ಬರಲಿದೆ ಹೊಸ ಪೀಳಿಗೆ ಬ್ರಹ್ಮೋಸ್‌


Team Udayavani, Feb 23, 2019, 6:24 AM IST

baralide.jpg

ಬೆಂಗಳೂರು: ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಶಕ್ತಿಯಾಗಿರುವ ಬ್ರಹ್ಮೋಸ್‌ ಕ್ಷಿಪಣಿಯನ್ನು ಹೊಸ ಪೀಳಿಗೆಗೆ ಅನುಗುಣವಾಗಿ ಉನ್ನತೀಕರಿಸಲು ಬ್ರಹ್ಮೋಸ್‌ ಏರೋಸ್ಪೇಸ್‌ ಮುಂದಾಗಿದೆ. ಭಾರತೀಯ ಭೂಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆಗೆ ಉಪಯೋಗವಾಗುವ ಮತ್ತು ಸಮುದ್ರ, ಭೂ ಪ್ರದೇಶದಲ್ಲಿರುವ ಶತ್ರುಗಳನ್ನು ಹೊಡೆದುರುಳಿಸಲು ಬ್ರಹ್ಮೋಸ್‌ ಸಹಕಾರಿಯಾಗಲಿದೆ.

ಅತ್ಯಂತ ನಿಖರ ಹಾಗೂ ವೇಗವಾಗಿ ಗುರಿ ತಲುಪಬಲ್ಲ ಬ್ರಹ್ಮೋಸ್‌ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಬ್ರಹ್ಮೋಸ್‌ ಏರೋಸ್ಪೇಸ್‌ ಚಿಂತನೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ  “ಬ್ರಹ್ಮೋಸ್‌ ನ್ಯೂ ಜನರೆಷನ್‌’  ಸಿದ್ಧಪಡಿಸಲು ಬೇಕಾದ ತಯಾರಿ ನಡೆಸುತ್ತಿದ್ದಾರೆ. ಈಗ ಭೂ ಮತ್ತು ನೌಕಾ ಸೇನೆಯಲ್ಲಿ ಬಳಸುತ್ತಿರುವ ಬ್ರಹ್ಮೋಸ್‌ 290 ಕಿ.ಮೀ.ವರಗೂ ಸಾಗಲಿದೆ.

ವೇಗವು ಪ್ರತಿ ಸೆಕೆಂಡ್‌ಗೆ 1 ಕಿ.ಮೀ ಆಗಿರತ್ತದೆ. 200ರಿಂದ 300 ಕೆ.ಜಿ. ಶಸ್ತ್ರಾಸ್ತ್ರ ಹೊಂದಿರುತ್ತದೆ. 9 ಸಾವಿರ ಮಿಲಿ ಮೀಟರ್‌ ಹಾಗೂ 700 ಮಿಲಿ ಮೀಟರ್‌ ಉದ್ದ ಮತ್ತು ಅಗಲ ಇರಲಿದ್ದು, 3 ಸಾವಿರ ಕೆ.ಜಿ ತೂಕ ಹೊಂದಿದೆ. ಹಾಗೇ ವಾಯು ಸೇನೆಗೆ ಬಳಸುವ ಬ್ರಹ್ಮೋಸ್‌ 290 ಕಿ.ಮೀ ಕ್ರಮಿಸಬಲ್ಲದ್ದಾಗಿದೆ. ವೇಗವು ಪ್ರತಿ ಸೆಕೆಂಡ್‌ಗೆ 1 ಕಿ.ಮೀ ಇರುತ್ತದೆ.

8500 ಮಿ.ಮೀ ಹಾಗೂ 650 ಮಿ.ಮೀ ಉದ್ದ ಮತ್ತು ಅಗಲ ಇರುತ್ತದೆ. 2550 ಕೆ.ಜಿ ತೂಕ ಹೊಂದಿದೆ. ಭೂ ಮತ್ತು ನೌಕಸೇನೆಯ ಬ್ರಹ್ಮೋಸ್‌ ಮಿಸೈಲ್‌ಗೆ ಹೋಲಿಸಿದರೆ, ವಾಯುಸೇನೆಗೆ ಬಳಸಲು ಬ್ರಹ್ಮೋಸ್‌ ಮಿಸೈಲ್‌ನ ತೂಕವು ಸ್ವಲ್ಪ ಕಡಿಮೆ ಇರುತ್ತದೆ.

