ಮೂಲಕ ಅನೇಕರ ಬದುಕಿಗೆ ಮಾರ್ಗದರ್ಶನ ಹಾಗೂ ಪ್ರೇರಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ತಮ್ಮ ಹೋರಾಟದ ಕತೆಯನ್ನು ತೆರೆದಿಡುವ ಆತ್ಮಕಥೆ ಬರೆಯುವ ಮೂಲಕ ದೇಶಭಕ್ತಿ ಕುರಿತು ಸಾಹಿತ್ಯ ರಚಿಸುವವರಿಗೆ ಮಾರ್ಗದರ್ಶ ಮಾಡಬೇಕು ಎಂದು ಒತ್ತಾಯಿಸಿದರು.

ಅಭಿನಂದನೆ ಸ್ವೀಕರಿಸಿ ಹಿರಿಯ ಸಾಹಿತಿ ಬಾಬು ಕೃಷ್ಣಮೂರ್ತಿ ಮಾತನಾಡಿ, ಸರ್‌.ಎಂ.ವಿಶ್ವೇಶ್ವರಯ್ಯ, ಎಚ್‌.ವಿ.ನಂಜುಂಡಯ್ಯ, ಡಿವಿಜಿ, ಆಲೂರು ವೆಂಕಟರಾಯರಂತಹ ಅನೇಕ ಮಹನೀಯರ ಹೋರಾಟ ಹಾಗೂ ಕಳಕಳಿಯ ಪ್ರತಿಫ‌ಲವೇ ಕಸಾಪ ಆಗಿದೆ. ಅಂದು ನಿರ್ಮಾಣ ಖರ್ಚಿಗೆ ದಾನ ದತ್ತಿಗಳು ಸಾಲದೇ ಸಾಹಿತಿಗಳು ತಮ್ಮ ಕೈಯಿಂದ ಹಣ ಹಾಕಿ ಕಟ್ಟಡ ಕಟ್ಟಿದರು. ಆ ಕಾಲಕ್ಕೆ ಕಸಾಪ ಒಂದು ಜನಜಾಗೃತಿ ಮೂಡಿಸುವ ಹಾಗೂ ನಾಡಿಗಾಗಿ ಹೋರಾಟ ನಡೆಸುವವರ ಶಕ್ತಿ ಕೇಂದ್ರವಾಗಿತ್ತು ಎಂದರು.    

ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ಮಾತನಾಡಿ, ಬಾಬು ಕೃಷ್ಣಮೂರ್ತಿ ಅವರು ಮಹಾನ್‌ ದೇಶ ಭಕ್ತರಾಗಿದ್ದು ತಮ್ಮ ಸಾಹಿತ್ಯದ ಮೂಲಕ ಇಂದಿನ ಯುವಜನತೆಯಲ್ಲಿ ಸ್ವಾಭಿಮಾನ ಹಾಗೂ ರಾಷ್ಟ್ರಾಭಿಮಾನವನ್ನು ಭಿತ್ತುತ್ತಿದ್ದಾರೆ. ಇನ್ನು ಕಳೆದ 40ಕ್ಕೂ ಹೆಚ್ಚು ವರ್ಷಗಳಿಂದ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಕೆ.ಎನ್‌.ಭಗವಾನ್‌ ಹಾಗೂ ಚಿತ್ರಕಲೆಯ ಮೂಲಕ ಸಾಧನೆ ಮಾಡಿದ ಡಾ.ಬಿ.ಕೆ.ಎಸ್‌.ವರ್ಮಾರಂತಹ ದಿಗ್ಗಜರನ್ನು ಗುರುತಿಸಿ ಅಭಿವಂದಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಲೇಖಕ ಕೆ.ಎನ್‌.ಭಗವಾನ್‌ ಮತ್ತು ಚಿತ್ರಕಲಾವಿದ ಡಾ.ಬಿ.ಕೆ.ಎಸ್‌. ವರ್ಮಾ ಅವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಅಧ್ಯಕ್ಷ ಎಂ.ತಿಮ್ಮಯ್ಯ, ನಗರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ಶೃಂಗೇಶ್ವರ ಹಾಗೂ ಅಂಜನ್‌ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.