ಓಕಳಿಪುರಕಾರಿಡಾರ್ ಪೂರ್ಣಕ್ಕೆ ಬೇಕು 1ವರ್ಷ
Team Udayavani, Sep 29, 2020, 11:17 AM IST
ಬೆಂಗಳೂರು: ಓಕಳಿಪುರ ಜಂಕ್ಷನ್ನ ಅಷ್ಟಪಥ ಕಾರಿಡಾರ್ ಉದ್ದೇಶಿತ ಯೋಜನೆಯಲ್ಲಿ ಹಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ ಒಂದು ವರ್ಷಬೇಕು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ಗುಪ್ತ ಆಯುಕ್ತ ಮಂಜುನಾಥ ಪ್ರಸಾದ್ ಹಾಗೂ ಬಿಬಿಎಂಪಿ ಯೋಜನಾ ವಿಭಾಗದಅಧಿಕಾರಿಗಳು ಬಾಕಿ ಉಳಿದ ಮೂರು ಪಥಗಳ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ರೈಲ್ವೆ ಇಲಾಖೆಯ ಅಧಿಕಾರಿಗಳು ಗೌರವ್ ಗುಪ್ತಾ ಅವರಿಗೆ ವಿವರಣೆ ನೀಡಿದರು.
ಬೆಂಗಳೂರು- ತುಮಕೂರು ಮಾರ್ಗದ ಕೆಳಸೇತುವೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ. ಆದರೆ, ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದ ಕೆಳಸೇತುವೆಕಾಮಗಾರಿಗೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ತ್ಯಾಜ್ಯ ನೀರು ಕೊಳವೆ ಅಳವಡಿಕೆ ಹಾಗೂ ಕೆಪಿಟಿಸಿಎಲ್ನ ಕೇಬಲ್ಲೈನ್ ಸ್ಥಳಾಂತರ ಕಾಮಗಾರಿ ಪೂರ್ಣಗೊಳ್ಳಬೇಕಾಗಿದ್ದು, ನಂತರ ಕೆಳ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಬೇಕಿದೆ. ಹೀಗಾಗಿ, ಕಾಮಗಾರಿ ಮುಗಿಯಲು ಕನಿಷ್ಠ ಒಂದು ವರ್ಷ ಕಾಲಾವಕಾಶ (ಸೆಪ್ಟೆಂಬರ್- 2021) ಬೇಕಾಗಿಲಿದೆ ಎಂದು ಮಾಹಿತಿ ನೀಡಿದರು.
ರೈಲ್ವೆನಿಲ್ದಾಣದ ತ್ಯಾಜ್ಯನೀರು ಕೊಳವೆ ಅಳವಡಿಕೆ ಹಾಗೂ ಕೆಪಿಟಿಸಿಎಲ್ ಕೇಬಲ್ ಸ್ಥಳಾಂತರ ಕಾಮ ಗಾರಿ ಬಗ್ಗೆ ಜಲಮಂಡಳಿ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತ್ವರಿತವಾಗಿ ಕಾಮಗಾರಿ ಮುಗಿಸಿ, ರೈಲ್ವೆ ಇಲಾಖೆಗೆ ಅನುವು ಮಾಡಿಕೊಡುವಂತೆ ಗೌರವ್ ಗುಪ್ತಾಅಧಿಕಾರಿಗಳಿಗೆ ತಾಕೀತು ಮಾಡಿದರು.
2014ರಲ್ಲಿ ಚಾಲನೆ ನೀಡಲಾಗಿದ್ದ ಯೋಜನೆ: ಬಿಬಿಎಂಪಿಯು 2014ರಲ್ಲಿ ರೈಲ್ವೆ ಇಲಾಖೆಯ ಸಹಯೋಗದಲ್ಲಿ 103 ಕೋಟಿ ರೂ. ವೆಚ್ಚದಲ್ಲಿ ಓಕಳ್ಳಿಪುರ ಜಂಕ್ಷನ್ನಲ್ಲಿ ಅಷ್ಟಪಥ ಕಾರಿಡಾರ್ ಯೋಜನೆಗೆ ಚಾಲನೆ ನೀಡಿತ್ತು. ಆದರೆ, ಕಳೆದ ಆರು ವರ್ಷಗಳಿಂದ ಈ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ಬೆಂಗಳೂರು- ತುಮಕೂರು ರೈಲ್ವೆ ಮಾರ್ಗದಲ್ಲಿ ಇನ್ನೊಂದು ಪಥ ಹಾಗೂ ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದಲ್ಲಿ ಎರಡು ಪಥದ ಕಾಮಗಾರಿ ಮಾತ್ರ ಬಾಕಿಉಳಿದಿದ್ದು, ಇನ್ನುಳಿದ ಕಾಮಗಾರಿ ಪೂರ್ಣಗೊಂಡು ಸಂಚಾರ ಮುಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