ಬ್ರಹ್ಮೋಸ್‌ ನ್ಯೂ ಜನರೇಷನ್‌ ಮಿಸೈಲ್‌ ಕೇವಲ 1.6 ಮೀಟರ್‌ ಇರಲಿದ್ದು, ಸುಲಭವಾಗಿ ಕೊಂಡೊಯ್ಯಲು ಇದು ಸಹಕಾರಿಯಾಗಲಿದೆ. ವೇಗವೂ ಕೂಡ ಹೆಚ್ಚಾಗಲಿದೆ. ಪ್ರತಿ ಸೆಕೆಂಡ್‌ಗೆ 1.4 ಕಿ.ಮೀ ವೇಗದಲ್ಲಿ ಕ್ರಮಿಸಲಿದೆ. ಈಗ ಇರುವ ಬ್ರಹ್ಮೋಸ್‌ ಮಿಸೈಲ್‌ 3 ಸಾವಿರ ಕೆ.ಜಿ ಇದ್ದು, ಹೊಸ ಮಿಸೈಲ್‌ ತೂಕ ಒಂದೂವರೆ ಸಾವಿರ ಕೆ.ಜಿ.ಗೆ ಇಳಿಯಲಿದೆ.

ಶಸ್ತ್ರಾಸ್ತ್ರ ಸಾಮರ್ಥ್ಯ ಇನ್ನಷ್ಟು ಉನ್ನತೀಕರಿಸಿ, ಹೆಚ್ಚು ಬಲ ತುಂಬಲಿದ್ದೇವೆ. ಉತ್ಪಾದನಾ ಪ್ರಕ್ರಿಯೆ ಆರಂಭವಾದರೆ ಪೂರ್ಣಗೊಳ್ಳಲು ಕನಿಷ್ಠ ಮೂರು ವರ್ಷ ಬೇಕಾಗುತ್ತದೆ ಎಂದು ಬ್ರಹ್ಮೋಸ್‌ ಏರೋಸ್ಪೇಸ್‌ ಮಾರುಕಟ್ಟೆ ವಿಭಾಗದ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್‌ ಪಾಠಕ್‌ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರವು ನೀಡುವ ಆದೇಶ ಹಾಗೂ ಬೇಡಿಕೆಗೆ ಅನುಗುಣವಾಗಿ ಮಿಸೈಲ್‌ ಸಿದ್ಧಪಡಿಸುತ್ತೇವೆ. ಕೇಂದ್ರ ಸರ್ಕಾರ ಒಪ್ಪಿಗೆ ಪಡೆದು, ಮಿತ್ರ ರಾಷ್ಟ್ರಗಳಿಗೂ ರಫ್ತು ಮಾಡುವ ವ್ಯವಸ್ಥೆ ಇದೆ. ಆದರೆ, ಇದರ ಅಂತಿಮ ನಿರ್ಧಾರವನ್ನು ಸರ್ಕಾರವೇ ತೆಗೆದುಕೊಳ್ಳಬೇಕು. ದೇಶದ ರಕ್ಷಣಾ ವ್ಯವಸ್ಥೆ ಎಷ್ಟು ಅಗತ್ಯವಿದೆಯೋ ಅಷ್ಟನ್ನು ಉತ್ಪಾದಿಸಿ ನೀಡುತ್ತೇವೆ. ಮಧ್ಯ ಏಷ್ಯಾ, ದಕ್ಷಿಣ ಆಫ್ರಿಕಾ ಮೊದಲಾದ ಕಡೆಗಳಲ್ಲಿ ನಮ್ಮ ಮಿತ್ರ ರಾಷ್ಟ್ರಗಳು ಇವೆ ಎಂದರು ಹೇಳಿದರು.

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.